ಅಂಬಿ ಬರ್ತ್‌ಡೇಗೆ ಸ್ಪೆಷಲ್‌ ಗಿಫ್ಟ್: ಆಧುನಿಕ ರೂಪದಲ್ಲಿ ಅಭಿಮಾನಿಗಳಿಗೆ ಅಂತ ಸ್ಪರ್ಶ


Team Udayavani, May 25, 2023, 3:02 PM IST

antha kannada movie re release

ಇದೇ ಮೇ. 29 ರಂದು ನಟ ರೆಬಲ್‌ಸ್ಟಾರ್‌ ಅಂಬರೀಶ್‌ ಅವರ ಹುಟ್ಟುಹಬ್ಬ. ಈ ಬಾರಿ ಅಂಬರೀಶ್‌ ಹುಟ್ಟುಹಬ್ಬಕ್ಕೆ ಅವರ ಸಿನಿಮಾ ಕೆರಿಯರ್‌ನ ಎವರ್‌ಗ್ರೀನ್‌ ಸಿನಿಮಾಗಳಲ್ಲಿ ಒಂದಾದ “ಅಂತ’ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಹೌದು, 1981ರಲ್ಲಿ ಬಿಡುಗಡೆಯಾಗಿದ್ದ “ಅಂತ’ ಸಿನಿಮಾ ನಟ ಅಂಬರೀಶ್‌ ಅವರನ್ನು ಕನ್ನಡ ಚಿತ್ರರಂಗಕ್ಕೆ “ರೆಬಲ್‌ಸ್ಟಾರ್‌’ ಆಗಿ ಪರಿಚಯಿಸಿದ್ದು, ಬಹುತೇಕರಿಗೆ ಗೊತ್ತೇ ಇದೆ. ಈಗ ಅದೇ “ಅಂತ’ ಸಿನಿಮಾ ಸುಮಾರು 42 ವರ್ಷಗಳ ನಂತರ ಹೊಸ ರೂಪದಲ್ಲಿ ಆಧುನಿಕ ಸ್ಪರ್ಶ ಪಡೆದುಕೊಂಡು ಮತ್ತೆ ಬಿಡುಗಡೆಯಾಗುತ್ತಿದೆ.

“1981 ಇಸವಿಯಲ್ಲಿ “ಅಂತ’ ಸಿನಿಮಾ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಅಂದು ಅಭಿನಯಿಸಿದ್ದ ಬಹುತೇಕ ಕಲಾವಿದರು, ತಂತ್ರಜ್ಞರು ಇಂದು ನಮ್ಮೊಂದಿಗೆ ಇಲ್ಲ. ಆದರೆ ಅವರ ಕೊಡುಗೆಯನ್ನು ಈ ಸಿನಿಮಾದಲ್ಲಿ ಮರೆಯುವಂತಿಲ್ಲ. ಆರಂಭದಲ್ಲಿ “ಅಂತ’ ಸಿನಿಮಾವನ್ನು ಬೇರೆಯವರು ನಿರ್ದೇಶಿಸಬೇಕಿತ್ತು. ಆದರೆ ಪತ್ರಕರ್ತ ಎಂ.ಬಿ ಸಿಂಗ್‌ ಮೂಲಕ ಈ ಕಥೆ ನನಗೆ ದೊರಕಿತು. ಕೊನೆಗೆ “ಪರಿಮಳ ಆರ್ಟ್ಸ್’ ಮೂಲಕ ಮಾರುತಿ, ವೇಣು ಹಾಗೂ ಕೆ.ಸಿ.ಎನ್‌ ಚಂದ್ರಶೇಖರ್‌ ಈ ಸಿನಿಮಾ ನಿರ್ಮಾಣ ಮಾಡಿದರು. ಮೊದಲಿಗೆ ಸಿನಿಮಾಕ್ಕೆ ಅಂಬರೀಶ್‌ ನಾಯಕ ಎಂದು ತೀರ್ಮಾನಿಸಲಾಯಿತು. ಆದರೆ ಈ ವಿಷಯ ಗೊತ್ತಾಗುತ್ತಿದ್ದಂತೆ, ಸಿನಿಮಾ ಪಂಡಿತರು ಎನಿಸಿಕೊಂಡವರು ಸಿನಿಮಾದ ಬಗ್ಗೆ ಸಾಕಷ್ಟು ಕುಹುಕದ ಮಾತುಗಳನ್ನಾಡಿದರು. ಆದರೆ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸಿನಿಮಾ ಮಾಡಿದೆವು. ಆನಂತರ ಸಿನಿಮಾ ಬಿಡುಗಡೆಯಾಗಿ ದಾಖಲೆಯನ್ನೇ ಬರೆಯಿತು. ಪ್ರೇಕ್ಷಕರು ಮೆಚ್ಚಿಕೊಂಡರು. ಆನಂತರ ನಡೆದಿದ್ದು ಇತಿಹಾಸ…’ ಇದು “ಅಂತ’ ಸಿನಿಮಾದ ನಿರ್ದೇಶಕ ಎಸ್‌. ವಿ ರಾಜೇಂದ್ರ ಸಿಂಗ್‌ ಬಾಬು ಅವರ ಮಾತು.

ಈ ಬಾರಿ ನಟ ಅಂಬರೀಶ್‌ ಹುಟ್ಟುಹಬ್ಬದ ಸಂದರ್ಭದಲ್ಲಿ “ಅಂತ’ ಸಿನಿಮಾ ರೀ ರಿಲೀಸ್‌ ಆಗುತ್ತಿದೆ. ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಬಾಬು, “ಅಂತ’ ಸಿನಿಮಾದ ಅಂದಿನ ಕೆಲ ವಿಷಯಗಳನ್ನು ಮೆಲುಕು ಹಾಕಿದರು. “”ಅಂತ’ ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಮೈಸೂರಿನಲ್ಲಿ ಸುಮಾರು 18 ಸೆಟ್‌ಗಳನ್ನು ಹಾಕಿ ಚಿತ್ರೀಕರಿಸಿದ್ದೆವು. ಆಗಿನ ಕಾಲಕ್ಕೆ ಸುಮಾರು 20 ಲಕ್ಷ ರೂ. ಬಜೆಟ್‌ನಲ್ಲಿ ತಯಾರಾದ ಸಿನಿಮಾ ಸುಮಾರು 40 ಲಕ್ಷ ರೂ. ಗೂ ಅಧಿಕ ಕಲೆಕ್ಷನ್‌ ಮಾಡಿತ್ತು. “ಅಂತ’ ಆಗಲೇ ಪ್ಯಾನ್‌ ಇಂಡಿಯಾ ಸಿನಿಮಾ ಆಗಿತ್ತು. ಬೇರೆ ಬೇರೆ ಭಾಷೆಯಲ್ಲಿ ತುಂಬಾ ಬೇಡಿಕೆಯಿತ್ತು. ಹಿಂದಿಯಲ್ಲಿ ಜಿತೇಂದ್ರ ಈ ಸಿನಿಮಾದಲ್ಲಿ ಅಭಿನಯಿಸಿದ್ದರು. ಅಲ್ಲೂ ದಾಖಲೆ ಬರೆಯಿತು. ರಜಿನಿಕಾಂತ್‌ ಕೂಡ ಈ ಸಿನಿಮಾದಲ್ಲಿ ಅಭಿನಯಿಸುವ ಆಸೆ ಹೊಂದಿದ್ದರು. ಅಂಬರೀಶ್‌ ವಜ್ರಮುನಿ, ಸುಂದರಕೃಷ್ಣ ಅರಸ್‌, ಮುಸುರಿ ಕೃಷ್ಣಮೂರ್ತಿ, ಪ್ರಭಾಕರ್‌, ಸಂಗೀತ ನಿರ್ದೇಶಕ ಜಿ. ಕೆ ವೆಂಕಟೇಶ್‌ ಹೀಗೆ ಈ ಸಿನಿಮಾದಲ್ಲಿ ಕೆಲಸ ಮಾಡಿದ ಅದೆಷ್ಟೋ ಕಲಾವಿದರು ಮತ್ತು ತಂತ್ರಜ್ಞರು ಇಂದು ನಮ್ಮೊಂದಿಗಿಲ್ಲ. ಆದರೆ ಸಿನಿಮಾದ ಯಶಸ್ಸಿಗೆ ಪ್ರತಿಯೊಬ್ಬರದ್ದೂ ಕೊಡುಗೆ ಇದೆ. ನನಗೆ ತಿಳಿದಿರುವ ಪ್ರಕಾರ “ಅಂತ’ ಸಿನಿಮಾದ ಸ್ಪೂರ್ತಿಯಿಂದ ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳು ಬಂದಿವೆ. ನನ್ನ ಪ್ರಕಾರ ಕಥೆ ಸಿನಿಮಾದ ನಿಜವಾದ ಹೀರೋ. ಆ ಕಥೆ ಚೆನ್ನಾಗಿದ್ದರೆ ಸಿನಿಮಾದ ಯಶಸ್ಸು ಖಂಡಿತ. “ಅಂತ’ ಕೂಡ ಅಂಥದ್ದೇ ಸಿನಿಮಾ. ಸಿನಿಮಾದ ಒಳ್ಳೆಯ ಕಥೆ, ಕಲಾವಿದರ ಅಭಿನಯ ಪ್ರೇಕ್ಷಕರಿಗೆ ಇಷ್ಟವಾಯಿತು. ಇಂಥ ಅದ್ಭುತ ಸಿನಿಮಾ ಇದೇ ಮೇ 26ಕ್ಕೆ ಹೊಸ ತಂತ್ರಜ್ಞಾನದಲ್ಲಿ ಮತ್ತೆ ರೀ ರಿಲೀಸ್‌ ಆಗುತ್ತಿದೆ’ ಎಂಬುದು ಬಾಬು ಅವರ ಮಾತು.

ಇದೇ ವೇಳೆ ಮಾತನಾಡಿದ ನಿರ್ಮಾಪಕ ವೇಣು, “ಮೇ 29 ರಂದು ಅಂಬರೀಶ್‌ ಅವರ 71ನೇ ಹುಟ್ಟುಹಬ್ಬವಿದೆ. ಈ ಸಂದರ್ಭದಲ್ಲಿ ಮೇ 26 ರಂದು “ಅಂತ’ ಚಿತ್ರವನ್ನು 71ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಮಾಡುತ್ತಿದ್ದೇವೆ. ಜಯಣ್ಣ ಫಿಲಂಸ್‌ ಮೂಲಕ “ಅಂತ’ ಸಿನಿಮಾ ಬಿಡುಗಡೆಯಾಗುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಕಲರಿಂಗ್‌, ಸೌಂಡಿಂಗ್‌ ಎಲ್ಲವನ್ನೂ ಬದಲಾವಣೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.