ಹೊಸ ಚಿತ್ರಕ್ಕೆ ಅಮೃತಾ ಅಯ್ಯಂಗಾರ್‌ ನಾಯಕಿ

ನಿರೂಪ್‌ ಭಂಡಾರಿಗೆ ಜೋಡಿ

Team Udayavani, Dec 24, 2019, 7:03 AM IST

amrita

“ಅನುಷ್ಕಾ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಅಮೃತಾ ಅಯ್ಯಂಗಾರ್‌, ಹೊಸ ವರ್ಷದ ಆರಂಭದಿಂದಲೇ ಒಂದರ ಹಿಂದೊಂದು ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಬರುವ ಸಿದ್ಧತೆಯಲ್ಲಿದ್ದಾರೆ. ಹೌದು, ಸದ್ಯ ಅಮೃತಾ ಅಯ್ಯಂಗಾರ್‌, ಧನಂಜಯ್‌ ಅವರಿಗೆ ನಾಯಕಿಯಾಗಿ “ಪಾಪ್‌ ಕಾರ್ನ್ ಮಂಕಿ ಟೈಗರ್‌’, ಚಿರಂಜೀವಿ ಸರ್ಜಾಗೆ ನಾಯಕಿಯಾಗಿ “ಶಿವಾರ್ಜುನ’ ಚಿತ್ರದಲ್ಲಿ ಅಭಿನಯಿಸಿದ್ದು, ಮದರಂಗಿ ಕೃಷ್ಣ ನಟಿಸಿ ನಿರ್ದೇಶಿಸುತ್ತಿರುವ “ಲವ್‌ ಮಾಕ್ಟೇಲ್‌’ ಚಿತ್ರದಲ್ಲೂ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೂರೂ ಚಿತ್ರಗಳೂ ತೆರೆಗೆ ಬರಲು ಸಿದ್ಧವಾಗಿದ್ದು, ವರ್ಷದ ಆರಂಭದಲ್ಲಿಯೇ ಈ ಮೂರೂ ಚಿತ್ರಗಳು ತೆರೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಅಮೃತಾ ಅಭಿನಯಿಸಿರುವ ಬಹುತೇಕ ಹೊಸ ಪ್ರತಿಭೆಗಳ “ಓ’ ಎಂಬ ಹಾರರ್‌ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿದೆ. ಮತ್ತೊಂದು ಚಿತ್ರ “ಬಡವ ರಾಸ್ಕಲ್‌’ ಚಿತ್ರ ಕೂಡ ಚಿತ್ರೀಕರಣದಲ್ಲಿ ನಿರತವಾಗಿದೆ. ಇವೆಲ್ಲದರ ನಡುವೆ ಅಮೃತಾ ಅಯ್ಯಂಗಾರ್‌ ಅಭಿನಯಿಸುತ್ತಿರುವ ಮತ್ತೊಂದು ಚಿತ್ರದ ಬಗ್ಗೆ ಸುದ್ದಿ ಹೊರಬಿದ್ದಿದೆ.

ಹೌದು, ನಿರೂಪ್‌ ಭಂಡಾರಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಇನ್ನೂ ಹೆಸರಿಡದ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರದ ಟೈಟಲ್‌, ನಿರೂಪ್‌, ಅಮೃತಾ ಅವರೊಂದಿಗೆ ಅಭಿನಯಿಸುತ್ತಿರುವ ಇತರೆ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ. ಅಂದಹಾಗೆ, ಅನೂಪ್‌ ಭಂಡಾರಿ ಸುದೀಪ್‌ ಅವರಿಗೆ ನಿರ್ದೇಶಿಸುತ್ತಿರುವ ಹೊಸ ಚಿತ್ರದಲ್ಲಿ ನಿರೂಪ್‌ ಕೂಡಾ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅಮೃತಾ, ನಿರೂಪ್‌ಗೆ ಜೋಡಿ ಎನ್ನಲಾಗಿದೆ.

ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವುದರ ಬಗ್ಗೆ ಮಾತನಾಡುವ ಅಮೃತಾ, “ಇಲ್ಲಿಯವರೆಗೆ ಆರು ಚಿತ್ರಗಳಲ್ಲಿ ಅಭಿನಯಿಸಿದ್ದು, ಪ್ರತಿಯೊಂದರಲ್ಲೂ ಒಂದೊಂದು ವಿಭಿನ್ನ ಪಾತ್ರಗಳನ್ನು ಮಾಡುವ ಅವಕಾಶ ಸಿಕ್ಕಿದೆ. ಚಿತ್ರರಂಗದಲ್ಲಿ ಹೊಸದಾಗಿ ಬಂದವರಿಗೆ ಈ ಥರ ಅವಕಾಶ ಸಿಗೋದು ಅಪರೂಪ. ಇಂಥದ್ದೊಂದು ಅವಕಾಶ ನನಗೆ ಸಿಕ್ಕಿರುವುದಕ್ಕೆ ಖುಷಿಯಾಗುತ್ತಿದೆ. ಈ ಎಲ್ಲಾ ಸಿನಿಮಾಗಳಲ್ಲಿ ಸಿಕ್ಕ ಪಾತ್ರಗಳು ನನ್ನ ಪ್ರತಿಭೆಯನ್ನು ಪರೀಕ್ಷಿಸುವಂತಿದ್ದವು. ನಾನು ಒಬ್ಬಳು ಹೀರೋಯಿನ್‌ ಆಗಿ ಗುರುತಿಸಿಕೊಳ್ಳುವುದಕ್ಕಿಂತ ಒಬ್ಬ ನಟಿಯಾಗಿ ಗುರುತಿಸಿಕೊಳ್ಳಲು ಇಷ್ಟಪಡುತ್ತೇನೆ.

ಅದರಲ್ಲೂ ರಿಯಾಲಿಸ್ಟಿಕ್‌ ಸಬ್ಜೆಕ್ಟ್ ಸಿನಿಮಾಗಳು ಮಾಡೋದಕ್ಕೆ ನನಗೆ ತುಂಬ ಇಷ್ಟ. ಈಗಾಗಲೇ ನಾನು ಅಭಿನಯಿಸಿರುವ ಚಿತ್ರಗಳು ಈ ವರ್ಷ ಒಂದರ ಹಿಂದೊಂದು ಬಿಡುಗಡೆಯಾಗುತ್ತಿವೆ. ಜನ ಅದನ್ನು ಹೇಗೆ ಸ್ವೀಕರಿಸುತ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ’ ಎನ್ನುತ್ತಾರೆ. ಇದರ ನಡುವೆ ಕನ್ನಡದ ಜೊತೆ ತಮಿಳು, ತೆಲುಗಿನಲ್ಲೂ ಅಮೃತಾಗೆ ಚಿತ್ರಗಳ ಆಫ‌ರ್ ಬರುತ್ತಿವೆಯಂತೆ. ಈ ಬಗ್ಗೆ ಮಾತನಾಡುವ ಅಮೃತಾ, “ಸದ್ಯ ಕನ್ನಡ ಚಿತ್ರಗಳಲ್ಲಿ ಬಿಝಿಯಾಗಿದ್ದೇನೆ. ಇಲ್ಲೇ ಒಳ್ಳೆಯ ಚಿತ್ರಗಳು ಸಿಗುತ್ತಿವೆ. ಕನ್ನಡದಲ್ಲಿ ಮೊದಲು ಗುರುತಿಸಿಕೊಂಡ ನಂತರ ಬೇರೆ ಭಾಷೆಗಳ ಚಿತ್ರ ಕಡೆಗೆ ಗಮನ ಕೊಡುತ್ತೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.