ಅಮರಾವತಿ ಸ್ಟೇಷನ್ನಲ್ಲಿ ಗುರುರಾಜ್
Team Udayavani, Nov 27, 2022, 3:00 PM IST
ನಟ ಜಗ್ಗೇಶ್ ಪುತ್ರ ಗುರುರಾಜ್ ನಾಯಕರಾಗಿ ನಟಿಸುತ್ತಿರುವ “ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.
ಮೊದಲ ದೃಶ್ಯಕ್ಕೆ ನಟ ಜಗ್ಗೇಶ್ ಅವರು ಕ್ಲಾಪ್ ಮಾಡಿ ಚಿತ್ರರಂಗಕ್ಕೆ ಶುಭ ಕೋರಿದರು. ಅರಸೀಕೆರೆಯ ಪುನೀತ್ ಈ ಚಿತ್ರದ ನಿರ್ದೇಶಕರು. ಅಂಜನರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರೇಖಾಶ್ರೀ ಚಿತ್ರದ ನಾಯಕಿ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಚಿತ್ರವಾಗಿದ್ದು, ಪೊಲೀಸ್ ಸ್ಟೇಷನ್ ಸುತ್ತಮುತ್ತ ನಡೆಯುವ ಘಟನೆಗಳು ಚಿತ್ರದ ಪ್ರಮುಖ ಆಂಶಗಳಾಗಿವೆ.
ನಾಯಕ ಗುರುರಾಜ್ ಮಾತನಾಡುತ್ತಾ, “ಪುನೀತ್ ಕಳೆದ 3 ವರ್ಷಗಳಿಂದ ಈ ಕಥೆ ರೆಡಿ ಮಾಡಿಕೊಂಡಿದ್ದಾರೆ. ಒಂದು ಇಂಟರೆಸ್ಟಿಂಗ್ ಕಥೆ ಇಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದಾರೆ. ಈ ಕಥೆ ಕೇಳಿದ ತಕ್ಷಣ ಮಾಡಬೇಕು ಎನಿಸಿತು’ ಎಂದು ಹೇಳಿದರು.
ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಯೋಜನೆ ಚಿತ್ರ ತಂಡಕ್ಕಿದೆ. ನಟಿ ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ಉಳಿದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ