ರಜನಿ ಮಾತಲ್ಲಿ ಅಂಬಿ ಸ್ನೇಹ


Team Udayavani, Nov 26, 2018, 11:40 AM IST

rajani-matali.jpg

ಅಂಬರೀಷ್‌ ಅವರ ವ್ಯಕ್ತಿತ್ವ ಎಂಥವರನ್ನಾದರೂ ಸೆಳೆಯುವಂಥದ್ದು. ಅದೇ ಕಾರಣದಿಂದ ಅವರ ಸ್ನೇಹಿತರ ಬಳಗ ದೊಡ್ಡದಿದೆ. ಕೇವಲ ಕನ್ನಡವಷ್ಟೇ ಅಲ್ಲದೇ ಪರಭಾಷಾ ನಟರು ಕೂಡಾ ಅಂಬರೀಷ್‌ ಅವರ ಆಪ್ತರಾಗಿದ್ದರು. ಅದರಲ್ಲಿ ಪ್ರಮುಖವಾಗಿದ್ದವರೆಂದರೆ ರಜನಿಕಾಂತ್‌. ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್‌ ಆಗಿ ಅಪಾರ ಸಂಖ್ಯೆಯ ಅಭಿಮಾನಿ ವರ್ಗವನ್ನು ಹೊಂದಿರುವ ರಜನಿಕಾಂತ್‌, ಅಂಬಿಯವರ “ಹೋಗೋ ಬಾರೋ’ ಸ್ನೇಹಿತ.

ಇಬ್ಬರು ಚಿತ್ರರಂಗದಲ್ಲಿ ಕಷ್ಟಪಟ್ಟು ಗಟ್ಟಿ ನೆಲೆ ಕಂಡುಕೊಂಡವರು. ಅಂದು ಆರಂಭವಾದ ಅವರಿಬ್ಬರ ನಿಷ್ಕಲ್ಮಶ ಸ್ನೇಹ ಹಾಗೆ ಮುಂದುವರೆದುಕೊಂಡು ಬಂದಿದೆ. ಅಂಬರೀಷ್‌ ಚೆನ್ನೈಗೆ ಹೋದರೆ ರಜನಿಕಾಂತ್‌ ಅವರನ್ನು ಭೇಟಿಯಾಗದೇ ಬರುತ್ತಿರಲಿಲ್ಲ. ಅದರಂತೆ ರಜನಿಕಾಂತ್‌ ಕೂಡಾ ಬೆಂಗಳೂರಿಗೆ ಬಂದರೆ ಅಂಬಿ ಮನೆಗೆ ಹೋಗಿ ಮಾತನಾಡಿ, ಊಟ ಮಾಡದೇ ಹೋಗುತ್ತಿರಲಿಲ್ಲ.

ಆದರೆ, ಇತ್ತೀಚೆಗೆ ಒಂದು ಬಾರಿ ರಜನಿಕಾಂತ್‌ ಅವರು ಬೆಂಗಳೂರಿಗೆ ಬಂದು ಹೋದರೂ ತುರ್ತು ಕಾರಣಗಳಿಂದಾಗಿ ಅಂಬಿ ಮನೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಇದು ಅಂಬಿಗೆ ಗೊತ್ತಾಗಿ, ತಮ್ಮದೇ ಶೈಲಿಯಲ್ಲಿ ರಜನಿಗೆ ಗದರಿದ್ದಾರೆ. “ಬಡ್ಡಿ ಮಗನೇ ಇನ್ನೊಂದ್ಸಾರಿ ಮನೆಗೆ ಬಾರದೇ ಹಾಗೇ ಹೋದರೆ ಸಾಯಿಸಿ ಬಿಡ್ತೀನಿ’ ಎಂದು. ಈ ವಿಚಾರವನ್ನು ಸ್ವತಃ ರಜನಿಕಾಂತ್‌ ಹೇಳಿಕೊಂಡು ಭಾವುಕರಾದರು.

ಅಂಬಿಯ ಅಂತಿಮ ದರ್ಶನಕ್ಕಾಗಿ ಚೆನ್ನೈನಿಂದ ಬಂದ ರಜನಿ, ಗೆಳೆಯನನ್ನು ನೋಡಿ ಕಣ್ಣೀರು ಹಾಕಿದರು. ಒತ್ತರಿಸಿ ಬರುತ್ತಿದ್ದ ದುಃಖವನ್ನು ತಡೆಯುತ್ತಾ ಸುಮಲತಾ ಅವರಿಗೆ ಸಾಂತ್ವನ ಹೇಳಿದರು. ಆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅಂಬರೀಷ್‌, “ಒಬ್ಬ ಅದ್ಭುತ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಆತ ರಾಜನಂತೆ ಬದುಕಿದ. ಆತನ ತರಹ ಬದುಕಲು ಯಾರಿಂದಲೂ ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಬೆಂಗಳೂರಿಗೆ ಬಂದರೆ ಅಂಬಿ ಮನೆಗೆ ಹೋಗಿ ಹೋಗುತ್ತಿದ್ದೆ.

ಆದರೆ ಕಳೆದ ಬಾರಿ ಭೇಟಿ ಕೊಟ್ಟಾಗ ಆತನ ಮನೆಗೆ ಹೋಗಲು ಸಾಧ್ಯವಾಗಿರಲಿಲ್ಲ. ಇದರಿಂದ ಸಿಟ್ಟಾದ ಆತ ಕರೆ ಮಾಡಿ, “ಬಡ್ಡಿ ಮಗನೇ ಇನ್ನೊಂದ್ಸಾರಿ ಮನೆಗೆ ಬಾರದೇ ಹಾಗೇ ಹೋದರೆ ಸಾಯಿಸಿ ಬಿಡ್ತೀನಿ’ ಎಂದಿದ್ದ. ಆ ತರಹದ ಸ್ನೇಹ ನಮ್ಮಿಬ್ಬರ ಮಧ್ಯೆ ಇತ್ತು. ಚಿತ್ರರಂಗಕ್ಕೆ ಅಂಬರೀಷ್‌ನಂತಹ ನಟ ಬರಬಹುದು, ಆದರೆ ಆತನಂತಹ ಮನುಷ್ಯ ಬರಲು ಸಾಧ್ಯವಿಲ್ಲ’ ಎಂದು ತಮ್ಮಿಬ್ಬರ ಗೆಳೆತನವನ್ನು ಮೆಲುಕು ಹಾಕಿದರು ರಜನಿಕಾಂತ್‌.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.