ಈ ವಾರ ಬಹುನಿರೀಕ್ಷಿತ ಬ್ರಹ್ಮಚಾರಿಯ ಆಗಮನ!


Team Udayavani, Nov 28, 2019, 12:41 PM IST

28-November-6

ಉದಯ್ ಕೆ ಮೆಹ್ತಾ ನಿರ್ಮಾದಲ್ಲಿ ರೂಪುಗೊಂಡಿರುವ ಬಹುನಿರೀಕ್ಷಿತ ಬ್ರಹ್ಮಚಾರಿ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆಗಾಣುತ್ತಿದೆ. ಈ ಚಿತ್ರ ಇದುವರೆಗೂ ಸಾಗಿ ಬಂದಿರುವ ರೀತಿಯೇ ರೋಚಕ. ಟೀಸರ್, ಟ್ರೇಲರ್ ಮತ್ತು ಹಾಡುಗಳ ಮೂಲಕವೇ ಹಂತ ಹಂತವಾಗಿ ಪ್ರೇಕ್ಷರನ್ನೆಲ್ಲ ಬ್ರಹ್ಮಚಾರಿ ಸೆಳೆದುಕೊಂಡಿದ್ದೇ ಒಂದು ಸೋಜಿಗ. ಈ ಮೂಲಕವೇ ಈ ಸಿನಿಮಾದಲ್ಲಿ ಗಹನವಾದದ್ದೇನೋ ಇದೆಯೆಂಬ ನಂಬಿಕೆ ಪ್ರತೀ ಪ್ರೇಕ್ಷಕರಲ್ಲಿಯೂ ಹುಟ್ಟಿಕೊಂಡಿದೆ. ಹೀಗೆ ಪ್ರತೀ ಹೆಜ್ಜೆಯಲ್ಲಿಯೂ ಕುತೂಹಲ ಮೂಡಿಸುತ್ತಾ ಸಾಗಿ ಬಂದಿದ್ದ ಬ್ರಹ್ಮಚಾರಿ ಈ ವಾರ ಪ್ರೇಕ್ಷಕರೆದುರು ಪ್ರತ್ಯಕ್ಷವಾಗಲಿದ್ದಾನೆ.

ಇದು ಚಂದ್ರಮೋಹನ್ ನಿರ್ದೇಶನ ಮಾಡಿರುವ ಚಿತ್ರ. ಈ ಹಿಂದೆ ಬಾಂಬೆ ಮಿಠಾಯಿ ಮತ್ತು ಡಬಲ್ ಇಂಜಿನ್ ಎಂಬೆರಡು ಸಿನಿಮಾಗಳನ್ನು ನಿರ್ದೇಶನ ಮಾಡೋ ಮೂಲಕ ಯಶಸ್ವಿಯಾಗಿದ್ದವರು ಚಂದ್ರಮೋಹನ್. ಇವೆರಡೂ ಚಿತ್ರಗಳು ಪ್ರೇಕ್ಷಕರನ್ನು ಸೆಳೆದುಕೊಂಡಿದ್ದದ್ದು ಭರಪೂರ ಹಾಸ್ಯದ ಝಲಕ್ಕಿನಿಂದ. ಒಂದಿಡೀ ಸಿನಿಮಾದಲ್ಲಿ ಹಾಸ್ಯದ ಹೊಳೆ ಹರಿಸುವಂಥಾ ಕಲೆ ಸಿದ್ಧಿಸಿಕೊಂಡು ಯಶ ಕಂಡಿದ್ದ ಅವರು ಭಿನ್ನವಾದ ಕಥೆಯೊಂದಿಗೆ ಮತ್ತಷ್ಟು ಹಾಸ್ಯದ ಹೊನಲಿನೊಂದಿಗೆ ಬ್ರಹ್ಮಚಾರಿಯನ್ನು ರೂಪಿಸಿದ್ದಾರೆ. ಅದರ ಖದರ್ ಎಂಥಾದ್ದಿದೆ ಅನ್ನೋದು ಈಗಾಗಲೇ ಪ್ರತೀ ಪ್ರೇಕ್ಷಕರಿಗೂ ಸ್ಪಷ್ಟವಾಗಿದೆ.

ಬ್ರಹ್ಮಚಾರಿಯ ಆಂತರ್ಯದಲ್ಲಿ ಯಾರೂ ಎಣಿಸಲಾಗದಂಥಾ ಕಥೆಯಿದೆ. ಇಲ್ಲಿ ಹಾಸ್ಯವೇ ಪ್ರಧಾನ ಅಂಶವಾಗಿದ್ದರೂ ಸಹ ಗಟ್ಟಿಯಾದ ಕಥೆ ಮತ್ತು ಎಲ್ಲರಿಗೂ ಒಂದೇ ಸಲಕ್ಕೆ ಕನೆಕ್ಟಾಗುವಂಥಾ ನಿರೂಪಣೆಯೊಂದಿಗೆ ಚಂದ್ರ ಮೋಹನ್ ಈ ಸಿನಿಮಾವನ್ನು ರೂಪಿಸಿದ್ದಾರಂತೆ. ಇದರಲ್ಲಿ ಕೇವಲ ನೀನಾಸಂ ಸತೀಶ್ ಮತ್ತು ಅದಿತಿ ಪ್ರಭುದೇವ ನಟನೆ ಪಾತ್ರಗಳು ಮಾತ್ರವಲ್ಲದೇ ಎಲ್ಲ ಪಾತ್ರಗಳೂ ವಿಶೇಷವಾಗಿವೆಯಂತೆ. ದತ್ತಣ್ಣ, ಅಚ್ಯುತ್ ಕುಮಾರ್, ಶಿವರಾಜ್ ಕೆ ಆರ್ ಪೇಟೆ, ಅಶೋಕ್, ಪದ್ಮಜಾ ರಾವ್ ಮುಂತಾದವರು ವಿಶಿಷ್ಟವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಪಾತ್ರಗಳೆಲ್ಲವೂ ಪ್ರೇಕ್ಷಕರಿಗೆ ಮಾತ್ರವಲ್ಲದೇ ಅದನ್ನು ನಿರ್ವಹಿಸಿರುವ ಕಲಾವಿದರಿಗೂ ಹೊಸತೆನ್ನಿಸುವಂತಿದೆ. ರವಿ ಕುಮಾರ್ ಛಾಯಾಗ್ರಹಣ, ಮುರಳಿ ಅವರ ನೃತ್ಯ ನಿರ್ದೇಶನ ಮತ್ತು ಧರ್ಮವಿಶ್ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.