ಅನಿತಾ ಭಟ್‌ ಸಿನಿಮಾದ ಟೈಟಲ್‌ ಲಾಂಚ್‌ ಮಾಡಿದ್ದಾರೆ ಶ್ರೀಮುರುಳಿ!


Team Udayavani, Sep 18, 2021, 3:37 PM IST

ಅನಿತಾ ಭಟ್‌ ಸಿನಿಮಾದ ಟೈಟಲ್‌ ಲಾಂಚ್‌ ಮಾಡಿದ್ದಾರೆ ಶ್ರೀಮುರುಳಿ!

ಪ್ರತಿಭಾನ್ವಿತ ನಟಿ ಅನಿತಾ ಭಟ್‌ ಮತ್ತೆ ಸಿನಿಮಾವೊಂದರ ಮೂಲಕ ಸುದ್ದಿ ಕೇಂದ್ರದಲ್ಲಿದ್ದಾರೆ. ಸದ್ದೇ ಇಲ್ಲದೆ ಒಂದು ಸಿನಿಮಾದ ಲೀಡ್‌ ರೋಲಿನಲ್ಲಿ ನಟಿಸಿರುವ ಅವರಿಗೀಗ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಸಾಥ್‌ ನೀಡಿದ್ದಾರೆ. ಕೊರೋನಾ ಕಾಲದಲ್ಲಿ ಆಸ್ಥೆಯಿಂದ ತಯಾರಿ ನಡೆಸಿ, ಕೊರೋನಾ ಅಬ್ಬರ ತುಸು ತಗ್ಗುತ್ತಲೇ ಈ ಸಿನಿಮಾದ ಚಿತ್ರೀಕರಣವನ್ನೂ ಪೂರ್ಣಗೊಳಿಸಿಕೊಳ್ಳಲಾಗಿದೆ.

ಚಿತ್ರದ ಟೈಟಲ್‌ ಅನ್ನು ಶ್ರೀಮುರುಳಿ ಲಾಂಚ್‌ ಮಾಡಿದ್ದಾರೆ. ಹಾಗೆ ಸಿನಿಮಾ ಪ್ರೇಮಿಗಳೆದುರು ತೆರೆದುಕೊಂಡಿರೋದು ಸಮುದ್ರಂ’ ಎಂಬ ಸಮ್ಮೋಹಕ ಶೀರ್ಷಿಕೆ. ಸಾಮಾನ್ಯವಾಗಿ ಸಿನಿಮಾ ಮುಹೂರ್ತದ ಆಸುಪಾಸಲ್ಲಿಯೇ ಟೈಟಲ್‌ ಲಾಂಚ್‌ ಮಾಡೋದು ರೂಢಿ. ಆದರೆ ಈ ಚಿತ್ರ ತಂಡ ಮಾತ್ರ ಆ ಪದ್ಧತಿಯನ್ನು ಬ್ರೇಕ್‌ ಮಾಡಿದೆ.

ಚಿತ್ರೀಕರಣವೆಲ್ಲ ಸಂಪೂರ್ಣ ಮುಗಿದಾದ ನಂತರವೇ ಶೀರ್ಷಿಕೆ ಅನಾವರಣ ಕಾರ್ಯಕ್ರಮವನ್ನಿಟ್ಟುಕೊಂಡಿದೆ. ಅಂದಹಾಗೆ, “ರಾಜಲಕ್ಷ್ಮೀ  ಸಿನಿ ಕ್ರಿಯೇಷನ್ಸ್’ ನಿರ್ಮಾಣ ಮಾಡಿರೋ ಚಿತ್ರ. ಇದಕ್ಕೆ ಅನಿತಾ ಭಟ್‌ ಕ್ರಿಯೇಷನ್ಸ್, ಡಾಟ್‌ ಟಾಕೀಸ್‌ ಸಹಯೋಗವಿದೆ.  ಅನಿತಾ ಭಟ್‌ ಮತ್ತು ಶಿವಧ್ವಜ್‌ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಜ್‌ ಕಿಶೋರ್ ಮತ್ತು ಸ್ವಾತಿ ಬಂಗೇರ ಜೋಡಿ ಮತ್ತೆರಡು ಪ್ರಧಾನ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಇದನ್ನೂ ಓದಿ:ಅನಿರುದ್ಧ ಶಾಸ್ತ್ರಿ ಕಂಠಸಿರಿಯಲ್ಲಿ ‘ಆಪರೇಶನ್‌ ಡಿ’ ಹಾಡುಗಳು

ಸಮುದ್ರಂ ಎಂಬ ಶೀರ್ಷಿಕೆಯೇ ಕಥೆಯ ಜಾಡನ್ನು ಕಡಲ ಕಿನಾರೆಯತ್ತ ಸರಿಸುವಂತಿದೆ. ಅದು ನಿಜವೂ ಹೌದು. ಯಾಕೆಂದರೆ, ಇದು ಕಡಲ ಕಿನಾರೆಯ ನಿಗೂಢ ಕಥಾ ಹಂದರವನ್ನೊಳಗೊಂಡಿರೋ ಚಿತ್ರ. ಕಡಲೆಂದರೆ ಬಹುತೇಕರ ಮನಸು ನೀಲಾಕಾಶದಂತೆ ಪ್ರಪುಲ್ಲವಾಗುತ್ತದಲ್ಲಾ?ಅದರ ಕಿನಾರೆಗಳಲ್ಲಿ ಮೈಚಾಚಿಕೊಂಡ ಭೂಗತ ಚಟುವಟಿಕೆಗಳ ಹೇಳ ಹೊರಟಿದೆ. ಅಂಥಾದ್ದೇ ಒಂದು ರಸವತ್ತಾದ ಕಥೆ ಈ ಚಿತ್ರದಲ್ಲಿದೆಯಂತೆ. ಅದನ್ನು ನಿರ್ದೇಶನ ಮಾಡಿರುವವರು ರಾಘವ ಮಹರ್ಶಿ.

ಶಿವಧ್ವಜ್‌ ಇಲ್ಲಿ ಡಾನ್‌ ಪಾತ್ರವನ್ನು ನಿರ್ವಹಿಸಿದ್ದರೆ, ಅನಿತಾ ಭಟ್‌ ಥರ ಥರದ ಶೇಡ್ಗಳಿರೋ ಸವಾಲಿನ ಪಾತ್ರವನ್ನು ನಿಭಾಯಿಸಿದ್ದಾರೆ.ಓರ್ವ ಗೃಹಿಣಿಯಾಗಿ, ಸಂದರ್ಭಾನುಸಾರ ರೆಬೆಲ್‌ ಆಗಿ ಈ ಸಮಾಜದೆದುರು ನಿಲ್ಲೋ ದಿಟ್ಟ ಹೆಣ್ಣಾಗಿಯೂ ಅವರು ನಟಿಸಿದ್ದಾರೆ. ಉಡುಪಿ, ಮಲ್ಪೆ, ಬ್ರಹ್ಮಾವರ, ಸಕಲೇಶಪುರ ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಮುಗಿಸಿಕೊಳ್ಳಲಾಗಿದೆ. ಬಿಡುಗಡೆಯ ಹೊಸ್ತಿಲಿನ ಕಾರ್ಯಚಟುವಟಿಕೆಗಳಿಗೂ ಚಾಲನೆ ಸಿಕ್ಕಿದೆ.

ಚಿತ್ರಕ್ಕೆ ರಾಘವ ಮಹರ್ಶಿ ನಿರ್ದೇಶನ, ಆಕಾಶ್‌ ಪರ್ವ ಸಂಗೀತ ನಿರ್ದೇಶನವಿದೆ. ಛಾಯಾಗ್ರಹಣ, ಸಂಕಲನ ಮಾತ್ರವಲ್ಲದೆ ಚಿತ್ರಕಥೆ ಸಂಭಾಷಣೆಯ ಜವಾಬ್ದಾರಿ ರಿಷಿಕೇಶ್‌ ನಿಭಾಯಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಮುದ್ರಂನ ಅಚ್ಚರಿದಾಯಕ, ಬಿಡುಗಡೆ ದಿನಾಂಕ ಅನೌನ್ಸ್‌ ಆಗಲಿದೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.