ಕಿರುತೆರೆಯಲ್ಲೂ ಭಗವಾನ್‌ ಎಂಟ್ರಿ

ಮೊದಲ ಸಲ ಅಪರಂಜಿ ಧಾರಾವಾಹಿಯಲ್ಲಿ ನಟನೆ

Team Udayavani, Apr 14, 2019, 3:00 AM IST

Bhagavan

ಕಳೆದ ವರ್ಷವಷ್ಟೇ “ಆಡುವ ಗೊಂಬೆ’ ಚಿತ್ರವನ್ನು ನಿರ್ದೇಶಿಸಿ ಅಚ್ಚರಿ ಮೂಡಿಸಿದ್ದ ಹಿರಿಯ ನಿರ್ದೇಶಕ ಭಗವಾನ್‌, ಆ ಬಳಿಕ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ಕೇಳಿದವರಿಗೆ ಅಚ್ಚರಿ ಎಂಬಂತಹ ವಿಚಾರ ಇಲ್ಲಿದೆ.

ಹೌದು, ಭಗವಾನ್‌ ಅವರಿಗೀಗ ವಯಸ್ಸು 85. ಇಷ್ಟಾದರೂ, ವಯಸ್ಸಿಗೆ ಮುಖ ತಿರುಗಿಸಿ, ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ನಟಿಸುತ್ತಿದ್ದಾರೆ ಎಂಬುದೇ ಈ ಹೊತ್ತಿನ ವಿಶೇಷ. ಕಲರ್ಸ್‌ ಸೂಪರ್‌ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಪರಂಜಿ’ ಧಾರಾವಾಹಿಯಲ್ಲಿ ಮನೆಯ ಹಿರಿಯರ ಪಾತ್ರದಲ್ಲಿ ಭಗವಾನ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ 40ಕ್ಕೂ ಹೆಚ್ಚು ಕಂತುಗಳು ಪ್ರಸಾರವಾಗಿವೆ. ಈ ಕುರಿತು ಹೇಳಿಕೊಳ್ಳುವ ಭಗವಾನ್‌, “ನಾನು ಮೊದಲಿಂದಲು ಸುಮ್ಮನೆ ಕೂರುವವನಲ್ಲ. ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ನಟಿಸುವ ಅವಕಾಶ ಬಂತು. ಈ ಪಾತ್ರಕ್ಕೆ ನಾನೇ ಬೇಕು ಅಂದರು. ಹಾಗಾಗಿ, ನಟನೆ ಮಾಡುತ್ತಿದ್ದೇನೆ. ಈ ವಯಸ್ಸಲ್ಲಿ ಬ್ಯುಸಿಯಾಗಿರುವುದು ಒಂಥರಾ ಖುಷಿ, ಆರೋಗ್ಯಕ್ಕೂ ಒಳ್ಳೆಯದು’ ಎನ್ನುತ್ತಾರೆ ಭಗವಾನ್‌.

ಭಗವಾನ್‌ ಅವರಿಗೆ ನಟನೆ ಹೊಸದೇನಲ್ಲ. ಹಾಗೆ ನೋಡಿದರೆ ಇವರು ಚಿತ್ರರಂಗಕ್ಕೆ ಬಂದದ್ದು ಹೀರೋ ಆಗಿ. 1954 ರಲ್ಲಿ ಬಂದ “ಭಾಗ್ಯೋದಯ’ ಚಿತ್ರದಲ್ಲಿ ಎರಡನೇ ಹೀರೋ ಆಗಿದ್ದವರು. ಇನ್ನು 1958 ರಲ್ಲಿ ಬಂದ “ಮಂಗಳಸೂತ್ರ’ ಚಿತ್ರದಲ್ಲೂ ಪೂರ್ಣ ಪ್ರಮಾಣದ ನಾಯಕ ನಟರಾಗಿದ್ದರು. ಆಮೇಲೆ ಅವಕಾಶಕ್ಕಿಂತ ಮುಖ್ಯವಾಗಿ ನಿರ್ದೇಶಕರಿಗೆ ಹೆಚ್ಚಿನ ಸಂಭಾವನೆ ಸಿಗುತ್ತದೆ ಎಂಬ ಕಾರಣಕ್ಕೆ ಅವರು ನಿರ್ದೇಶನದತ್ತ ಮುಖ ಮಾಡಿದ್ದರು.

ಭಗವಾನ್‌ ಅವರಲ್ಲಿ ಇನ್ನೊಂದು ಅಚ್ಚರಿಯೂ ಅಡಗಿದೆ. ಕನ್ನಡ ಚಿತ್ರರಂಗದಲ್ಲಿ ಮೂರು ತಲೆಮಾರಿನ ನಟರ ಜೊತೆ ಭಗವಾನ್‌ ನಟಿಸಿದ್ದಾರೆ. ರಾಜ್‌ಕುಮಾರ್‌, ಅವರ ಮಕ್ಕಳಾದ ಶಿವಣ್ಣ, ರಾಘಣ್ಣ, ಅವರ ಮಕ್ಕಳ ಜೊತೆಯಲ್ಲೂ ನಟಿಸಿದ್ದಾರೆ. ಈಗ ಪುನೀತ್‌ ಅವರ “ಯುವರತ್ನ’ ಚಿತ್ರದಲ್ಲಿ ಜ್ಯೋತಿಷಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗೆ ಒಂದೇ ಕುಟುಂಬದ, ಮೂರು ತಲೆಮಾರು ನಟರೊಂದಿಗೆ ನಟಿಸಿರುವ ಇವರು ಈಗ ಕಿರುತೆರೆ ಕಡೆ ಮುಖ ಮಾಡಿರುವುದು ವಿಶೇಷ.

“ಮೂರು ತಲೆ ಮಾರಿನಿಂದ ನಟಿಸುತ್ತಿರುವವರು ಸಿಕ್ತಾರೆ. ಆದರೆ, ಒಂದೇ ಕುಟುಂಬದಲ್ಲಿ ಮೂರು ಜನರೇಷನ್‌ ಜೊತೆ ಕೊಂಡಿಯಾಗಿ ನಟಿಸಿದ ಹೆಮ್ಮೆ ನನಗಿದೆ. ರಾಜ್‌ಕಪೂರ್‌ ಕೂಡ ಹೀಗೆ ನಟಿಸಿಲ್ಲ. ಈಗ ಕಿರುತೆರೆಯಲ್ಲೂ ನಟನೆ ಮುಂದುವರಿಸುತ್ತಾ ಕಲೆಯನ್ನು ಎಂಜಾಯ್‌ ಮಾಡುತ್ತಿದ್ದೇನೆ ‘ ಎಂಬ ಖುಷಿ ಭಗವಾನ್‌ ಅವರದು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.