ಭಜರಂಗಿ-2 ಮತ್ತೆ ಪ್ರದರ್ಶನ ಶುರು…


Team Udayavani, Nov 3, 2021, 11:14 AM IST

ಭಜರಂಗಿ-2 ಮತ್ತೆ ಪ್ರದರ್ಶನ ಶುರು…

ಕಳೆದ ಶುಕ್ರವಾರ (ಅ. 29) ತೆರೆಕಂಡ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರ ಭರ್ಜರಿಯಾಗಿ ಓಪನಿಂಗ್‌ ಪಡೆದುಕೊಂಡಿತ್ತು. ಫ‌ಸ್ಟ್‌ ಡೇ ಫ‌ಸ್ಟ್‌ ಶೋ ಕಣ್ತುಂಬಿಕೊಳ್ಳಲು ಶಿವಣ್ಣನ ಫ್ಯಾನ್ಸ್‌ ಕಾತುರರಾಗಿದ್ದು, ಬೆಳಿಗ್ಗೆ 5 ಗಂಟೆಯಿಂದಲೇ “ಭಜರಂಗಿ-2′ ಚಿತ್ರದ ಪ್ರದರ್ಶನ ರಾಜ್ಯದ ಹಲವೆಡೆ ಶುರುವಾಗಿತ್ತು.

ನಟ ಶಿವರಾಜಕುಮಾರ್‌ ಕೂಡ ಬೆಳ್ಳಂಬೆಳಿಗ್ಗೆ ಹಲವು ಥಿಯೇಟರ್‌ ಗಳಿಗೆ ಭೇಟಿ ಕೊಟ್ಟಿದ್ದರು. “ಭಜರಂಗಿ-2′ ತೆರೆಕಂಡ ರಾಜ್ಯದ ಬಹುತೇಕ ಚಿತ್ರಮಂದಿರಗಳ ಮುಂದೆ ಹೌಸ್‌ಫ‌ುಲ್‌ ಬೋರ್ಡ್‌ಗಳು ಬಿದ್ದಾಗಿತ್ತು. ಆದರೆ ಮಧ್ಯಾಹ್ನದ ಹೊತ್ತಿಗೆ ಇಡೀ ಚಿತ್ರೋದ್ಯಮದ ಚಿತ್ರಣವೇ ಸಂಪೂರ್ಣ ಬದಲಾಗಿ ಹೋಯ್ತು. ಪುನೀತ್‌ ರಾಜಕುಮಾರ್‌ ನಿಧನದ ಸುದ್ಧಿ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಬಂದೆರಗಿತು. ಪುನೀತ್‌ ನಿಧನದ ಸುದ್ದಿ ಅಧಿಕೃತವಾಗಿ ಹೊರಬೀಳುತ್ತಿದ್ದಂತೆ, ಚಿತ್ರೋದ್ಯಮದ ಚಟುವಟಿಕೆಗಳು ಸಂಪೂರ್ಣ ಬಂದ್‌ ಆದವು.

ಪುನೀತ್‌ ಅಗಲಿಕೆಯ ದುಃಖದಿಂದ, ರಾಜ್ಯದ ಎಲ್ಲ ಚಿತ್ರಮಂದಿರಗಳು ಕೂಡ ಸ್ವಯಂಪ್ರೇರಿತವಾಗಿ ಸಿನಿಮಾಗಳ ಪ್ರದರ್ಶನವನ್ನು ಸ್ಥಗಿತಗೊಳಿಸಿದವು. ಇದರಿಂದಾಗಿ, ಅದ್ಧೂರಿಯಾಗಿ ಓಪನಿಂಗ್‌ ಪಡೆದುಕೊಂಡಿದ್ದ “ಭಜರಂಗಿ-2′ ಚಿತ್ರಕ್ಕೆ ಮೊದಲ ದಿನವೇ ದೊಡ್ಡ ಆಘಾತ ಎದುರಾಯಿತು. ಇದೀಗ ಪುನೀತ್‌ ರಾಜಕುಮಾರ್‌ ಅಂತ್ಯಕ್ರಿಯೆ, ಹಾಲು-ತುಪ್ಪ ಕಾರ್ಯ ಮುಗಿದಿದ್ದು, ಕಳೆದ ಐದಾರು ದಿನಗಳಿಂದ ಶೋಕಾಚರಣೆಯ ಸಲುವಾಗಿ ಸ್ಥಗಿತಗೊಂಡಿದ್ದ ಸಿನಿಮಾಗಳ ಚಿತ್ರೀಕರಣ, ಪ್ರದರ್ಶನ ಮತ್ತಿತರ ಚಟುವಟಿಕೆಗಳು ಮತ್ತೆ ಆರಂಭವಾಗಿದೆ. ಹಾಗೆಯೇ ಕಳೆದ ಶುಕ್ರವಾರ (ಅ. 29)ದ ಮಧ್ಯಾಹ್ನದಿಂದಲೇ ಸ್ಥಗಿತಗೊಂಡಿದ್ದ “ಭಜರಂಗಿ-2′ ಚಿತ್ರದ ಪ್ರದರ್ಶನ ಕೂಡ ಮತ್ತೆ ಶುರುವಾಗಿದೆ.

“ಭಜರಂಗಿ-2′ ಚಿತ್ರದ ಪ್ರದರ್ಶನಕ್ಕೆ ಪ್ರೇಕ್ಷಕರ ಸಂಖ್ಯೆಯಲ್ಲೂ ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ಈ ಬಗ್ಗೆ ಮಾತನಾಡುವ “ಭಜರಂಗಿ-2′ ಚಿತ್ರದ ನಿರ್ದೇಶಕ ಹರ್ಷ ಎ, “ನಮ್ಮ ಸಿನಿಮಾಕ್ಕೆ ತುಂಬ ಒಳ್ಳೆಯ ಓಪನಿಂಗ್‌ ಸಿಕ್ಕಿತ್ತು. ಸಿನಿಮಾ ನೋಡಿದವರಿಂದ ತುಂಬ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿತ್ತು. ಆದ್ರೆ ಪುನೀತ್‌ ರಾಜಕುಮಾರ್‌ ಅವರ ನಿಧನದಿಂದ ನಾವೇ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದೆವು. ಈಗ ಮತ್ತೆ ಪ್ರದರ್ಶನಗಳು ಶುರುವಾಗಿದ್ದು, ಪ್ರೇಕ್ಷಕರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಶೀಘ್ರದಲ್ಲಿಯೇ ಈ ವಾರದ ಬಳಿಕ ಥಿಯೇಟರ್‌ಗಳ ಸಂಖ್ಯೆಯಲ್ಲೂ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದಿದ್ದಾರೆ.

ಇದನ್ನೂ ಓದಿ;- 10 ದಿನದಲ್ಲಿ ಪೊಲೀಸರಿಗೆ ವಿಶೇಷ ಭತ್ಯೆ ಬಿಡುಗಡೆ

“ಭಜರಂಗಿ-2′ ಚಿತ್ರದ ಪ್ರೀ-ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಹಾಜರಿದ್ದ ನಟ ಪುನೀತ್‌ ರಾಜಕುಮಾರ್‌ “ಭಜರಂಗಿ-2′ ಚಿತ್ರದ ಹಾಡುಗಳು, ಟ್ರೇಲರ್‌ ಮತ್ತು ಮೇಕಿಂಗ್‌ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಆದಷ್ಟು ಬೇಗ ಸಿನಿಮಾವನ್ನು ನೋಡುವುದಾಗಿಯೂ ಹೇಳಿದ್ದರು. ಆದರೆ “ಭಜರಂಗಿ-2’ಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೂ, ಸಿನಿಮಾದ ಬಿಡುಗಡೆಗೂ ಮೊದಲೇ ಅದರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದ ಪುನೀತ್‌ ರಾಜಕುಮಾರ್‌ ಮಾತ್ರ ಸಿನಿಮಾ ನೋಡಲು ನಮ್ಮೊಂದಿಗೆ ಇಲ್ಲ ಎಂಬ ಬೇಸರ ಚಿತ್ರತಂಡದಲ್ಲಿ ಮನೆ ಮಾಡಿದೆ.

ಮೆಡಿಕಲ್‌ ಮಾಫಿಯಾ ಮತ್ತು ಪಾರಂಪರಿಕ ವೈದ್ಯಪದ್ದತಿ ಸುತ್ತ “ಭಜರಂಗಿ-2′ ಚಿತ್ರದ ಕಥೆಯನ್ನು ನಿರ್ದೇಶಕ ಹರ್ಷ ಹೆಣೆದಿದ್ದಾರೆ. “ಜಯಣ್ಣ ಫಿಲಂಸ್‌’ ಬ್ಯಾನರ್‌ನಲ್ಲಿ ಜಯಣ್ಣ ಮತ್ತು ಭೋಗೇಂದ್ರ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವರಾಜಕುಮಾರ್‌ಗೆ ಜೋಡಿಯಾಗಿ ಭಾವನಾ ಅಭಿನಯಿಸಿದ್ದಾರೆ. ಶ್ರುತಿ, ಲೋಕಿ, ಶಿವರಾಜ್‌ ಕೆ.ಆರ್‌ ಪೇಟೆ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆ ದೀಪಾವಳಿ ವೇಳೆಗೆ ಮತ್ತೆ ಸೌಂಡ್‌ ಮಾಡುತ್ತಿರುವ “ಭಜರಂಗಿ-2′ ಥಿಯೇಟರ್‌ ನತ್ತ ಪ್ರೇಕ್ಷಕರನ್ನು ಸೆಳೆಯುತ್ತಿದೆ.­

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.