ಆ ಕಾಲದ ಕಥೆ ಈ ಕಾಲದಲ್ಲಿ ಸಿನಿಮಾ! ಅಂದೊಂದಿತ್ತು ಕಾಲ ಚಿತ್ರೀಕರಣಕ್ಕೆ ಚಾಲನೆ
Team Udayavani, Feb 19, 2021, 3:48 PM IST
ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ನಮ್ಮ ಬಸವ’ ಚಿತ್ರದಲ್ಲಿ “ಅಂದೊಂದಿತ್ತು ಕಾಲ…’ ಎಂಬ ಹಾಡನ್ನು ನೀವು ಕೇಳಿರುತ್ತೀರಿ, ಈಗ ಅದೇ “ಅಂದೊಂದಿತ್ತು ಕಾಲ’ ಎಂಬ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರಿದೆ. ನಟ ವಿನಯ್ ರಾಜಕುಮಾರ್ “ಅಂದೊಂದಿತ್ತು ಕಾಲ’ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು.
ಚಿತ್ರದ ಮೊದಲ ದೃಶ್ಯಕ್ಕೆ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಕ್ಲಾಪ್ ಮಾಡಿ, ಚಿತ್ರೀಕರಣಕ್ಕೆ ಚಾಲನೆ ನೀಡಿದರು. ನಿರ್ದೇಶಕ ಜೋಗಿ ಪ್ರೇಮ್, ಹಿರಿಯ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ನಟ ಸಂದೀಪ್ ಮಲಾನಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.
ಇದನ್ನೂ ಓದಿ:ತುಳು ಚಿತ್ರರಂಗ ಉಳಿಯಬೇಕಾದರೆ ಥಿಯೇಟರ್ ಸಮಸ್ಯೆ ಬಗೆಹರಿಯಬೇಕು: ದೇವದಾಸ್ ಕಾಪಿಕಾಡ್
90ರ ದಶಕದ ಕಥಾಹಂದರ ಹೊಂದಿರುವ “ಅಂದೊಂದಿತ್ತು ಕಾಲ’ ಚಿತ್ರದಲ್ಲಿ ವಿನಯ್ ರಾಜಕುಮಾರ್ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕಿರುತೆರೆ ನಟಿ ನಿಶಾ, ಕಡ್ಡಿಪುಡಿ ಚಂದ್ರು, ಅರುಣಾ ಬಾಲರಾಜ್, ಗೋಪಾಲಕೃಷ್ಣ ದೇಶಪಾಂಡೆ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಅಂದೊಂದಿತ್ತು ಕಾಲ’ ಚಿತ್ರಕ್ಕೆ ಯುವ ನಿರ್ದೇಶಕ ಕೀರ್ತಿ ಕಥೆ, ಚಿತ್ರಕಥೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಭುವನ್ ಲೋಕೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸದ್ಯ ಮುಹೂರ್ತ ನೆರವೇರಿಸಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ತೀರ್ಥಹಳ್ಳಿ ಮತ್ತು ಬೆಂಗಳೂರು ಸುತ್ತಮುತ್ತ ಎರಡು ಹಂತದಲ್ಲಿ “ಅಂದೊಂದಿತ್ತು ಕಾಲ’ ಚಿತ್ರವನ್ನು ಚಿತ್ರೀಕರಣ ಮಾಡಲು ಪ್ಲಾನ್ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ