ಬ್ಯಾಕ್‌ ಟು ಬ್ಯಾಕ್‌ ರವಿಚಂದ್ರನ್‌

ಅಭಿಮಾನಿಗಳಿಗೆ ಡಬ್ಬಲ್‌ ಧಮಾಕ

Team Udayavani, Apr 22, 2019, 3:00 AM IST

ravichandra

ರವಿಚಂದ್ರನ್‌ ಅಭಿಮಾನಿಗಳಿಗೆ ಡಬ್ಬಲ್‌ ಧಮಾಕ. ಹೌದು, ಕಳೆದ ಶುಕ್ರವಾರವಷ್ಟೇ ರವಿಚಂದ್ರನ್‌ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ “ಪಡ್ಡೆಹುಲಿ’ ಚಿತ್ರ ಬಿಡುಗಡೆಯಾಗಿತ್ತು. ಈಗ ಏಪ್ರಿಲ್‌ 26 ರಂದು ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ “ದಶರಥ’ ಚಿತ್ರ ಬಿಡುಗಡೆಯಾಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಡಬ್ಬಲ್‌ ಧಮಾಕ ಅಂದರೆ ತಪ್ಪಿಲ್ಲ.

ಹಾಗೆ ನೋಡಿದರೆ, “ದಶರಥ’ ಏಪ್ರಿಲ್‌ 5 ರಂದೇ ಬಿಡುಗಡೆಯಾಗಬೇಕಿತ್ತು. ಕಾರಣಾಂತರಗಳಿಂದಾಗಿ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಈಗ ಬಿಡುಗಡೆಯ ದಿನ ಪಕ್ಕಾ ಆಗಿದೆ. ಏಪ್ರಿಲ್‌ 26 ರಂದು “ದಶರಥ’ನ ದರ್ಶನವಾಗುತ್ತಿದೆ. ರವಿಚಂದ್ರನ್‌ ಅವರಿಗೂ ಇದೊಂಥರಾ ಡಬ್ಬಲ್‌ ಧಮಾಕ ಇದ್ದಂತೆ.

ಯಾಕೆಂದರೆ, ಏ.26 ರಂದು “ದಶರಥ’ ಬಿಡುಗಡೆಯಾದರೆ, ಮೇ.29 ರಂದು ಅವರ ಪ್ರೀತಿಯ ಪುತ್ರಿಯ ವಿವಾಹ ನೆರವೇರಲಿದೆ. ಹಾಗಾಗಿ ಈ ಎರಡು ಸಂಭ್ರಮದಲ್ಲಿರುವ ರವಿಚಂದ್ರನ್‌, ಈ ಬಾರಿ ಅಭಿಮಾನಿಗಳ ಮೊಗದಲ್ಲೂ ಮಂದಹಾಸ ಮೂಡಿಸಲು ಸಜ್ಜಾಗಿದ್ದಾರೆ. ರವಿಚಂದ್ರನ್‌ ಈಗಾಗಲೇ ಸ್ಟಾರ್‌ ನಟರ ಚಿತ್ರಗಳಲ್ಲಿ ನಾಯಕರಿಗೆ ತಂದೆಯಾಗಿ, ಸಹೋದರನಾಗಿ ನಟಿಸಿದ್ದುಂಟು.

ಅಷ್ಟೇ ಅಲ್ಲ, ಹೊಸಬರ ಚಿತ್ರಗಳಲ್ಲೂ ತಂದೆ ಪಾತ್ರ ಮಾಡಿದ್ದಾರೆ. ಕಳೆದ ವಾರ ತೆರೆಕಂಡ “ಪಡ್ಡೆಹುಲಿ’ ಚಿತ್ರದಲ್ಲಿ ರವಿಚಂದ್ರನ್‌ ಅವರು ಯುವ ನಟ ಶ್ರೇಯಸ್‌ ಅವರ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಚಿತ್ರದಲ್ಲಿ ಅವರು ಮಗನನ್ನು ತುಂಬಾ ಪ್ರೀತಿಯಿಂದ ಕಾಣುವ, ಅವನ ಎಲ್ಲಾ ಹೆಜ್ಜೆಯನ್ನೂ ಪ್ರೋತ್ಸಾಹಿಸುವ ಸಜ್ಜನ ತಂದೆಯಾಗಿ ಮತ್ತು ಕನ್ನಡ ಭಾಷೆ, ಸಾಹಿತ್ಯ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಕನ್ನಡಿಗನ ಪಾತ್ರ ಮಾಡಿದ್ದಾರೆ.

ಆ ಚಿತ್ರದ ಪಾತ್ರವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆ ಸಿನಿಮಾ ನೋಡಿದ ಬೆನ್ನಲ್ಲೇ ಅವರು “ದಶರಥ’ ಮೂಲಕ ಅಭಿಮಾನಿಗಳಿಗೆ ಮತ್ತೂಂದು ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. “ದಶರಥ’ ಚಿತ್ರದಲ್ಲಿ ಅವರು ಲಾಯರ್‌ ಪಾತ್ರ ನಿರ್ವಹಿಸಿದ್ದಾರೆ. ಸುಮಾರು ಒಂದು ದಶಕದ ಬಳಿಕ ಅವರು ಲಾಯರ್‌ ಪಾತ್ರಕ್ಕೆ ಪುನಃ ಬಣ್ಣ ಹಚ್ಚಿರುವುದು ವಿಶೇಷ.

ಇಲ್ಲಿ “ದಶರಥ’ ಅಂದಾಕ್ಷಣ ರಾಮನ ಆದರ್ಶ ತಂದೆಯ ನೆನಪಾಗುತ್ತದೆ. ಅದೇ ರೀತಿಯ ಒಬ್ಬ ಆದರ್ಶ ತಂದೆ ಈ ಚಿತ್ರದಲ್ಲೂ ಸಿಗಲಿದ್ದಾನಂತೆ. ಈ ಚಿತ್ರದಲ್ಲಿ “ದಶರಥ’ ತನ್ನ ಮಕ್ಕಳ ಕಷ್ಟಕ್ಕೆ ಹೆಗಲಾಗಿ, ಅವರನ್ನು ಪ್ರೋತ್ಸಾಹಿಸುತ್ತಾನೆ. ತನ್ನ ಕುಟುಂಬಕ್ಕೆ ಎದುರಾಗುವ ಒಂದು ಅಪಾಯವನ್ನು ಹೇಗೆ ಎದುರಿಸುತ್ತಾನೆ ಎಂಬುದು ಕಥೆ.

ಚಿತ್ರವನ್ನು ಎಂ.ಎಸ್‌ ರಮೇಶ್‌ ನಿರ್ದೇಶಿಸಿದ್ದಾರೆ. ಸೋನಿಯಾ ಅಗರ್‌ವಾಲ್‌, ಅಭಿರಾಮಿ, ರಂಗಾಯಣ ರಘು, ಅವಿನಾಶ್‌, ಶೋಭರಾಜ್‌, ತಬಲ ನಾಣಿ, ಮೇಘಶ್ರೀ ಇತರರು ಇದ್ದಾರೆ. ಗುರುಕಿರಣ್‌ ಸಂಗೀತವಿದೆ. ಜಿ.ಎಸ್‌.ವಿ ಸೀತಾರಾಮ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.