ಅಂಬಿ ಪಾರ್ಥಿವ ಶರೀರದ ಅಂತಿಮ ಯಾತ್ರೆ, ಪೊಲೀಸ್ ಬಂದೋಬಸ್ತ್; Watch
Team Udayavani, Nov 26, 2018, 1:05 PM IST
ಬೆಂಗಳೂರು: ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ (66ವರ್ಷ) ಪಾರ್ಥಿವ ಶರೀರದ ಅಂತಿಮ ಯಾತ್ರೆಯು ಹೂವಿಗಳಿಂದ ಅಲಂಕೃತಗೊಂಡ ವಿಶೇಷ ವಾಹನದಲ್ಲಿ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಆರಂಭಗೊಂಡಿದೆ.
ವಾಹನಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂತಿಮ ಯಾತ್ರೆ ಶುರುವಾಗಿತ್ತು. ಯಾತ್ರೆ ಕ್ರೀಡಾಂಗಣ ದಾಟಿದ ಕೂಡಲೇ ನೆರೆದಿದ್ದ ಅಭಿಮಾನಿಗಳು ಅಂಬಿ ಎಂದು ಉದ್ಘೋಷ ಮಾಡಿದರು.
ಯಾತ್ರೆಯ ಹಿಂಭಾಗದಲ್ಲಿ ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ನ ನಟ, ನಟಿಯರು ತೆರೆದ ವಾಹನದಲ್ಲಿ ಅಭಿಮಾನಿಗಳಿಗೆ ವಂದಿಸುತ್ತಾ ಸಾಗುತ್ತಿದ್ದಾರೆ. ಮೆರವಣಿಗೆ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳು, ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸುತ್ತಿದ್ದಾರೆ.
ಸಿಐಡಿ ಜಂಕ್ಷನ್, ಬಸವೇಶ್ವರ್ ಸರ್ಕಲ್, ಯಶವಂತಪುರ ಫ್ಲೈ ಓವರ್ ನಿಂದ ಗೋರಗುಂಟೆ ಪಾಳ್ಯ, ಆರ್ ಎಂಸಿ ಯಾರ್ಡ್ ಠಾಣೆ , ಎಫ್ ಟಿಐನಿಂದ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಸಾಗಿ ಬರಲಿದೆ.
ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಸಾಗುವ ರಸ್ತೆ ಹಾಗೂ ಇತರೆಡೆ 4 ಹೆಚ್ಚುವರಿ ಪೊಲೀಸ್ ಆಯುಕ್ತರು,3 ಆರ್ ಎಎಫ್, 30 ಕೆಎಸ್ ಆರ್ ಪಿ ಸೇರಿದಂತೆ 5 ಡಿಸಿಪಿಗಳ ನೇತೃತ್ವದಲ್ಲಿ ಹನ್ನೊಂದು ಸಾವಿರ ಪೊಲೀಸರನ್ನು ಬಿಗಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಅಂತಿಮ ಯಾತ್ರೆಯಲ್ಲಿ ದರ್ಶನ್, ಅರ್ಜುನ್ ಸರ್ಜಾ, ರವಿಶಂಕರ್, ಧೃವ ಸರ್ಜಾ ಸೇರಿದಂತೆ ಹಲವು ನಟ, ನಟಿಯರು ಮೆರವಣಿಗೆಗೆ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ