ಸೆಂಟಿಮೆಂಟ್ ಆರಾಧ್ಯ: ಕಿರುಚಿತ್ರದಲ್ಲಿ ಅಪ್ಪ, ಮಗಳ ಬಾಂಧವ್ಯ
Team Udayavani, Sep 21, 2021, 4:39 PM IST
ಅಪ್ಪ-ಮಗಳ ಸೆಂಟಿಮೆಂಟ್ ಅಂಶಗಳನ್ನಿಟ್ಟುಕೊಂಡು ತಯಾರಾಗಿರುವ “ಆರಾಧ್ಯ’ ಎಂಬ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈ ಕಿರುಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಜೊತೆಗೆ ಚಿತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಲಾಕ್ಡೌನ್ನಲ್ಲಿ ಸಾಕಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿದ್ದ ಯತಿರಾಜ್, “ಆರಾಧ್ಯ’ ಮೂಲಕ ಹದಿನೆಂಟನೇ ಕಿರುಚಿತ್ರ.
ಇದನ್ನೂ ಓದಿ:ಕಿಟ್ಟಿ ‘ಗೌಳಿ’ಗೆ ಮುಹೂರ್ತ: ಪಾವನಾ ಗೌಡ ನಾಯಕಿ
ತಮ್ಮ ಕಿರುಚಿತ್ರದ ಬಗ್ಗೆ ಮಾತನಾಡುವ ಯತಿರಾಜ್, “ಕಳೆದ ವರ್ಷ ಕೊರೊನಾ ಬಂದ ಮೇಲೆ ಆಯಾ ಸಂದರ್ಭಕ್ಕೆ ತಕ್ಕ ಹಾಗೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಆದರೆ ಆರಾಧ್ಯ ತುಂಬಾ ಮನಸ್ಸಿಗೆ ಹತ್ತಿರವಾಯಿತು. ಮನೆಯಲ್ಲಿ ತಂದೆಯಾದವನಿಗೆ ಜವಾಬ್ದಾರಿ ಇಲ್ಲದೇ ಇಲ್ಲದಾಗ, ಮಕ್ಕಳಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದನ್ನು ಹೇಳುವುದೇ ಇದರ ಕಥೆ’ ಎಂದರು.
ಕಿರುಚಿತ್ರದಲ್ಲಿ ಬೇಬಿ ಆರಾಧ್ಯ ನಟಿಸಿದ್ದಾರೆ. “ನಾನು ಮೂರು ಕಿರುಚಿತ್ರಗಳಲ್ಲಿ ನಟಿಸಿದ್ದೇನೆ. ಅದರಲ್ಲಿ ಎರಡು ಯತಿರಾಜ್ ಅವರ ಜೊತೆ. ನಮ್ಮ ಕಿರುಚಿತ್ರವನ್ನು ನೋಡಿ ಹರಸಿ’ ಎಂಬುದು ಆರಾಧ್ಯ ಮನವಿ. ಉಳಿದಂತೆ ಅಂಜಲಿ, ಶಾಂತಕುಮಾರ್ ನಟಿಸಿದ್ದಾರೆ. ಕಿರು ಚಿತ್ರಕ್ಕೆ ಜೀವನ್ ಅವರ ಛಾಯಾಗ್ರಹಣ, ಸಂಕಲನ ಹಾಗೂ ವಿನು ಮನಸು ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!