ಕಿರುತೆರೆಯಿಂದ ಹಿರಿತೆರೆಯತ್ತ ಭೂಮಿಕಾ ಚಿತ್ತ


Team Udayavani, Jan 20, 2023, 3:22 PM IST

bhoomika-ramesh

ಪ್ರತಿವರ್ಷ ಕಿರಿತೆರೆಯಿಂದ ಹಿರಿತೆರೆಗೆ ಒಂದಷ್ಟು ನಟಿಯರು ಪರಿಚಯವಾಗುತ್ತಲೇ ಇರುತ್ತಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗುತ್ತಿರುವ ಮತ್ತೂಂದು ಹೆಸರು ಭೂಮಿಕಾ ರಮೇಶ್‌. ಹೌದು, ಕಿರುತೆರೆಯ “ಭಾಗ್ಯಲಕ್ಷ್ಮಿ’ ಧಾರಾವಾಹಿಯ ಲಕ್ಷ್ಮಿ ಪಾತ್ರದ ಮೂಲಕ ಕಿರುತೆರೆ ವೀಕ್ಷಕರ ಗಮನ ಸೆಳೆದಿರುವ ನಟಿ ಭೂಮಿಕಾ ರಮೇಶ್‌ ಈಗ “ಡಿಸೆಂಬರ್‌ 24′ ಸಿನಿಮಾದ ಮೂಲಕ ನಾಯಕಿಯಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ.

ಮೆಡಿಕಲ್‌ ರಿಸರ್ಚ್‌ಗೆ ಸಂಬಂಧಪಟ್ಟ ಘಟನೆಗಳನ್ನಿಟ್ಟುಕೊಂಡು ನಿರ್ಮಾಣವಾದ “ಡಿಸೆಂಬರ್‌ 24′ ಚಿತ್ರಕ್ಕೆ ನಾಗರಾಜ್‌ ಎಂ. ಜಿ ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು, ಸಿನಿಮಾ ಇದೇ ಫೆಬ್ರವರಿ ಮೊದಲ ವಾರ ತೆರೆಕಾಣಲಿದೆ.

ಭಾರತದಲ್ಲಿ ಸಾಕಷ್ಟು ನವಜಾತ ಶಿಶುಗಳು ಉಸಿರಾಟದ ಸಮಸ್ಯೆಯಿಂದಾಗಿಯೇ ಮರಣ ಹೊಂದುತ್ತಿವೆ. ಇದಕ್ಕೆ ಕಾರಣವೇನೆಂಬುದರ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. 2015 ರಿಂದ 2019ರ ನಡುವೆ ಹುಲಿಯೂರು ದುರ್ಗದಲ್ಲಿ ನಡೆದ ನೈಜ ಘಟನೆಯನ್ನು ಪ್ರೇರಣೆಯಾಗಿಟ್ಟುಕೊಂಡು ನಿರ್ಮಾಣವಾಗಿರುವ ಈ ಸಿನಿಮಾ ಹಾರರ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬರುತ್ತಿದೆ.

ಇನ್ನು “ಡಿಸೆಂಬರ್‌ 24′ ಸಿನಿಮಾದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿಯಾಗಿ ಭೂಮಿಕಾ ರಮೇಶ್‌ ಕಾಣಿಸಿಕೊಂಡಿದ್ದಾರೆ. “ನವಜಾತ ಶಿಶುಗಳನ್ನು ಹೇಗಾದರೂ ಮಾಡಿ ಸಾವಿನಿಂದ ಪಾರು ಮಾಡಬೇಕೆಂದು ಎಂಟು ಜನ ಮೆಡಿಕಲ್‌ ಸ್ಟುಡೆಂಟ್ಸ್‌ ತಂಡ ಔಷಧಿ ಹುಡುಕಿಕೊಂಡು ಕಾಡಿಗೆ ತೆರಳುತ್ತದೆ. ಅಲ್ಲಿ ಅವರು ಏನೇನು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾರೆ. ಕೊನೆಗೂ ತಾವು ಅಂದುಕೊಂಡಂತೆ ಮೆಡಿಕಲ್‌ ಸ್ಟುಡೆಂಟ್ಸ್‌ ಮೆಡಿಸಿನ್‌ ಕಂಡು ಹಿಡಿಯುತ್ತಾರಾ? ಎಂಬುದೇ ಸಿನಿಮಾದ ಕಥೆ’ ಎಂದು ವಿವರಣೆ ಕೊಡುತ್ತದೆ ಚಿತ್ರತಂಡ.

ಉಳಿದಂತೆ ಅಪ್ಪು ಬಡಿಗೇರ್‌, ರವಿ ಕೆ. ಆರ್‌ ಪೇಟೆ, ರಘು ಶೆಟ್ಟಿ, ಸಾಗರ್‌ ರಾಮಾಚಾರಿ, ಜಗದೀಶ್‌, ಮಿಲನಾ ರಮೇಶ್‌, ದಿವ್ಯಾ, ಅಭಿನಯ, ಭಾಸ್ಕರ್‌ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ರಘು ಎಸ್‌ ನಿರ್ಮಿಸಿರುವ “ಡಿಸೆಂಬರ್‌ 24′ ಸಿನಿಮಾಕ್ಕೆ ವಿನಯ ಗೌಡ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ. ಒಟ್ಟಾರೆ ಮೊದಲ ಬಾರಿಗೆ ಕಿರುತೆರೆಯಿಂದ ಹಿರಿತೆರೆಗೆ ಎಂಟ್ರಿಯಾಗುತ್ತಿರುವ ಭೂಮಿಕಾ ಎಷ್ಟರ ಮಟ್ಟಿಗೆ ಸಿನಿಪ್ರಿಯರ ಗಮನ ಸೆಳೆಯುತ್ತಾರೆ ಎಂಬುದು ಫೆಬ್ರವರಿ ವೇಳೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.