ರೇಸ್‌ ಕೋರ್ಸ್‌ನಲ್ಲಿವೆ ಅಂಬಿಯವರ ಕುದುರೆಗಳು


Team Udayavani, Nov 25, 2018, 11:40 AM IST

racecourse.jpg

ರೇಸ್‌ ಪ್ರಿಯರಾಗಿದ್ದ ಅಂಬರೀಶ್‌, ಬೆಂಗಳೂರು ಟರ್ಫ್ ಕ್ಲಬ್‌ನ ಸದಸ್ಯರೂ ಹೌದು. ಹತ್ತಾರು ವರ್ಷಗಳ ಹಿಂದೆಯೇ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಎರಡು ಕುದುರೆಗಳನ್ನು ಅವರು ಸಾಕಿದ್ದರು. ಪ್ರತಿ ವರ್ಷ ನಡೆಯುವ ಬೆಂಗಳೂರು ಡರ್ಬಿ ರೇಸ್‌ಗೆ ತಪ್ಪದೇ ಹಾಜರಾಗುತ್ತಿದ್ದರು. ತಮ್ಮ ಕುದುರೆಗಳ ಮೇಲೆ ಅಪಾರ ಪ್ರೀತಿ ಬೆಳೆಸಿಕೊಂಡಿದ್ದ ಅವರು ಅವನ್ನೂ ತಮ್ಮ ಮನೆಯ ಸದಸ್ಯರಂತೆ ಪರಿಗಣಿಸುತ್ತಿದ್ದರು.

ಅವು ನೆನಪಾದಾಗ, ಮಧ್ಯರಾತ್ರಿಯಾದರೂ ಸರಿ ಹೋಗಿ ನೋಡಿಕೊಂಡು ಬರುತ್ತಿದ್ದರು. ಅವರ ಮನೆಗೆ ಬರುವ ಆಪ್ತ ಗೆಳೆಯರನ್ನು ಬನ್ನಿ ನಮ್ಮ ಕುದುರೆಗಳನ್ನು ನೋಡಿ ಎಂದು ಕರೆದುಕೊಂಡು ಹೋಗಿ ಅಭಿಮಾನದಿಂದ ತೋರಿಸುತ್ತಿದ್ದರು. ಒಂದೊಮ್ಮೆ ತಮ್ಮ ಆಪ್ತ ಸ್ನೇಹಿತರೊಬ್ಬರನ್ನು ರಾತ್ರಿ ಊಟಕ್ಕೆ ಮನೆಗೆ ಆಹ್ವಾನಿಸಿದ್ದ ಅಂಬಿ,

ಅವರು ಇನ್ನೇನು ಹೊರಡುವಾಗ, “ನಮ್ಮ ಕುದುರೆಗಳನ್ನು ಪರಿಚಯಿಸುವುದನ್ನು ಮರೆತಿದ್ದೆ. ಬನ್ನಿ ಅವುಗಳನ್ನು ಮಾತನಾಡಿಸಿಕೊಂಡು ಬರೋಣ ಪ್ಲೀಸ್‌” ಎಂದು ಅವರನ್ನು ತಮ್ಮ ಕಾರಿನಲ್ಲೇ ರೇಸ್‌ಕೋರ್ಸ್‌ಗೆ ಕರೆದೊಯ್ದು ಕುದುರೆಗಳನ್ನು ತೋರಿಸಿ ಅವುಗಳ ಪರಿಚಯ ಮಾಡಿಸಿ ಆನಂತರ ಅವರನ್ನು ಮನೆಗೆ ಕಳುಹಿಸಿದ್ದರಂತೆ!

ಅಣ್ಣ ಸತ್ತ ವರ್ಷಕ್ಕೆ ಅಂಬಿ ಸಾವು: ನಟ, ಮಾಜಿ ಸಚಿವ ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ ಹಿರಿಯ ಸಹೋದರ ಡಾ.ಹರೀಶ್‌ (69) ಸಾವನ್ನಪ್ಪಿ ನಿನ್ನೆಗೆ ಒಂದು ವರ್ಷ. ಅಣ್ಣ ಸತ್ತ ಒಂದು ವರ್ಷಕ್ಕೆ ಅಂಬರೀಶ್‌ ವಿಧಿವಶರಾಗಿದ್ದಾರೆ. ಡಾ.ಹರೀಶ್‌ ಅವರು 24 ನವೆಂಬರ್‌ 2017ರಂದು ಮೃತಪಟ್ಟಿದ್ದರು.

1948ರಲ್ಲಿ ಜನಿಸಿದ್ದ ಡಾ.ಹರೀಶ್‌ 35 ವರ್ಷಗಳಿಂದ ದೊಡ್ಡರಸಿನಕೆರೆ ಸಮೀಪದ ಕೆ.ಎಂ.ದೊಡ್ಡಿಯಲ್ಲಿ ತಮ್ಮದೇ ಸ್ವಂತ ಕ್ಲಿನಿಕ್‌ ಹೊಂದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು 2017ರ ನವೆಂಬರ್‌ 24ರಂದು ಮೈಸೂರಿನ ನಿವಾಸದಲ್ಲಿ  ಮೃತಪಟ್ಟಿದ್ದರು.

ಮಂಡ್ಯ ಮಣ್ಣಲ್ಲೇ ಅಂತ್ಯಕ್ರಿಯೆಗೆ ಅಭಿಮಾನಿಗಳ ಆಗ್ರಹ: ಅಂಬರೀಶ್‌ ಅವರ ಅಂತ್ಯಕ್ರಿಯೆಯನ್ನು ಮಂಡ್ಯದ ಮಣ್ಣಿನಲ್ಲಿಯೇ ಮಾಡುವಂತೆ ಅಭಿಮಾನಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ರಾತ್ರಿಯಿಂದಲೇ ಅಭಿಯಾನ ಆರಂಭಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಅಂಬಿ ಕುಟುಂಬದವರಿಗೆ ತಲುಪುವವರೆಗೂ ಈ ಸಂದೇಶವನ್ನು ರವಾನೆ ಮಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.

ಮಂಡ್ಯವನ್ನು ಬಹುವಾಗಿ ಪ್ರೀತಿಸುತ್ತಿದ್ದ ಅಂಬರೀಷ್‌ ನಾನು ಮಂಡ್ಯದವನು ಎಂದು ಹೆಮ್ಮೆಯಿಂದ ಹೇಳುತ್ತಿದ್ದರು.  ಹೆಮ್ಮೆ , ಅಭಿಮಾನದ ಪ್ರತೀಕವಾಗಿ ಅಂಬರೀಶ್‌ ಈ ನೆಲದಲ್ಲಿಯೇ ಇರಬೇಕು ಎಂಬುದು ಅಭಿಮಾನಿಗಳ ಪ್ರೀತಿಯ ಒತ್ತಾಯವಾಗಿದೆ. ಆದ್ದರಿಂದ ಅಂಬಿಯ ಅಂತ್ಯಸಂಸ್ಕಾರ ಮಂಡ್ಯದ ನೆಲದಲ್ಲಿಯೇ ಆಗಬೇಕೆಂಬುದು ಅಭಿಮಾನಿಗಳ ಆಗ್ರಹ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.