ಸಿನಿಮಾಗೆ ಬಣ್ಣ ಹಚ್ಚುತ್ತಿದ್ದಾರಂತೆ ಬಿಎಸ್ ಯಡಿಯೂರಪ್ಪ!
Team Udayavani, Feb 22, 2022, 3:31 PM IST
ಕರ್ನಾಟಕದ ಅನೇಕ ರಾಜಕಾರಣಿಗಳು ಈಗಾಗಲೇ ಹಲವು ಸಿನಿಮಾಗಳಲ್ಲಿ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚುವ ಮೂಲಕ ಬೆಳ್ಳಿತೆರೆ ಮೇಲೂ ದರ್ಶನ ಕೊಟ್ಟಿದ್ದಾರೆ. ಈಗ ಆ ಸಾಲಿಗೆ ಸೇರುತ್ತಿರುವ ಮತ್ತೂಬ್ಬರು ರಾಜಕಾರಣಿ ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ.
ಹೌದು, ಬಿಎಸ್ವೈ “ತನುಜಾ’ ಎಂಬ ಚಿತ್ರದಲ್ಲಿ ಮೊದಲ ಬಾರಿಗೆ ಅತಿಥಿ ಪಾತ್ರಕ್ಕೆ ಬಣ್ಣ ಹಚ್ಚುವ ಮೂಲಕ ಬಿಗ್ಸ್ಕ್ರೀನ್ಗೆ ಎಂಟ್ರಿಯಾ ಗುತ್ತಿದ್ದಾರೆ. ಬಿಎಸ್ವೈ ಮುಖ್ಯಮಂತ್ರಿ ಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದಳು. ಸಂದರ್ಭದಲ್ಲಿ ಸರ್ಕಾರ ನೀಡಿದ ಸಹಕಾರದಿಂದಾಗಿ ಆಕೆ ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದಳು. ಇದನ್ನೇ “ತನುಜಾ’ ಚಿತ್ರದ ಕಥೆಯ ಒಂದು ಎಳೆಯಾಗಿಟ್ಟುಕೊಂಡು ಹರೀಶ್ ಎಂ.ಡಿ ಹಳ್ಳಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನೂ ಓದಿ:ಮಾತಿನ ಮಲ್ಲಿ ಆರ್ ಜೆ ರಚನಾ ಹೃದಯಾಘಾತದಿಂದ ನಿಧನ
ಇನ್ನು ಈ ಚಿತ್ರದಲ್ಲೂ ಸಿ.ಎಂ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ಬಿಎಸ್ವೈ ತೆರೆಮೇಲೆ ಹೇಗೆ ಕಾಣುತ್ತಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್