ಅಂಬರೀಶ್ ಗೆ ಸುಮಲತಾಗಿಂತ ಜೋಡಿ ಬೇಕೆ?


Team Udayavani, Apr 5, 2018, 1:50 PM IST

Ambarish-Sumalatha.jpg

ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಅಂಬರೀಶ್‌ ಇಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಸುದೀಪ್‌ ಅವರು ಅಂಬರೀಶ್‌ ಅವರ ಯೌವ್ವನದ ಪಾತ್ರ ಮಾಡುತ್ತಿದ್ದಾರೆ. ಸುದೀಪ್‌ ಅವರಿಗೆ ಜೋಡಿಯಾಗಿ ಈಗಾಗಲೇ ಶ್ರುತಿ ಹರಿಹರನ್‌ ಇದ್ದಾರೆ. ಆದರೆ, ಅಂಬರೀಷ್‌ ಅವರ ಜೋಡಿ ಆಯ್ಕೆ ಬಗ್ಗೆ ಚಿತ್ರತಂಡ ಸಾಕಷ್ಟು ಹುಡುಕಾಟ ನಡೆಸಿದೆ. 

ಈ ಹಿಂದೆ ಅಂಬರೀಷ್‌ ಅವರಿಗೆ ಸುಹಾಸಿನಿ ಜೋಡಿಯಾದರೆ, ಚೆನ್ನಾಗಿರುತ್ತೆ ಎಂಬ ಕಾರಣಕ್ಕೆ ಸುಹಾಸಿನಿ ಅವರ ಜೊತೆ ಮಾತುಕತೆ ನಡೆಸಿ, ಪಕ್ಕಾ ಮಾಡಿಕೊಂಡಿತ್ತು ಚಿತ್ರತಂಡ. ಆದರೆ, ಚಿತ್ರೀಕರಣ ಮುಂದಕ್ಕೆ ಹೋಗಿ, ಡೇಟ್ಸ್‌ ಹೆಚ್ಚು ಕಮ್ಮಿಯಾದ ಹಿನ್ನೆಲೆಯಲ್ಲಿ, ಸುಹಾಸಿನಿ ಅವರಿಗೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರದಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ.

 ಅಲ್ಲದೆ, ಸುಹಾಸಿನಿ ಅವರೀಗ ತಮ್ಮ ಹೋಮ್‌ ಬ್ಯಾನ್‌ರ್‌ನಲ್ಲೊಂದು ಚಿತ್ರ ಕೈಗೆತ್ತಿಕೊಂಡಿರುವುದರಿಂದ ಅವರು ಚಿತ್ರದಲ್ಲಿ ನಟಿಸುವುದು ಅನುಮಾನ. ಅದರ ಬೆನ್ನ ಹಿಂದೆಯೇ, ರಮ್ಯಾಕೃಷ್ಣ ಅವರನ್ನು ಅಂಬರೀಶ್‌ ಜೋಡಿ ಮಾಡುವ ಯೋಚನೆ ಮಾಡಿದ ಚಿತ್ರತಂಡ, ಕೊನೆಗೆ ಡೇಟ್ಸ್‌ ಸಮಸ್ಯೆಯಿಂದಾಗಿ ಅದನ್ನೂ ಬದಿಗೊತ್ತಿದೆ. ಈ ಇಬ್ಬರನ್ನು ಬಿಟ್ಟು ಬೇರೆ ಯಾವ ನಾಯಕಿಯನ್ನು ಅಂಬರೀಶ್‌ಗೆ ಜೋಡಿ ಮಾಡಬೇಕೆಂಬ ಪ್ರಶ್ನೆ ಚಿತ್ರತಂಡದವರನ್ನು ಕಾಡುತ್ತಿರುವುದಂತೂ ಸುಳ್ಳಲ್ಲ.

ಹಾಗಾದರೆ, ಯಾರು ಅಂಬರೀಶ್‌ಗೆ ಜೋಡಿಯಾಗುತ್ತಾರೆ ಎಂಬ ಪ್ರಶ್ನೆ ಕೂಡ ಎದ್ದಿದೆ. ಚಿತ್ರತಂಡದವರ ವಲಯದಲ್ಲಿ, ಅಂಬರೀಷ್‌ ಅವರಿಗೆ ಅಲ್ಲಿ ಇಲ್ಲಿ ಯಾಕೆ ಜೋಡಿ ಹುಡುಕಬೇಕು. ಸುಮಲತಾ ಅವರಿಗಿಂತ ಒಳ್ಳೆಯ ಜೋಡಿ ಬೇಕಾ ಎಂಬ ಮಾತು ಕೇಳಿಬರುತ್ತಿದೆ. ಆ ಬಗ್ಗೆ ಚಿತ್ರತಂಡಕ್ಕೆ ಈಗ ಸರಿ ಎನಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಸುಮಲತಾ ಅವರೇ ಅಂಬರೀಶ್‌ಗೆ “ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರಕ್ಕೆ ಜೋಡಿಯಾದರೂ ಅಚ್ಚರಿ ಇಲ್ಲ. ಈಗಾಗಲೇ ಅಂಬರೀಶ್‌ ಮತ್ತು ಸುಮಲತಾ ಅವರ ಜೋಡಿ ಹಲವು ಚಿತ್ರಗಳಲ್ಲಿ ಮೋಡಿ ಮಾಡಿದೆ. 

“ಆಹುತಿ’ ಚಿತ್ರದ ಮೂಲಕ ಮೊದಲ ಸಲ ಇಬ್ಬರೂ ಜೋಡಿಯಾಗಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದರು. “ಶ್ರೀಮಂಜುನಾಥ’ ಹಾಗೂ ನಾಗಾಭರಣ ನಿರ್ದೇಶನದ “ಕಲ್ಲರಳಿ ಹೂವಾಗಿ’ ಚಿತ್ರದಲ್ಲೂ ರಾಜ-ರಾಣಿಯಾಗಿ ನಟಿಸಿದ್ದರು. ಇತ್ತೀಚೆಗೆ “ದೊಡ್ಮನೆ ಹುಡುಗ’ ಚಿತ್ರದಲ್ಲೂ ಅಂಬರೀಶ್‌ ಹಾಗು ಸುಮಲತಾ ಅವರು ಅಭಿನಯಿಸಿದ್ದರು. ಸದ್ಯಕ್ಕೆ ನಿರ್ದೇಶಕ ಗುರುದತ್‌ ಗಾಣಿಗ ಅವರು ಬಿಡುವಿಲ್ಲದಂತೆ ಚಿತ್ರೀಕರಣ ನಡೆಸುತ್ತಿದ್ದಾರೆ. ಇಷ್ಟರಲ್ಲೇ ಅಂಬರೀಷ್‌ ಜೋಡಿ ಪಕ್ಕಾ ಮಾಡಿ ಅವರ ಭಾಗವನ್ನೂ ಚಿತ್ರೀಕರಿಸುವ ಉತ್ಸಾಹದಲ್ಲಿದ್ದಾರೆ. ಈ ಚಿತ್ರವನ್ನು ಜಾಕ್‌ ಮಂಜು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.