ಭಟ್ಟರ ಮತ್ತೊಂದು ರೊಮ್ಯಾಂಟಿಕ್ ಹಾಡು
Team Udayavani, Sep 18, 2018, 11:29 AM IST
ಯೋಗರಾಜ್ ಭಟ್ ನಿರ್ದೇಶನದ “ಪಂಚತಂತ್ರ’ ಚಿತ್ರ ಏನಾಯಿತು, ಯಾವ ಹಂತದಲ್ಲಿದೆ ಎಂದು ಸಿನಿಪ್ರೇಮಿಗಳು ಪ್ರಶ್ನಿಸುತ್ತಿರುವಾಗಲೇ ಭಟ್ರಾ, ಚಿತ್ರದ ಸ್ಟಿಲ್ ಬಿಟ್ಟಿದ್ದಾರೆ. ಅದು ಅಂತಿಂಥ ಸ್ಟಿಲ್ ಅಲ್ಲ, ಸಖತ್ ರೊಮ್ಯಾಂಟಿಕ್ ಸ್ಟಿಲ್. ಹೌದು, ಯೋಗರಾಜ್ ಭಟ್ ತಮ್ಮ “ಪಂಚತಂತ್ರ’ ಚಿತ್ರಕ್ಕಾಗಿ ರೊಮ್ಯಾಂಟಿಕ್ ಹಾಡೊಂದನ್ನು ಚಿತ್ರೀಕರಿಸಿದ್ದಾರೆ.
ನಾಯಕ ವಿಹಾನ್ ಹಾಗೂ ನಾಯಕಿ ಸೋನಾಲ್ ಮೊಂತೆರೋ ಈ ಹಾಡಿನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. “ಶೃಂಗಾರದ ಹೊಂಗೆಮರ ಹೂಬಿಟ್ಟಿದೆ, ನಾಚಿಕೆ ನಮ್ಮ ಜೊತೆ ಠೂ ಬಿಟ್ಟಿದೆ, ಕಳ್ಳಾಟಕೆ ಮಳ್ಳಾ ಮನ ಛೀ ಎಂದಿದೆ, ಚೆಲ್ಲಾಟಕೆ ಚೆಲುವು ಹೂ ಎಂದಿದೆ …’ ಎಂದು ಆರಂಭವಾಗುವ ಈ ಹಾಡನ್ನು ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಿದ್ದಾರೆ.
ಮಿನರ್ವ ಮಿಲ್ನಲ್ಲಿ ಹಾಕಲಾದ ಕಲರ್ಫುಲ್ ಸೆಟ್ನಲ್ಲಿ ಎರಡು ದಿನಗಳ ಕಾಲ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಈ ಹಾಡಿಗೂ ಮುಂಚೆ ನಾಯಕ-ನಾಯಕಿ ರಿಹರ್ಸಲ್ ಮಾಡುವ ಮೂಲಕ ಹಾಡಿಗೆ ಸಿದ್ಧರಾಗಿದ್ದಾರೆ. ಹಾಗಾಗಿ, ಚಿತ್ರೀಕರಣದ ವೇಳೆ ಸುಲಭವಾಗಿ ಚಿತ್ರೀಕರಿಸಲಾಯಿತಂತೆ.
ಅಂದಹಾಗೆ, ಇದೊಂದು ಯೂಥ್ಫುಲ್ ಕಥೆಯಾಗಿದ್ದು, ಹಾಸ್ಯದೊಂದಿಗೆ ನವಿರಾದ ಪ್ರೇಮಕಥೆ ಇದೆ. ಸಾಕಷ್ಟು ನೈಜತೆಗೆ ಹತ್ತಿರವಾಗಿರುವ ಅಂಶಗಳು ಚಿತ್ರದ ಮತ್ತೊಂದು ಹೈಲೈಟ್. ಮುಖ್ಯವಾಗಿ ಯುವಪೀಳಿಗೆಯನ್ನು ಮನಸ್ಸಲಿಟ್ಟುಕೊಂಡೇ ಭಟ್ಟರು ಕಥೆ ಹೆಣೆದಿದ್ದಾರೆ. ಈಗಿನ ವಾಸ್ತವತೆಯ ಸಾರ ಚಿತ್ರದುದ್ದಕ್ಕೂ ಕಾಣಸಿಗಲಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ