ಅಂಬಿ ನಿಧನ ಹಿನ್ನಲೆ: ಹುಟ್ಟುಹಬ್ಬ ಸಂಭ್ರಮಾಚರಣೆ ಬೇಡ ಎಂದ ಯಶ್
Team Udayavani, Jan 7, 2019, 9:37 AM IST
ಕನ್ನಡ ಚಿತ್ರರಂಗದಲ್ಲಿ “ಕೆಜಿಎಫ್’ ಚಿತ್ರದ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿರುವ ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ನಲ್ಲೂ ಇತಿಹಾಸ ನಿರ್ಮಿಸಿದ್ದಾರೆ. ಯಶ್ ಅಭಿನಯದ ಈ ಬ್ಲಾಕ್ ಬಸ್ಟರ್ ಚಿತ್ರ ದಾಖಲೆಯ 200 ಕೋಟಿ ರೂ ಗಳಿಸುವತ್ತ ಹೆಜ್ಜೆ ಇಟ್ಟಿದೆ. ಹೀಗಾಗಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ನಟ ರಾಕಿಂಗ್ ಸ್ಟಾರ್ ಯಶ್ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಹೌದು, ಯಶ್ ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಮೂಲಕ “ಜನವರಿ 8ರಂದು ನನ್ನ ಹುಟ್ಟುಹಬ್ಬ. ಕಳೆದ ಕೆಲವು ವರ್ಷಗಳಿಂದ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದಾರೆ. ಆದರೆ ಈ ವರ್ಷ ಜನ್ಮದಿನವನ್ನು ಆಚರಿಸುತ್ತಿಲ್ಲ. ಇದಕ್ಕೆ ಅಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ನಮ್ಮ ಕುಟುಂಬದ ಹಿರಿಯರಾದ ರೆಬಲ್ ಸ್ಟಾರ್ ಅಂಬರೀಷ್ ಅವರು ಕೆಲ ದಿನಗಳ ಹಿಂದಷ್ಟೇ ನಮ್ಮನ್ನ ಅಗಲಿದ್ದಾರೆ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ’ ಎಂದು ಕೇಳಿಕೊಂಡಿದ್ದಾರೆ.
ಅಲ್ಲದೇ ಯಶೋ ಯಾತ್ರೆ ಮೂಲಕ ನಿಮ್ಮ ಗ್ರಾಮಗಳಿಗೆ, ನಗರಗಳಿಗೆ ಭೇಟಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ ಎಂದ ಅವರು, ನನ್ನ ಅಭಿಪ್ರಾಯ ಹಾಗೂ ಭಾವನೆಯನ್ನು ಗೌರವಿಸುತ್ತೀರಾ ಎಂದು ನಂಬಿರುವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷದಲ್ಲಿ ಸಾಧನೆಗಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು