ಬಬ್ರೂ ಜೊತೆ ಮತ್ತೆ ಬಂದ ಬೆಳದಿಂಗಳ ಬಾಲೆ!


Team Udayavani, Dec 2, 2019, 7:32 PM IST

2-December-36

ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ನಿಷ್ಕರ್ಷ ಚಿತ್ರದ ಮೂಲಕವೇ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಸುಮನ್ ನಗರ್‌ಕರ್. ಆ ನಂತರದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದರೂ ಅವರು ಕನ್ನಡಿಗರ ಮನಸುಗಳಲ್ಲಿ ಹಸಿರಾಗಿರೋದು ಬೆಳದಿಂಗಳ ಬಾಲೆಯಾಗಿಯೇ. ಹೀಗೆ ತಾವು ನಟಿಸಿದ ಸಿನಿಮಾ ಪಾತ್ರಗಳ ಮೂಲಕವೇ ಕನ್ನಡದಲ್ಲಿ ಅಭಿಮಾನಿ ಬಳಗವನ್ನು ಹೊಂದಿರುವ ಸುಮನ್ ಇದೀಗ ಬಬ್ರೂ ಜೊತೆಗೆ ಮತ್ತೆ ಬಂದಿದ್ದಾರೆ. ಈ ಸಿನಿಮಾ ನಿರ್ಮಾಣದ ಜವಾಬ್ದಾರಿಯೊಂದಿಗೆ ಪ್ರಧಾನ ಪಾತ್ರದ ಮೂಲಕ ಮತ್ತೆ ತಮ್ಮ ಪ್ರೀತಿಯ ಪ್ರೇಕ್ಷಕರನ್ನು ಭೇಟಿಯಾಗ ಬಂದಿದ್ದಾರೆ.

ಯುಗ ಕ್ರಿಯೇಷನ್ಸ್ ಹಾಗೂ ಸುಮನ್‌ನಗರ್‌ಕರ್ ಪೊಡ್ರಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರ ಇದೇ ಡಿಸೆಂಬರ್ 6ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಕನ್ನಡ ಸಿನಿಮಾಗಳು ಬಾಲಿವುಡ್, ಹಾಲಿವುಡ್ ರೇಂಜಿಗಿರಬೇಕೆಂಬ ಆಸೆ ಪ್ರತೀ ಪ್ರೇಕ್ಷಕರಲ್ಲಿಯೂ ಇದೆ. ಇತ್ತೀಚಿನ ದಿನಗಳಲ್ಲಿ ಅಂಥಾ ಆಸೆಗಳೆಲ್ಲವೂ ಹಂತ ಹಂತವಾಗಿ ನೆರವೇರಿಕೊಳ್ಳುತ್ತಿವೆ. ಆದರೆ ಈ ಸಿನಿಮಾ ಥೇಟೆ ಹಾಲುವುಡ್ ಮೂವಿಯಂತೆಯೇ ಮೂಡಿ ಬಂದಿದೆ. ಸಂಪೂರ್ಣವಾಗಿ ಅಮೆರಿಕದಲ್ಲಿಯೇ ಚಿತ್ರೀಕರಣಗೊಂಡ ಏಕೈಕ ಚಿತ್ರವೆಂಬ ಮಹಾ ಹೆಗ್ಗಳಿಕೆಯೂ ಈ ಚಿತ್ರಕ್ಕಿದೆ.

ಈ ಚಿತ್ರದಲ್ಲಿ ಸುಮನ್ ನಗರರ್‌ಕರ್ ಚೆಂದದ ಪಾತ್ರವನ್ನು ನಿರ್ವಹಿಸಿದ್ದಾರೆ. ಮೊನ್ನೆ ಬಿಡುಗಡೆಗೊಂಡಿರುವ ಟ್ರೇಲರ್‌ನಲ್ಲಿ ಅದರ ಒಂದಷ್ಟು ಗುಣ ಲಕ್ಷಣಗಳು ಕಾಣಿಸಿವೆ. ಅವರು ಈ ವರೆಗೇ ಹಲವಾರು ನೆನಪಿಟ್ಟುಕೊಳ್ಳುವಂಥಾ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅದರಲ್ಲಿ ಬಬ್ರೂ ಪಾತ್ರವೂ ಸೇರಿಕೊಳ್ಳಲಿದೆ ಎಂಬ ನಂಬಿಕೆ ಚಿತ್ರತಂಡದಲ್ಲಿದೆ. ನಿಷ್ಕರ್ಷ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಆ ನಂತರದಲ್ಲಿ ಸುಮನ್ ಬಹು ಬೇಡಿಕೆಯ ನಟಿಯಾಗಿ ಮಿಂಚಿದ್ದರು. ನಂತರ ನಮ್ಮೂರ ಮಂದಾರ ಹೂವೆ, ಬೆಳದಿಂಗಳ ಬಾಲೆ ಚಿತ್ರಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತ್ತು. ಸುಜಯ್ ರಾಮಯ್ಯ ನಿರ್ದೇಶನದ ಈ ಚಿತ್ರ ಕೂಡಾ ಸುಮನ್ ನಗರ್‌ಕರ್ ಅವರ ಹಿಟ್ ಯಾನದಲ್ಲೊಂದಾಗಿ ದಾಖಲಾಗೋ ಲಕ್ಷಣಗಳಿದ್ದಾವೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.