ಅಣ್ಣಾವ್ರ ಕುಟುಂಬದಿಂದ ಚಿತ್ರರಂಗಕ್ಕೆ ಮತ್ತೊಂದು ಪ್ರತಿಭೆ
ಧ್ರುವನ್ ಚಿತ್ರಕ್ಕೆ ಶಿವಣ್ಣ-ದರ್ಶನ್ ಸಾಥ್
Team Udayavani, Nov 27, 2019, 6:03 AM IST
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ಪವರ್ಸ್ಟಾರ್ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್, ರಾಮ್ ಕುಮಾರ್, ಶ್ರೀಮುರಳಿ, ವಿಜಯ ರಾಘವೇಂದ್ರ, ವಿನಯ್ ರಾಜಕುಮಾರ್, ಧೀರನ್ ರಾಮಕುಮಾರ್, ಧನ್ಯಾ ರಾಮ್ಕುಮಾರ್ ಹೀಗೆ ವರನಟ ಡಾ. ರಾಜಕುಮಾರ್ ಕುಟುಂಬದ ಅನೇಕರು ಕನ್ನಡ ಚಿತ್ರರಂಗದಲ್ಲಿ ಕಲಾವಿದರಾಗಿ, ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ಈಗ ಈ ಸಾಲಿಗೆ ಧ್ರುವನ್ ಎಂಬ ಮತ್ತೊಂದು ಹೆಸರು ಸೇರ್ಪಡೆಯಾಗುತ್ತಿದೆ. ಹೌದು, ಪಾರ್ವತಮ್ಮ ರಾಜಕುಮಾರ್ ಅವರ ತಮ್ಮನ ಮಗ ಧ್ರುವನ್ ಈಗ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. “ನೀನಾಸಂ’ನಲ್ಲಿ ಕೆಲ ಕಾಲ ಅಭಿನಯ ತರಬೇತಿ ಪಡೆದುಕೊಂಡಿರುವ ಧ್ರುವನ್, ಸುಮಾರು ಐದಾರು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವನ್ನೂ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಧ್ರುವನ್ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿದೆ. ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ, ಚಿತ್ರದ ಮೊದಲ ಸನ್ನಿವೇಶಕ್ಕೆ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಆರಂಭ ಫಲಕ ತೋರಿದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇನ್ನೂ ಹೆಸರಿಡದ ಈ ಚಿತ್ರವನ್ನು ಬಿ.ಎಸ್.ಸುಧೀಂದ್ರ ನಿರ್ಮಿಸುತ್ತಿದ್ದಾರೆ.
“ಕೃಷ್ಣನ್ ಲವ್ಸ್ಟೋರಿ’, “ಕೃಷ್ಣಲೀಲಾ’, ಜೋಗಿ ಪ್ರೇಮ್ ನಿರ್ದೇಶನ “ಏಕ್ ಲವ್ ಯಾ’ ಮೊದಲಾದ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ, ರಘುಕೋವಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2017ರಲ್ಲಿ ಆಂಧ್ರ ಪ್ರದೇಶದಲ್ಲಿ ನಡೆದ ನೈಜ ಘಟನೆ ಈ ಚಿತ್ರದಲ್ಲಿ ತೆರೆಮೇಲೆ ಬರುತ್ತಿದ್ದು, ಚಿತ್ರದಲ್ಲಿ ಅನಾಥ ಹುಡುನಾಗಿ, ಪ್ರಕೃತಿ ಪ್ರೇಮಿಯ ಪಾತ್ರದಲ್ಲಿ ಧ್ರುವನ್ ಕಾಣಿಸಿಕೊಳ್ಳುತ್ತಿದ್ದಾರೆ. ಧ್ರುವನ್ಗೆ ನಾಯಕಿಯಾಗಿ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯಾರ್ ಅಭಿನಯಿಸಲಿದ್ದಾರೆ.
ಉಳಿದಂತೆ ಕನ್ನಡ ಮತ್ತು ತೆಲುಗಿನ ಅನೇಕ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ರಘು ಕೋವಿ, “ಪ್ರೀತಿ ಎನ್ನುವುದು ಅಂತ್ಯಕ್ಕೆ ಹೋದಾಗ ಏನಾಗುತ್ತದೆ ಎಂಬುದು ಚಿತ್ರದ ಒಂದು ಎಳೆಯ ಸಾರಾಂಶವಾಗಿದೆ. ಇಂದಿನ ಜನರೇಶನ್ಗೆ ಹತ್ತಿರವಾಗುವಂತ ಕಥೆ ಚಿತ್ರದಲ್ಲಿದೆ’ ಎಂದು ವಿವರಣೆ ಕೊಡುತ್ತಾರೆ.
ಇನ್ನು ಈ ಚಿತ್ರದ ಬಹುಪಾಲು ಚಿತ್ರೀಕರಣ ಕಾಶಿಯಲ್ಲಿ ನಡೆಯಲಿದ್ದು, ಉಳಿದುದನ್ನು ಬೆಂಗಳೂರು, ಜಮ್ಮು ಮತ್ತು ಕಾಶ್ಮೀರದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಸತ್ಯಹೆಗಡೆ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು