ಹೊಸಬರ ‘ಅಸ್ಥಿರ’ ಚಿತ್ರ
Team Udayavani, Sep 15, 2022, 5:28 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ಅಸ್ಥಿರ’ ಸಿನಿಮಾದ ಪೋಸ್ಟರ್, ಟೀಸರ್ ಮತ್ತು ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್, ನಿರ್ಮಾಪಕರಾದ ಸೆಬಾಸ್ಟಿನ್ ಡೇವಿಡ್, ಕೆ. ಎನ್ ನಾಗೇಗೌಡ್ರು, ನಿತ್ಯಾನಂದಪ್ರಭು ಮತ್ತು ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಅಸ್ಥಿರ’ ಸಿನಿಮಾದ ಪೋಸ್ಟರ್, ಟೀಸರ್ ಮತ್ತು ಲಿರಿಕಲ್ ವಿಡಿಯೋ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಸಿನಿಮಾದ ಕಥಾಹಂದರದ ಬಗ್ಗೆ ಮಾತನಾಡಿದ ಚಿತ್ರತಂಡ, “ಇದೊಂದು ತ್ರಿಕೋನ ಪ್ರೇಮಕಥೆಯ ಸಿನಿಮಾ. ಇಡೀ ಸಿನಿಮಾದಲ್ಲಿ ಒಂದು ಪ್ರಯಾಣವಿದೆ. ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸ್ಥಿಮಿತ ಮನಸ್ಥಿತಿ ಇಲ್ಲದಿರುವ ಸಾಮಾನ್ಯ ಹುಡುಗನೊಬ್ಬ ಪ್ರೀತಿಯಲ್ಲಿ ಸೋತಾಗ, ಯಾವ ರೀತಿ ಇರುತ್ತಾನೆ ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ನಡೆಯುತ್ತದೆ, ಸೆಸ್ಪೆನ್ಸ್ ಮಾದರಿಯಲ್ಲಿ ತೋರಿಸಲಾಗಿದೆ’ ಎಂದು ವಿವರಣೆ ನೀಡಿತು.
ನವ ಪ್ರತಿಭೆಗಳಾದ ಅನಿಲ್, ಕಾವೇರಿ, ಪ್ರಮೋದ್, ಭುವನ, ಹರಿಣಿ ಮೊದಲಾದವರು “ಅಸ್ಥಿರ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ವಿರಾಜ್ ಫಿಲಂ ರೆಕಾರ್ಡಿಂಗ್ ಸ್ಟುಡಿಯೋ’ ಬ್ಯಾನರ್ನಲ್ಲಿ ಅನಿಲ್ ಸಿ. ಆರ್ ನಿರ್ಮಿಸುತ್ತಿರುವ “ಅಸ್ಥಿರ’ ಸಿನಿಮಾಕ್ಕೆ ಪ್ರಮೋದ್ ಎಸ್. ಆರ್ ನಿರ್ದೇಶನವಿದೆ.
ನಿತಿನ್ ರಾಜ್ ಸಂಗೀತ ಸಂಯೋಜನೆಯ ನಾಲ್ಕು ಹಾಡುಗಳಿಗೆ ಸಿದ್ದು ಅರಸು ಸಾಹಿತ್ಯವಿದೆ. ಚಿತ್ರಕ್ಕೆ ವಿನೋದ್. ಆರ್ ಛಾಯಾಗ್ರಹಣ, ಆಯುರ್ ಸ್ವಾಮಿ ಸಂಕಲನ, ಗಣೇಶ್ ಸಾಹಸ ನಿರ್ದೇಶನವಿದೆ. ಕುಮಟಾ, ಹೊನ್ನಾವರ, ಬನ್ನೂರು ಮೊದಲಾದ ಕಡೆಗಳಲ್ಲಿ “ಅಸ್ಥಿರ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಸದ್ಯ “ಅಸ್ಥಿರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೇ ನವೆಂಬರ್ ವೇಳೆಗೆ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು