“ಬಜಾರ್‌’ ಹೀರೋನಾ “ಬಂಪರ್‌’ ಕನಸು

ಧನ್ವೀರ್‌ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

Team Udayavani, Aug 27, 2019, 3:02 AM IST

Dhanveer

ಸುನಿ ನಿರ್ದೇಶನದ “ಬಜಾರ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾದ ಧನ್ವೀರ್‌, ಹೊಸ ಚಿತ್ರ ಮಾಡುತ್ತಿರುವುದಾಗಿ ಈ ಹಿಂದೆ ಘೋಷಣೆ ಮಾಡಿದ್ದು ಗೊತ್ತೇ ಇದೆ. ಆ ಚಿತ್ರವನ್ನು “ಭರಾಟೆ’ ನಿರ್ಮಾಪಕ ಸುಪ್ರೀತ್‌ ಅವರು ನಿರ್ಮಾಣ ಮಾಡುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಆ ಚಿತ್ರಕ್ಕೆ ಶೀರ್ಷಿಕೆ ಅಂತಿಮವಾಗಿರಲಿಲ್ಲ. ಈಗ ಧನ್ವೀರ್‌ ಅಭಿನಯದ ಎರಡನೇ ಚಿತ್ರಕ್ಕೆ ನಾಮಕರಣ ಮಾಡಲಾಗಿದೆ.

“ಬಂಪರ್‌’ ಎಂದು ಆ ಚಿತ್ರಕ್ಕೆ ಹೆಸರಿಡಲಾಗಿದೆ. ಆದರೆ, ಚಿತ್ರದ ನಾಯಕಿ ಮತ್ತು ನಿರ್ದೇಶಕರ ಆಯ್ಕೆ ಇನ್ನೂ ಆಗಿಲ್ಲ. ಸೆಪ್ಟೆಂಬರ್‌ 8 ರಂದು ಧನ್ವೀರ್‌ ಬರ್ತ್‌ಡೇ. ಅಂದು ನಿರ್ದೇಶಕರು ಯಾರು ಎಂಬುದು ಪಕ್ಕಾ ಆಗಲಿದೆ. ಅಂದಹಾಗೆ, “ಬಂಪರ್‌’ ಚಿತ್ರಕ್ಕೆ “ಬಹದ್ದೂರ್‌’ ಚೇತನ್‌ಕುಮಾರ್‌ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಹಾಗು ಸಾಹಿತ್ಯದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಆ ಕುರಿತು ಹೇಳುವ ಚೇತನ್‌, “ಸುನಿ ನಿರ್ದೇಶನದ “ಬಜಾರ್‌’ ಚಿತ್ರದ ಚಿತ್ರೀಕರಣ ಸಮಯದಲ್ಲೇ, ಧನ್ವೀರ್‌ ಅವರು, ನನ್ನ ಬಳಿ ಬಂದು ಒಳ್ಳೆಯ ಕಥೆ ಇದ್ದರೆ ಹೇಳಿ, ಸಿನಿಮಾ ಮಾಡೋಣ ಅಂತ ಹೇಳಿದ್ದರು. ಆಗ ನಾನು ಒನ್‌ಲೈನ್‌ ಸ್ಟೋರಿ ಹೇಳಿದ್ದೆ. ಅದು ಇಷ್ಟವಾಗಿದ್ದರಿಂದ ನೀವೇ ಅದಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಮಾಡಿಕೊಡಿ ಅಂದಿದ್ದರು. ಸುಪ್ರೀತ್‌ “ಭರಾಟೆ’ ನಿರ್ಮಾಪಕರು.

ಆ ಚಿತ್ರವನ್ನೂ ನಿರ್ಮಿಸುತ್ತಿದ್ದಾರೆ. ಹಾಗಾಗಿ, ನಾನೇ ಬರವಣಿಗೆಯಲ್ಲಿ ಕೆಲಸ ಮಾಡುತ್ತಿದ್ದೇನೆ’ ಎಂದು ವಿವರ ಕೊಡುವ ಚೇತನ್‌, ಸದ್ಯಕ್ಕೆ “ಭರಾಟೆ’ ಬಿಡುಗಡೆ ತಯಾರಿಯಲ್ಲಿದ್ದಾರೆ. ಅಕ್ಟೋಬರ್‌ನಲ್ಲಿ “ಭರಾಟೆ’ ತೆರೆಗೆ ಬರಲಿದ್ದು, ಅದಾದ ಬಳಿಕ ಪುನೀತ್‌ ರಾಜಕುಮಾರ್‌ ಅವರಿಗೆ “ಜೇಮ್ಸ್‌’ ಚಿತ್ರದ ಕೆಲಸಕ್ಕೆ ಕೈ ಹಾಕುವುದಾಗಿ’ ಹೇಳುತ್ತಾರೆ ಅವರು.

ಭರಾಟೆ ಮುಂದಕ್ಕೆ: ಶ್ರೀಮುರಳಿ ನಾಯಕರಾಗಿರುವ “ಭರಾಟೆ’ ಚಿತ್ರ ಸೆಪ್ಟೆಂಬರ್‌ 27ಕ್ಕೆ ತೆರೆಗೆ ಬರಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಈಗ ತನ್ನ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದು, ಅಕ್ಟೋಬರ್‌ ಎರಡನೇ ವಾರ ತೆರೆಕಾಣುವ ಸಾಧ್ಯತೆ ಇದೆ.

ಅದಕ್ಕೆ ಕಾರಣ ಸೆ. 27 ರಂದು ಕನ್ನಡದ ಎರಡು ಬಹುನಿರೀಕ್ಷಿತ ಚಿತ್ರಗಳಾದ “ಕಿಸ್‌’ ಹಾಗೂ “ಗೀತಾ’ ತೆರೆಕಾಣುತ್ತಿರುವುದು ಒಂದೆಡೆಯಾದರೆ ಅಕ್ಟೋಬರ್‌ 02 ರಂದು ಮೆಗಾಸ್ಟಾರ್‌ ಚಿರಂಜೀವಿಯವರ “ಸೈರಾ ನರಸಿಂಹ ರೆಡ್ಡಿ’ ತೆರೆಕಾಣುತ್ತಿದೆ. ಎಲ್ಲಾ ಚಿತ್ರಗಳು ಒಟ್ಟೊಟ್ಟಿಗೆ ಬಂದರೆ ಥಿಯೇಟರ್‌ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ “ಭರಾಟೆ’ ತನ್ನ ಬಿಡುಗಡೆಯನ್ನು ಮುಂದಕ್ಕೆ ಹಾಕಿದೆ. ಅಕ್ಟೋಬರ್‌ನಲ್ಲಿ ದೊಡ್ಡ ಮಟ್ಟದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.