![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನಾಲ್ಕು ಕಾಲಿನ ಸ್ನೇಹಿತರ ಬಗ್ಗೆ ಐಂದ್ರಿತಾ ಕಾಳಜಿ
Team Udayavani, Apr 1, 2020, 10:29 AM IST
![ನಾಲ್ಕು ಕಾಲಿನ ಸ್ನೇಹಿತರ ಬಗ್ಗೆ ಐಂದ್ರಿತಾ ಕಾಳಜಿ](https://www.udayavani.com/wp-content/uploads/2020/04/cinema-tdy-1-620x436.jpg)
ಕೋವಿಡ್ 19 ಎಫೆಕ್ಟ್ ನಿಂದ ಇಡೀ ರಾಜ್ಯವೇ ಲಾಕೌ ಡೌನ್ ಆಗಿದೆ. ಇದರಿಂದ ಜನರಿಗೇ ಆಹಾರ ಸಿಗದೆ ಪರದಾಡುತ್ತಿದ್ದಾರೆ. ಹೀಗಿರುವಾಗ ನಟಿ ಐಂದ್ರಿತಾ ರೇ ಅವರು ಬೀದಿ ನಾಯಿಗಳಿಗೆ ಆಹಾರ ನೀಡಿ ಮಾನವೀಯತೆ ಮರೆದಿದ್ದಾರೆ.
ಕೋವಿಡ್ 19 ವೈರಸ್ನಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಜನರು ಒಂದು ಮಟ್ಟಿಗೆ ಹೊರಬರಲು ಭಯಪಡುತ್ತಿದ್ದಾರೆ. ಇದರಿಂದ ಬೀದಿನಾಯಿಗಳು, ಬೀದಿ ಹಸುಕರುಗಳು ಆಹಾರವಿಲ್ಲದೇ ಪರದಾಡುತ್ತಿವೆ. ಈ ಪರಿಸ್ಥಿತಿಯಲ್ಲಿ ಕೆಲವರು ಬೀದಿನಾಯಿಗಳಿಗೆ ಅಹಾರ ನೀಡಿ ನೆರವಾಗುತ್ತಿದ್ದಾರೆ. ಈಗ ನಟಿ ಐಂದ್ರಿತಾ ರೇ ತಮ್ಮ ಅಕ್ಕಪಕ್ಕದ ಬೀದಿನಾಯಿಗಳಿಗೆ ಊಟ ಹಾಕಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಐಂದ್ರಿತಾ, ನಮ್ಮ ನೆರೆಹೊರೆಯಲ್ಲಿರುವ ನಾಲ್ಕು ಕಾಲಿನ ಸ್ನೇಹಿತರ ಬಗ್ಗೆ ನಾವು ಮರೆಯಬಾರದು. ಈ ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗುತ್ತಿರುವುದರಿಂದ ಮತ್ತು ಕೊರೊನಾದಿಂದ ಪ್ರಸ್ತುತ ದೇಶ ಲಾಕೌ ಡೌನ್ ಆಗಿದೆ. ಈ ಪರಿಸ್ಥಿತಿಯಲ್ಲಿ ಅವುಗಳಿಗೆ ಆಹಾರ ಮತ್ತು ನೀರಿನ ಕೊರತೆ ಊಂಟಾಗಿದೆ. ಆದ್ದರಿಂದ ನೀವು ಮನೆಗೆ ಬೇಕಾದ ದಿನಸಿ ತರಲು ಹೊರಹೋದಾಗ ದಯವಿಟ್ಟು ನಾಯಿಗಳಿಗೆ ಆಹಾರ ನೀಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.
ಮೊದಲಿನಿಂದಲೂ ಪ್ರಾಣಿ ಪ್ರಿಯೆ ಆಗಿರುವ ಐಂದ್ರಿತಾ ರೇ ಅವರಿಗೆ ಶ್ವಾನಗಳು ಎಂದರೆ ಅಚ್ಚುಮೆಚ್ಚು, ಈ ಕಾರಣದಿಂದಲೇ ರಾತ್ರಿ ವೇಳೆ ಯಾರಿಗೂ ತಿಳಿಯದ ಹಾಗೇ ಮಾಸ್ಕ್ ಧರಿಸಿ ಬೀದಿನಾಯಿಗಳಿಗೇ ಆಹಾರ ಹಾಕಿಬಂದಿದ್ದಾರೆ. ಐಂದ್ರಿತಾ ರೇ ಅವರ ಈ ಮಾನವೀಯತೆ ಕೆಲಸ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.