- Saturday 14 Dec 2019
ಅಂಬರೀಶ್ ಮೊದಲ ತಿಂಗಳ ಪುಣ್ಯತಿಥಿ
Team Udayavani, Dec 22, 2018, 11:25 AM IST
ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ಅವರು ಅಗಲಿ ನವೆಂಂಬರ್ 24ಕ್ಕೆ ಒಂದು ತಿಂಗಳು. ಚಿತ್ರರಂಗದ ಮಂದಿ ಹಾಗೂ ಅವರ ಅಪ್ಪಟ ಅಭಿಮಾನಿಗಳು ಅಂಬರೀಶ್ ಎಲ್ಲೂ ಹೋಗಿಲ್ಲ, ನಮ್ಮ ಜೊತೆಯೇ ಇದ್ದಾರೆ ಎಂಬ ಭಾವನೆಯೊಂದಿಗೆ ದಿನ ಕಳೆಯುತ್ತಿದ್ದಾರೆ.
ನಿತ್ಯವೂ ನೂರಾರು ಜನ ಅಂಬರೀಶ್ ಅವರ ಅಂತ್ಯಕ್ರಿಯೆ ಸ್ಥಳಕ್ಕೆ ತೆರಳಿ, ಪುಷ್ಪ ನಮನ ಸಲ್ಲಿಸುತ್ತಿದ್ದಾರೆ. ಶುಕ್ರವಾರ ಅಂಬರೀಶ್ ಅವರ ಮೊದಲ ತಿಂಗಳ ಪುಣ್ಯತಿಥಿಯನ್ನು ಆಚರಿಸಲಾಯಿತು. ಅಂಬರೀಶ್ ಅವರ ನಿವಾಸದಲ್ಲಿ ಬೆಳಗ್ಗೆ ಸುಮಲತಾ ಅಂಬರೀಶ್ ಹಾಗೂ ಪುತ್ರ ಅಭಿಷೇಕ್ ಅವರು ಅಂಬರೀಶ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಿಂಗಳ ಮೊದಲ ಪುಣ್ಯತಿಥಿ ಆಚರಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಕುಟುಂಬ ವರ್ಗ, ಅಪಾರ ಅಭಿಮಾನಿಗಳೊಂದಿಗೆ ಮೊದಲ ತಿಂಗಳ ಪುಣ್ಯತಿಥಿ ಆಚರಿಸಿತು. ಬೆಳಗ್ಗೆ 9 ಗಂಟೆ ಸುಮಾರಿಗೆ ಕಂಠೀರವ ಸ್ಟುಡಿಯೋಗೆ ಆಗಮಿಸಿದ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರು,
ವಿವಿಧ ಪುಷ್ಪಗಳಿಂದ ಅಲಂಕರಿಸಿದ್ದ ಅಂಬರೀಶ್ ಅವರ ಭಾವಚಿತ್ರ ಹಾಗೂ ಸಮಾಧಿಗೆ ಪೂಜೆ ಸಲ್ಲಿಸಿದರು. ನಂತರ, ಅಲ್ಲಿಗೆ ಆಗಮಿಸಿದ್ದ ಅಭಿಮಾನಿಗಳಿಗೆ ಸಿಹಿ ವಿತರಿಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕಲಾವಿದ ದೊಡ್ಡಣ್ಣ ಸೇರಿದಂತೆ ಚಿತ್ರರಂಗದ ಅನೇಕರು ಹಾಜರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಕನ್ನಡ ಚಿತ್ರರಂಗ ಕಂಡ ಸುಂದರ ನಟಿಯರಲ್ಲಿ ಜಯಶ್ರೀ ಕೂಡಾ ಒಬ್ಬರು. ರೂಪದರ್ಶಿಯಾಗಿ, ನಟಿಯಾಗಿ ಜನಪ್ರಿಯತೆ ಕಂಡಿದ್ದ ಈ ನಟಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ...
-
ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಲಾಕ್ ಬಾಸ್ಟರ್ ಚಿತ್ರ ಕೆಜಿಎಫ್ ನ ಎರಡನೇ ಭಾಗಕ್ಕೆ ದೇಶದ ಜನ ಕಾತರಿಸುತ್ತಿದ್ದಾರೆ. ಕೆಜಿಎಫ್ ನ ಮೊದಲ ಭಾಗ ಬಿಡುಗಡೆಯಾಗಿ ಒಂದು...
-
ಸಲ್ಮಾನ್ ಖಾನ್ ನಾಯಕರಾಗಿರುವ "ದಬಾಂಗ್-3' ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರ ಮಾಡಿರೋದು ಗೊತ್ತೇ ಇದೆ. ಚಿತ್ರದಲ್ಲಿ ಬಲ್ಲಿ ಸಿಂಗ್ ಎಂಬ ಪಾತ್ರದಲ್ಲಿ...
-
"ದುನಿಯಾ' ವಿಜಯ್ ಇದೇ ಮೊದಲ ಬಾರಿಗೆ "ಸಲಗ' ಚಿತ್ರ ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಅವರ ಮೊದಲ ನಿರ್ದೇಶನದ ಚಿತ್ರ ಆಗಿರುವುದರಿಂದ ಎಲ್ಲರಿಗೂ ನಿರೀಕ್ಷೆ...
-
ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ "ಲಕ್ಷ್ಯ' ಚಿತ್ರದ ಎರಡು ಲಿರಿಕಲ್ ಹಾಡುಗಳು ಮತ್ತು ಮೋಶನ್ ಪೋಸ್ಟರ್ ಅನ್ನು ನಟ ಅನಿರುದ್ಧ್ ಇತ್ತೀಚೆಗೆ...
ಹೊಸ ಸೇರ್ಪಡೆ
-
ಬಾಗಲಕೋಟೆ: ನಮ್ಮದು ರಾಷ್ಟ್ರೀಯ ಪಕ್ಷ. ನಿಂತ ನೀರಲ್ಲ. ಹರಿಯುವ ನೀರು. ಹರಿಯುವ ನೀರಿನಲ್ಲಿ ಹೊಸ ನೀರು ಸೇರುವುದು ಸ್ವಾಭಾವಿಕ. ಶೀಘ್ರವೇ ಇನ್ನೂ ಹಲವು ಶಾಸಕರು ಬಿಜೆಪಿಗೆ...
-
ತಿರುಮಲ: ವಿಶ್ವವಿಖ್ಯಾತ ತಿರುಪತಿ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ. ದೇಗುಲ ಬಳಿ...
-
ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಜನರ ಬೇಡಿಕೆಯೇ ಹೊರತು ನಾನು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ. ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರಿಗೆ...
-
ರಾಯಚೂರು: ಮುಂದಿನ ಐದು ವರ್ಷಗಳಲ್ಲಿ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸಿ ಸ್ವಾವಲಂಬನೆ ಸಾ ಧಿಸಲಾಗುವುದು ಎಂದು ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಪತ್ರಕರ್ತರೊಂದಿಗೆ...
-
ಹೊಸದಿಲ್ಲಿ: ನೀವು ತಿನ್ನುವ, ಖರೀದಿಸಿದ ಆಹಾರದ ಮೇಲೆ ಸಂಶಯವಿದೆಯೇ? ಹಾಗಿದ್ದರೆ ತಡ ಬೇಡ. ಇನ್ನು ಅಧಿಕೃತ ಆಹಾರ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಖರ್ಚು ವೆಚ್ಚಗಳಿಲ್ಲದೇ...