ಸೀತಾರಾಮ ಕಲ್ಯಾಣದಲ್ಲಿ ಭಾಗ್ಯಶ್ರೀ, ಸಂಜಯ್‌ ಕಪೂರ್‌


Team Udayavani, Sep 24, 2018, 11:37 AM IST

bhagyashree.jpg

ಕನ್ನಡ ಚಿತ್ರರಂಗಕ್ಕೆ ಬಾಲಿವುಡ್‌ ನಟ, ನಟಿಯರ ಆಗಮನ ಹೊಸದೇನಲ್ಲ. ಈಗಾಗಲೇ ಬಾಲಿವುಡ್‌ನ‌ ಹಲವು ನಟ, ನಟಿಯರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಈಗಲೂ ನಟಿಸುತ್ತಲೇ ಇದ್ದಾರೆ. ಈಗ ಹೊಸ ಸುದ್ದಿಯೆಂದರೆ, ಬಾಲಿವುಡ್‌ನ‌ ನಟ ಮತ್ತು ನಟಿ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ನಿಖಿಲ್‌ಕುಮಾರ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದಿನ ಕಳೆದಂತೆ ದೊಡ್ಡದ್ದಾಗಿ ಬೆಳೆಯುತ್ತಿದೆ.

ಈ ಚಿತ್ರದಲ್ಲಿ ಈಗ ಬಾಲಿವುಡ್‌ ನಟಿ ಭಾಗ್ಯಶ್ರೀ ಹಾಗೂ ಅನಿಲ್‌ ಕಪೂರ್‌ ಸಹೋದರ ಸಂಜಯ್‌ ಕಪೂರ್‌ ಅವರು ಅಭಿನಯಿಸುತ್ತಿದ್ದಾರೆ. ಭಾಗ್ಯಶ್ರೀ ಅವರು ನಿಖಿಲ್‌ಕುಮಾರ್‌ ಅಮ್ಮನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಭಾಗ್ಯಶ್ರೀ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಸಲ್ಮಾನ್‌ಖಾನ್‌ ಅಭಿನಯದ “ಮೈನೆ ಪ್ಯಾರ್‌ಕಿಯಾ’ ಈ ಚಿತ್ರದ ಯಶಸ್ವಿ ಜೋಡಿಯಾಗಿ ಹೊರಹೊಮ್ಮಿದ್ದ ಭಾಗ್ಯಶ್ರೀ, ಆ ಬಳಿಕ ಸಕ್ಸಸ್‌ಫ‌ುಲ್‌ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಭಾಗ್ಯಶ್ರೀ ಕನ್ನಡಕ್ಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಶಿವರಾಜ್‌ಕುಮಾರ್‌ ಅಭಿನಯದ “ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಟಿಸಿದ್ದಾರೆ. ಬಹಳ ವರ್ಷಗಳ ಬಳಿಕ ಕನ್ನಡಕ್ಕೆ ಬರುತ್ತಿರುವ ಭಾಗ್ಯಶ್ರೀ, ನಿಖಿಲ್‌ ಕುಮಾರ್‌ಗೆ ತಾಯಿಯಾಗಿ ನಟಿಸುತ್ತಿದ್ದಾರೆ. ಇವರೊಂದಿಗೆ ಸಂಜಯ್‌ಕಪೂರ್‌ ಕೂಡ ನಟಿಸುತ್ತಿದ್ದಾರೆ. ಆದರೆ, ಅವರ ಪಾತ್ರ ಏನೆಂಬುದು ಸಸ್ಪೆನ್ಸ್‌. ಈಗಾಗಲೇ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದೊಡ್ಡದಾಗಿ ಬೆಳೆದಿದ್ದು, ಆ ಸಾಲಿಗೆ ಬಾಲಿವುಡ್‌ನ‌ ಭಾಗ್ಯಶ್ರೀ ಹಾಗೂ ಸಂಜಯ್‌ ಕಪೂರ್‌ ಸೇರಿದ್ದಾರೆ.

ಅಂದಹಾಗೆ, ಭಾಗ್ಯಶ್ರೀ ಅವರ ಭಾಗದ ಚಿತ್ರೀಕರಣ, ಸೋಮವಾರದಿಂದ (ಇಂದಿನಿಂದ) ಶುರುವಾಗುತ್ತಿದೆ. ಚಿತ್ರದಲ್ಲಿ ನಿಖಿಲ್‌ ತಂದೆಯಾಗಿ ತೆಲುಗು ನಟ ಶರತ್‌ಕುಮಾರ್‌ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಚಿತಾರಾಮ್‌ ನಾಯಕಿಯಾದರೆ, ಗಿರಿಜಾ ಲೋಕೇಶ್‌, ರವಿಶಂಕರ್‌, ಮಧು, ಜ್ಯೋತಿ ರೈ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎ.ಹರ್ಷ ಚಿತ್ರದ ನಿರ್ದೇಶಕರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ಮಾಪಕರು. “ಸೀತಾರಾಮ ಕಲ್ಯಾಣ” ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಚಿತ್ರ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.