67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಅಕ್ಷಿ ಅತ್ಯುತ್ತಮ ಕನ್ನಡ ಸಿನಿಮಾ
ತುಳು ಭಾಷೆಯ ಪಿಂಗಾರಾ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ.
Team Udayavani, Mar 22, 2021, 5:57 PM IST
ಬೆಂಗಳೂರು : 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೋಮವಾರ(ಮಾರ್ಚ್ 22) ಪ್ರಕಟಗೊಂಡಿದ್ದು, ಕನ್ನಡದ ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಹಾಗೂ ತುಳು ಭಾಷೆಯ ಪಿಂಗಾರಾ ಚಿತ್ರಗಳು ಪ್ರಶಸ್ತಿ ಬಾಚಿಕೊಂಡಿವೆ.
ಚಂದನವನದಲ್ಲಿ ಅಮೋಘ ಪ್ರದರ್ಶನ ಕಂಡು ಬ್ಲಾಕ್ ಬಸ್ಟರ್ ಚಿತ್ರಗಳ ಸಾಲಿಗೆ ಸೇರಿದ್ದ ಅವನೇ ಶ್ರೀಮನ್ನಾರಾಯಣ ಚಿತ್ರದ ಸಾಹಸ ನಿರ್ದೇಶನಕ್ಕೆ ರಾಷ್ಟ್ರೀಯ ಪ್ರಶಸ್ತಿ ಗರಿ ಒದಗಿದೆ. ಈ ಚಿತ್ರಕ್ಕೆ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ಮಾಡಿದ್ದರು.
ಇನ್ನು ಬೆಸ್ಟ್ ಬುಕ್ ಆನ್ ಸಿನಿಮಾ ವಿಭಾಗದಲ್ಲಿ ಎರಡನೇ ವಿಜೇತರಾಗಿ ಪಿ.ಆರ್ ರಾಮದಾಸ ನಾಯ್ಡು ಆಯ್ಕೆ ಆಗಿದ್ದಾರೆ. ಅವರು ‘ಜಾಗತಿಕ ಸಿನಿಮಾ’ ಹೆಸರಿನ ಪುಸ್ತಕ ಬರೆದಿದ್ದರು.
ಕೋವಿಡ್ ಪಿಡುಗು ಹಿನ್ನೆಲೆಯಲ್ಲಿ 2019ರಲ್ಲಿ ಪ್ರಶಸ್ತಿ ಘೋಷಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ, ಈಗ ಘೋಷಣೆಯನ್ನು ಮಾಡಲಾಗಿದೆ. ಕನ್ನಡದ ‘ಅಕ್ಷಿ’ ಚಿತ್ರ ಹಾಗೂ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ನಟನೆಯ ಹಿಂದಿಯ ಚಿಚೋರ್ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದುಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ