“ನಾರಾಯಣ’ ಟ್ರೇಲರ್ಗೆ ಮೆಚ್ಚುಗೆ
Team Udayavani, Nov 30, 2019, 7:01 AM IST
ರಕ್ಷಿತ್ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್ ಗುರುವಾರ (ನ. 28) ಅದ್ಧೂರಿಯಾಗಿ ಹೊರಬಂದಿದೆ. ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ಗೆ ಎಲ್ಲಾ ಭಾಷೆಗಳಲ್ಲೂ ದೊಡ್ಡ ಪ್ರತಿಕ್ರಿಯೆ ಸಿಗುತ್ತಿದೆ.
ಕನ್ನಡದಲ್ಲಿ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಟ್ರೇಲರ್ ನೋಡಿರುವ ನಟ ಸುದೀಪ್, ಪುನೀತ್ ರಾಜಕುಮಾರ್, ಶಿವರಾಜಕುಮಾರ್, ನಿರ್ದೇಶಕ ಪ್ರಶಾಂತ್ ನೀಲ್, ಅನೂಪ್ ಭಂಡಾರಿ, ನಿರೂಪ್ ಭಂಡಾರಿ ಮೊದಲಾದ ಸ್ಟಾರ್ ನಟರು, ನಿರ್ದೇಶಕರು, ನಿರ್ಮಾಪಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಚಿತ್ರಕ್ಕೆ ಶುಭ ಕೋರಿದ್ದಾರೆ.
ಇನ್ನು ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಧನುಶ್, ಮಲಯಾಳಂನಲ್ಲಿ ನಿವಿನ್ ಪೌಲ್ ಸೇರಿದಂತೆ ಬೇರೆ ಬೇರೆ ಚಿತ್ರರಂಗದ ಅನೇಕ ಸ್ಟಾರ್ ನಟರು ಮತ್ತು ತಂತ್ರಜ್ಞರು ಕೂಡ ನಾರಾಯಣನಿಗೆ ಜೈಕಾರ ಹಾಕುತ್ತಿದ್ದಾರೆ. ಒಟ್ಟಾರೆ ತೆರೆಗೆ ಬರೋದಕ್ಕೂ ಮುಂಚೆಯೇ ನಾರಾಯಣನ ಸೌಂಡ್ ಜೋರಾಗುತ್ತಿದ್ದು, ಚಿತ್ರದ ಬಿಡುಗಡೆಯತ್ತ ಎಲ್ಲರ ಗಮನ ನೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ