ವರ್ಸಟೈಲ್ ನಟಿ ಎಂದು ಕರೆಸಿಕೊಳ್ಳುವಾಸೆ; ವೈಭವಿ ಶಾಂಡಿಲ್ಯ ಮನದ ಮಾತು
Team Udayavani, Sep 19, 2022, 2:34 PM IST
“ಗಾಳಿಪಟ-2′ ಸಿನಿಮಾದಲ್ಲಿ ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಗಮನ ಸೆಳೆದ ನಟಿ ವೈಭವಿ ಶಾಂಡಿಲ್ಯ ಸದ್ಯ ಕನ್ನಡದಲ್ಲಿ ಧ್ರುವ ಸರ್ಜಾ ಅಭಿನಯದ “ಮಾರ್ಟಿನ್’ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಮೂಲತಃ ಮರಾಠಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ವೈಭವಿ, ಬಳಿಕ ತೆಲುಗು, ಆ ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ ಚೆಲುವೆ. “ರಾಜ್-ವಿಷ್ಣು’ ಸಿನಿಮಾದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದ ವೈಭವಿ ಶಾಂಡಿಲ್ಯಗೆ, ಇತ್ತೀಚೆಗೆ ತೆರೆಕಂಡ “ಗಾಳಿಪಟ-2′ ದೊಡ್ಡ ಬ್ರೇಕ್ ತಂದುಕೊಟ್ಟಿದೆ. “ಗಾಳಿಪಟ-2′ ಸಿನಿಮಾದ ಸಕ್ಸಸ್ ನಂತರ ವೈಭವಿ “ಮಾರ್ಟಿನ್’ ಸಿನಿಮಾದಲ್ಲಿ ಬಿಝಿಯಾಗಿದ್ದು, ಇದರ ನಡುವೆಯೇ ಸಾಕಷ್ಟು ಆಫರ್ಗಳು ವೈಭವಿ ಬರುತ್ತಿವೆಯಂತೆ.
“ಈಗಾಗಲೇ ಒಂದಷ್ಟು ಕಥೆಗಳನ್ನು ಕೇಳಿದ್ದೇನೆ. ಆದರೆ, ಯಾವುದನ್ನೂ ಓಕೆ ಮಾಡಿಲ್ಲ. ನಾನೊಬ್ಬ ವರ್ಸಟೈಲ್ ನಟಿ ಎಂದು ನಿರೂಪಿಸಬೇಕು. ಎಂತಹ ಪಾತ್ರಗಳನ್ನಾದರೂ ಮಾಡಬಲ್ಲೇ ಎಂದು ತೋರಿಸಬೇಕು. ಹಾಗಾಗಿ, ಅಂತಹ ಪಾತ್ರಗಳ ಹುಡುಕಾಟದಲ್ಲಿದ್ದೇನೆ. ಸದ್ಯದಲ್ಲೇ ಅದರ ಕುರಿತ ಒಂದು ಒಳ್ಳೆಯ ಮಾಹಿತಿ ನೀಡುತ್ತೇನೆ. ಎಲ್ಲ ತರಹದ ಪಾತ್ರಗಳನ್ನು, ಎಲ್ಲ ಶೈಲಿಯ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಲು ಇಚ್ಚಿಸುತ್ತೆನೆ. ಸದ್ಯಕ್ಕೆ ಯಾವುದೇ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿಲ್ಲ’ ಎನ್ನುತ್ತಾರೆ ವೈಭವಿ.
ಇದನ್ನೂ ಓದಿ:ಯಾತ್ರೆ ನಡೆಯುವುದು ವ್ಯಕ್ತಿಯಿಂದಲ್ಲ, ಪಕ್ಷದಿಂದ: ಸ್ವಪಕ್ಷೀಯರಿಗೆ ಟಾಂಗ್ ನೀಡಿದ ದೇಶಪಾಂಡೆ
“ಸದ್ಯಕ್ಕೆ ನನ್ನ ಗಮನ “ಮಾರ್ಟಿನ್’ ಸಿನಿಮಾದ ಕಡೆಗಿದೆ. ಅದು ಇನ್ನೊಂದು ಅದ್ಭುತವಾದ ಅನುಭವ. ನನ್ನ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಕೂಡಾ ಹೌದು. ಈ ಪಾತ್ರ ನನ್ನ ನಿಜಜೀವನಕ್ಕೆ ಬಹಳ ಹತ್ತಿರವಾಗಿದೆ. ಬಬ್ಲಿ ಹುಡುಗಿಯಾಗಿ, ಯಾರಿಗೂ ಹೆದರದ, ಜೀವನದಲ್ಲಿ ಏನಾದರೂ ಸಾಧಿಸುವ ಆಸೆ ಹೊತ್ತಿರುವ ಗಟ್ಟಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ’ ಎನ್ನುತ್ತಾರೆ ವೈಭವಿ.
ಇನ್ನು ವೈಭವಿ ಮುಂಬೈನಲ್ಲಿ ತಮ್ಮ ಕುಟುಂಬದವರೊಡನೆ “ಗಾಳಿಪಟ-2′ ಸಿನಿಮಾ ನೋಡುವುದಕ್ಕೆ ಹೋಗಿದ್ದರಂತೆ. ಸಿನಿಮಾ ನೋಡುವುದಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದ ಜನ ವೈಭವಿಯವರನ್ನು ಗುರುತಿಸಿ ಪ್ರೀತಿಯಿಂದ ಮಾತನಾಡಿಸಿದ್ದು ನಿಜಕ್ಕೂ ಮರೆಯಲಾಗದು ಎನ್ನುತ್ತಾರೆ ವೈಭವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ