ನರ್ತಕಿ ಎದುರು ಅಣ್ಣಾವ್ರ ಕಟೌಟ್‌


Team Udayavani, Jan 26, 2018, 12:00 PM IST

Kanaka-(8).jpg

ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಡಾ.ರಾಜಕುಮಾರ್‌ ಅವರ ಕಟೌಟ್‌ ನಿಂತಿದೆ. ಹೌದು, ಬುಧವಾರ ದುನಿಯಾ ವಿಜಯ್‌ ಅಭಿಮಾನಿಗಳು ಅಣ್ಣಾವ್ರ ಕಟೌಟ್‌ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡುವ ಮೂಲಕ “ಕನಕ’ನ ಆಗಮನಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕ ಕಮ್‌ ನಿರ್ಮಾಪಕ ಆರ್‌.ಚಂದ್ರು ಅವರು, ನರ್ತಕಿ ಚಿತ್ರಮಂದಿರದಲ್ಲಿ ಅಣ್ಣಾವ್ರ ಕಟೌಟ್‌ ನಿಲ್ಲಿಸುವುದಾಗಿ ಈ ಹಿಂದೆ ಹೇಳಿದ್ದರು.

ಅದರಂತೆ, ಅವರು ಕಟೌಟ್‌ ನಿಲ್ಲಿಸುವ ಮೂಲಕ  ಅಭಿಮಾನಿಗಳ ಮೊಗದಲ್ಲಿ ಸಂತಸದ ಹೊಳೆ ಹರಿಸಿದ್ದಾರೆ. “ಒಡಹುಟ್ಟಿದವರು’ “ಆಕಸ್ಮಿಕ’, “ಶಬ್ಧವೇದಿ’ ಚಿತ್ರಗಳ ಬಳಿಕ ನರ್ತಕಿ ಚಿತ್ರಮಂದಿರದಲ್ಲಿ ಈಗ ಅಣ್ಣಾವ್ರ ಕಟೌಟ್‌ ನಿಂತಿದೆ. ಸುಮಾರು ಎರಡುವರೆ ದಶಕಗಳ ಹಿಂದೆ ಅಣ್ಣಾವ್ರ ಚಿತ್ರಗಳು ನರ್ತಕಿ ಚಿತ್ರಮಂದಿರದಲ್ಲಿ ಬಿಡುಗಡೆಯಾದಾಗ, ಅಲ್ಲಿ ಎತ್ತರದ ಕಟೌಟ್‌ ತಲೆಎತ್ತುತ್ತಿದ್ದವು.

ಅಭಿಮಾನಿಗಳು ಸಂತಸದಿಂದಲೇ ಕಟೌಟ್‌ಗೆ ಹಾರ ಹಾಕಿ ಸಂಭ್ರಮಿಸುತ್ತಿದ್ದರು. ಆ ಸಂಭ್ರಮ ಈಗ “ಕನಕ’ ಚಿತ್ರದ ಬಿಡುಗಡೆ ಮುನ್ನ ಕಾಣಬಹುದಾಗಿದೆ. ಬುಧವಾರ ಬೆಳಗ್ಗೆಯೇ ಅಣ್ಣಾವ್ರ ಕಟೌಟ್‌ ನಿಂತಿದ್ದು, ಅಭಿಮಾನಿಗಳು ಕಟೌಟ್‌ ನಿಲ್ಲಿಸುವ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇಂದು “ಕನಕ’ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಅಣ್ಣಾವ್ರ ಕಟೌಟ್‌ ಪಕ್ಕ “ಕನಕ’ ಚಿತ್ರದ ನಾಯಕ ದುನಿಯಾ ವಿಜಯ್‌ ಅವರ ಕಟೌಟ್‌ ಕೂಡ ನಿಲ್ಲಲಿದೆ. 

“ಕನಕ’ಗೆ “ರಾಜ್‌ಕುಮಾರ್‌ ಫ್ಯಾನ್‌’ ಎಂಬ ಅಡಿಬರಹ ಕೂಡಾ ಇದೆ.  “ಕನಕ’ ಆಟೋ ಡ್ರೆ„ವರ್‌ ಒಬ್ಬನ ಕಥೆ. ಆತನೇನು ಡಿಗ್ರಿ ಮಾಡಿದೋನಲ್ಲ. ಓದಿದ್ದು ಕಡಿಮೆಯೇ. ಆದರಾತ ಅಪ್ಪಟವಾಗಿ ಡಾ. ರಾಜ್‌ಕುಮಾರ್‌ ಅವರ ಅಭಿಮಾನಿ. ಇಂಥಾ ವ್ಯಕ್ತಿಯ ಲವ್‌, ಅದರ ಸುತ್ತಲ ಘಟನಾವಳಿಗಳನ್ನು ಸಿನಿಮಾ ಮಾಡಲು ಹೊರಟಿದ್ದಾರೆ ಚಂದ್ರು.

ಚಿತ್ರದಲ್ಲಿ ತೆಲುಗು ನಟಿ ಸುಧಾ ಅವರು ನಟಿಸಿದ್ದಾರೆ. ವಿಶೇಷವೆಂದರೆ, ಅವರಿಲ್ಲಿ ದುನಿಯಾ ವಿಜಯ್‌ ಅವರ ತಾಯಿಯಾಗಿ ನಟಿಸುತ್ತಿದ್ದಾರೆ. ನಟಿ ಸುಧಾ ಅವರು ತೆಲುಗಿನಲ್ಲಿ ಬಹು ಬೇಡಿಕೆಯ ಪೋಷಕ ನಟಿ. ಚಿರಂಜೀವಿ ಸೇರಿದಂತೆ ಮಹೇಶ್‌ಬಾಬು ಹಾಗೂ ಇತರೆ ನಟರ ಬಹುತೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿನ ವಿಜಯ್‌ ಅವರ ಇಂಟ್ರೋಡಕ್ಷನ್‌ ಸಾಂಗ್‌ ಅನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ವಿಶಿಷ್ಟವಾದ ವಾರಿಯರ್‌ ಶೈಲಿಯ  ಈ ಹಾಡು ದೇವನಹಳ್ಳಿ ಬಳಿ ಹದಿನೈದೆಕರೆಯಷ್ಟು ವಿಶಾಲವಾದ ಕೆಂಪು ಹುಡಿ ಮಣ್ಣಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ನವೀನ್‌ ಸಜ್ಜು ಸಂಗೀತವಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.