ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್


Team Udayavani, Mar 30, 2023, 12:35 PM IST

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಹಿಂದಿ ಚಿತ್ರರಂಗದ ಜನಪ್ರಿಯ ನಟ ಅನುಪಮ್‌ ಖೇರ್‌ ಇದೀಗ ಶಿವರಾಜಕುಮಾರ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ “ಘೋಸ್ಟ್‌’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಅನುಪಮ್‌ ಖೇರ್‌ ಕನ್ನಡ ಚಿತ್ರರಂಗಕ್ಕೂ ಪರಿಚಯವಾಗುತ್ತಿದ್ದಾರೆ.

ಅಂದಹಾಗೆ, “ಘೋಸ್ಟ್‌’ ಅನುಪಮ್‌ ಖೇರ್‌ ಅಭಿನಯದ 535ನೇ ಸಿನಿಮಾ. ಹಿಂದಿ ಸಿನಿಮಾಗಳ ಜೊತೆಗೆ ಈಗಾಗಲೇ ದಕ್ಷಿಣ ಭಾರತದ ಮಲಯಾಳಂ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲೂ ಬಣ್ಣ ಹಚ್ಚಿರುವ ಅನುಪಮ್‌ ಖೇರ್‌ ಅವರಿಗೆ “ಘೋಸ್ಟ್‌’ ಮೊದಲ ಕನ್ನಡ ಸಿನಿಮಾ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ “ಘೋಸ್ಟ್‌’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಅನುಪಮ್‌ ಖೇರ್‌, ತಮ್ಮ ಮೊದಲ ಕನ್ನಡ ಸಿನಿಮಾದ ಬಗ್ಗೆ ಒಂದಷ್ಟು ಮಾತುಗಳನ್ನಾಡಿದ್ದಾರೆ.

“ಸಿನಿಮಾಕ್ಕೆ ಎಂದಿಗೂ ಭಾಷೆ ಅಡ್ಡಿ ಬರುವುದಿಲ್ಲ ಎಂಬುದು ನನ್ನ ಬಲವಾದ ನಂಬಿಕೆ. ಅಳು, ನಗು, ನೋವು ಹೀಗೆ ಎಲ್ಲ ಭಾವನಾತ್ಮಕ ಅಂಶಗಳೂ ಎಲ್ಲ ಭಾಷೆಗಳಲ್ಲೂ ಒಂದೇ ಆಗಿರುತ್ತದೆ. ಅದಕ್ಕೆ ಭಾಷೆಯ ಭೇದ ಇರುವುದಿಲ್ಲ. ಸಿನಿಮಾ ಕೂಡ ಹಾಗೆಯೇ. ಸಿನಿಮಾಗಳನ್ನು ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌, ಅಂಥ ಬೇರೆ ಬೇರೆಯಾಗಿ ನೋಡುವುದು ಸರಿಯಲ್ಲ. ಭಾರತದಲ್ಲಿ ತಯಾರಾಗುವ ಸಿನಿಮಾಗಳನ್ನು ಭಾರತೀಯ ಸಿನಿಮಾಗಳು ಅಂಥ ನೋಡುವುದು ಸೂಕ್ತ. ನನ್ನ ಮಟ್ಟಿಗೆ ಹೇಳುವುದಾದರೆ, ಯಾವುದೇ ಭಾಷೆಯ ಸಿನಿಮಾಗಳಲ್ಲಿ ನನಗೆ ತಾರತಮ್ಯವಿಲ್ಲ. ಈಗಾಗಲೇ ಹಿಂದಿ, ತೆಲುಗು, ತಮಿಳು, ಮಲೆಯಾಳಂ, ಬೆಂಗಾಳಿ, ಮರಾಠಿ ಹೀಗೆ ಎಲ್ಲ ಭಾಷೆಯ ಸಿನಿಮಾಗಳಲ್ಲೂ ಅಭಿನಯಿಸಿದ್ದೇನೆ. ಕನ್ನಡ ಸಿನಿಮಾದಲ್ಲೂ ಅಭಿನಯಿಸಬೇಕು ಎಂಬ ಆಸೆಯಿತ್ತು. ಆ ಆಸೆ ಈಗ “ಘೋಸ್ಟ್‌’ ಸಿನಿಮಾದ ಮೂಲಕ ಈಡೇರಿದೆ’ ಎಂಬುದು ಅನುಪಮ್‌ ಖೇರ್‌ ಮಾತು.

ಇನ್ನು “ಘೋಸ್ಟ್‌’ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ? ಎಂಬ ಪ್ರಶ್ನೆಗೆ, “ಸಿನಿಮಾದ ಕಥೆಗೆ ತಿರುವು ನೀಡುವಂಥ ಪಾತ್ರ ನನ್ನದು. ಪಾತ್ರಕ್ಕೆ ಅದರದ್ದೇ ಆದ ಮಹತ್ವವಿದೆ. ಆದರೆ ನಿರ್ದೇಶಕರು ನನ್ನ ಪಾತ್ರದ ಬಗ್ಗೆ ಈಗಲೇ ಹೆಚ್ಚೇನೂ ಮಾಹಿತಿ ನೀಡಬಾರದು ಎಂದು ತಿಳಿಸಿರುವುದರಿಂದ, ನನ್ನ ಪಾತ್ರದ ಬಗ್ಗೆ ಹೆಚ್ಚು ವಿವರಣೆ ಕೊಡುವುದು ಸೂಕ್ತವಲ್ಲ’ ಎಂಬ ಉತ್ತರ ಅನುಮಪ್‌ ಖೇರ್‌ ಅವರದ್ದು.


“ಸುಮಾರು ಹತ್ತು ವರ್ಷಗಳ ಹಿಂದೆಯೇ ಕನ್ನಡ ಸಿನಿಮಾದಲ್ಲಿ ಅಭಿನಯಿಸುವ ಆಫ‌ರ್ ಬಂದಿತ್ತು. ಆದರೆ ಸಮಯದ ಹೊಂದಾಣಿಕೆ ಮತ್ತಿತರ ಕಾರಣಗಳಿಂದ ಕನ್ನಡ ಸಿನಿಮಾದಲ್ಲಿ ಅಭಿನಯಿಸಲು ಸಾಧ್ಯವಾಗಿರಲಿಲ್ಲ. ಈಗ ಮತ್ತೂಮ್ಮೆ “ಘೋಸ್ಟ್‌’ ಸಿನಿಮಾದ ಮೂಲಕ ಕನ್ನಡ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಬಂದಿದೆ. ಸಿನಿಮಾದ ಸ್ಕ್ರಿಪ್ಟ್ ಮತ್ತು ಪಾತ್ರ ಇಷ್ಟವಾಗಿದ್ದರಿಂದ, “ಘೋಸ್ಟ್‌’ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡೆ’ ಎನ್ನುವುದು ಅನುಪಮ್‌ ಖೇರ್‌ ಮಾತು.

ಅಂದಹಾಗೆ, ಶ್ರೀನಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಘೋಸ್ಟ್‌’ ಸಿನಿಮಾವನ್ನು ಸಂದೇಶ್‌ ನಾಗರಾಜ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಶಿವರಾಜಕುಮಾರ್‌, ಅನುಪಮ್‌ ಖೇರ್‌ ಅವರೊಂದಿಗೆ ಮಲೆಯಾಳಂ ನಟ ಜಯರಾಮ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.