ಮಿಸ್ ಯೂ ಅಂಬಿ…ಹತ್ತು ದಿನದ ಮೊದಲೇ ದಿ.ಅಂಬರೀಶ್ ಪ್ರಥಮ ವರ್ಷದ ಪುಣ್ಯತಿಥಿ


Team Udayavani, Nov 15, 2019, 1:43 PM IST

Ambareesh-Death-Anniversary

ಬೆಂಗಳೂರು:ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್, ಮಾಜಿ ಸಚಿವ ದಿ.ಅಂಬರೀಶ್ ಅವರ ಪ್ರಥಮ ವರ್ಷದ ಪುಣ್ಯತಿಥಿ ಗುರುವಾರ ನಡೆಯಿತು. ಪತ್ನಿ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಹಾಗೂ ಕುಟುಂಬಸ್ಥರು ಅಂಬಿ ಸಮಾಧಿಗೆ ಭೇಟಿ ನೀಡಿ ವರ್ಷದ ಪುಣ್ಯ ತಿಥಿ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ರೆಬೆಲ್ ಸ್ಟಾರ್ ಅಭಿಮಾನಿಗಳು, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಹಲವಾರು ಗಣ್ಯರು ಅಂಬಿ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಅಂಬರೀಶ್ ಅವರಿಗೆ ತುಂಬಾ ಪ್ರಿಯವಾದ ಬಿರಿಯಾನಿ, ಕೀರು, ಉಪ್ಪಿಟ್ಟು ಇಟ್ಟು ಪೂಜೆ ನೆರವೇರಿಸಿದ್ದರು. ಅಂಬರೀಶ್ ಅಗಲಿಕೆ ನೆನಸಿಕೊಂಡು ಸುಮಲತಾ ಅವರು ಕಣ್ಣೀರು ಹಾಕಿದರು. ಅವರನ್ನು ನಾನೊಬ್ಬಳೇ ಅಲ್ಲ ಚಿತ್ರರಂಗದವರು, ಗೆಳೆಯರು, ಅಭಿಮಾನಿಗಳೂ ಕೂಡಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಕಿಡ್ನಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಅಂಬರೀಶ್ ಅವರು 2018ರ ನವೆಂಬರ್ 24ರಂದು ರಾತ್ರಿ ವಿಧಿವಶರಾಗಿದ್ದರು. ನಿನ್ನೆ ನಗರದ ಅರಮನೆ ಮೈದಾನದಲ್ಲಿ ಅಂಬಿ ಪುಣ್ಯ ತಿಥಿ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಭೋಜನ ಕೂಟ ಏರ್ಪಡಿಸಲಾಗಿತ್ತು.

ಹತ್ತು ದಿನದ ಮೊದಲೇ ಪುಣ್ಯ ತಿಥಿ:

ಕಳೆದ ವರ್ಷ ನವೆಂಬರ್ 24ರಂದು ರೆಬೆಲ್ ಸ್ಟಾರ್ ಅಂಬರೀಶ್ ಅವರು ನಿಧನರಾಗಿದ್ದು. ಅಂಬಿ ಅವರು ನಿಧನರಾಗಿ ಸೆ.24ಕ್ಕೆ ಒಂದು ವರ್ಷವಾಗುತ್ತದೆ. ಆದರೆ ಹತ್ತು ದಿನಗಳ ಮೊದಲೇ ಪುಣ್ಯತಿಥಿ ಆಚರಿಸಿದ್ದೇಕೆ ಎಂಬ ಬಗ್ಗೆ ಸ್ವತಃ ಪತ್ನಿ ಸುಮಲತಾ ಅಂಬರೀಶ್ ಅವರು ನೀಡಿರುವ ವಿವರಣೆ ಹೀಗಿದೆ… ವರ್ಷ ತುಂಬುವುದರೊಳಗೆ ಪುಣ್ಯ ತಿಥಿ ಮಾಡಬೇಕು ಎಂಬ ಹಿನ್ನೆಲೆಯಲ್ಲಿ ಮತ್ತು ಅಂಬರೀಶ್ ಅವರ ಜನ್ಮ ನಕ್ಷತ್ರದ ಪ್ರಕಾರ 10 ದಿನಗಳ ಮೊದಲೇ ಪುಣ್ಯತಿಥಿ ಕಾರ್ಯ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಮಾರಕ ನಿರ್ಮಾಣ ವಿಳಂಬ:

ನಟ ದಿ.ಅಂಬರೀಶ್ ಅವರ ಸ್ಮಾರಕ ಕಾರ್ಯ ನಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ ರಾಜ್ಯ ಸರ್ಕಾರ ಬದಲಾದ ಕಾರಣ ಸ್ಮಾರಕ ನಿರ್ಮಾಣ ಕೆಲಸ ವಿಳಂಬವಾಗುತ್ತಿದೆ. ಈ ಬಗ್ಗೆ ಫಿಲ್ಮ್ ಚೇಂಬರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದೇವೆ ಎಂದು ಸುಮಲತಾ ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.