ನಟ ಸುದೀಪ್ ವಿರುದ್ಧ ಅರೆಸ್ಟ್ ವಾರಂಟ್; ಏನಿದು ಪ್ರಕರಣ
Team Udayavani, Mar 27, 2019, 2:59 PM IST
ಚಿಕ್ಕಮಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯ ಬುಧವಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.
ಸುದೀಪ್ ಅವರ ನಿರ್ಮಾಣದ ವಾರಸ್ಥಾರ ಧಾರವಾಹಿ ಚಿತ್ರೀಕರಣಕ್ಕಾಗಿ ದೀಪಕ್ ಮಯೂರ್ ಎಂಬವರ ಮನೆ, ತೋಟವನ್ನು ಬಾಡಿಗೆ ನೆಲೆಯಲ್ಲಿ ನೀಡಲಾಗಿದ್ದು, ಈ ಸಂದರ್ಭದಲ್ಲಿ ಧಾರವಾಹಿ ತಂಡ ತೋಟವನ್ನು ಹಾಳುಗೆಡವಿದ್ದಲ್ಲದೇ, ಬಾಡಿಗೆ ಹಣ ನೀಡದೆ ವಂಚಿಸಿರುವುದಾಗಿ ದೂರಿ ದೀಪಕ್ ದೂರು ದಾಖಲಿಸಿದ್ದರು.
ಸುಮಾರು ಒಂದೂವರೆ ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಿದ್ದು, ಈ ಹಣವನ್ನು ತಮಗೆ ವಾಪಸ್ ಕೊಡಬೇಕೆಂದು ದೀಪಕ್ ಧಾರಾವಾಹಿ ತಂಡಕ್ಕೆ ತಿಳಿಸಿದ್ದರು. ಆದರೆ ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಬುಧವಾರ ಕೋರ್ಟ್ ಗೆ ಹಾಜರಾಗಬೇಕಾಗಿತ್ತು. ಆದರೆ ಸುದೀಪ್ ಇಂದು ವಿಚಾರಣೆಗೆ ಗೈರುಹಾಜರಾಗಿದ್ದರಿಂದ ಜೆಎಂಎಫ್ ಸಿ ಕೋರ್ಟ್ ಅರೆಸ್ಟ್ ವಾರಂಟ್ ಹೊರಡಿಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್