ಬ್ರಹ್ಮಚಾರಿಯ ಬಗ್ಗೆ ನೀನಾಸಂ ಸತೀಶ್ ಹೇಳಿದ್ದೇನು?


Team Udayavani, Nov 28, 2019, 6:20 PM IST

28-November-27

ಅಯೋಗ್ಯ, ಚಂಬಲ್ ಮತ್ತು ಸಿಂಗ ಚಿತ್ರಗಳ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದ ನೀನಾಸಂ ಸತೀಶ್ ಆ ನಂತರದಲ್ಲಿ ನಟಿಸಿರೋ ಚಿತ್ರ ಬ್ರಹ್ಮಚಾರಿ. ಚಂಬಲ್ ಚಿತ್ರದಲ್ಲಿಯಂತೂ ಖಡಕ್ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದ ಸತೀಶ್ ಬ್ರಹ್ಮಚಾರಿಯ ಮೂಲಕ ನಗಿಸೋದನ್ನೇ ಪ್ರಧಾನವಾಗಿರುವ, ಬೇರೆ ಬೇರೆ ಚಹರೆಗಳನ್ನು ಹೊಂದಿರುವ ಪಾತ್ರದಲ್ಲಿ ಮಿಂಚಿದ್ದಾರೆ. ಈಗಾಗಲೇ ಸತೀಶ್ ಅವರ ಫಸ್ಟ್ ನೈಟ್ ಫಜೀತಿಗಳು ಫೇಮಸ್ ಆಗಿವೆ. ಟ್ರೇಲರ್‌ನ ಡೈಲಾಗುಗಳೆಲ್ಲವೂ ಜನರನ್ನು ಸೆಳೆದುಕೊಂಡಿವೆ. ಆದರೆ ಇದರ ಉದ್ದಕ್ಕೂ ಇಂಥಾ ಡೈಲಾಗುಗಳಿರಬಹುದಾ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಅದಕ್ಕೆ ಖುದ್ದು ಸತೀಶ್ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಇದು ಪಕ್ಕಾ ಮನೋರಂಜನಾತ್ಮಕ ಚಿತ್ರ. ಮೇಲು ನೋಟಕ್ಕೆ ಡಬಲ್ ಮೀನಿಂಗ್‌ನಂತೆ ಕಂಡರೂ ಯಾವುದೇ ವಲ್ಗರ್ ಅನ್ನಿಸುವಂಥಾ ಸಂಭಾಷಣೆ ಚಿತ್ರದಲ್ಲೆಲ್ಲೂ ಇಲ್ಲ. ಇದು ಪಕ್ಕಾ ಫ್ಯಾಮಿಲಿ ಪ್ಯಾಕೇಜಿನಂಥಾ ಚಿತ್ರ. ಸಣ್ಣ ಮುಜುಗರವೂ ಇಲ್ಲದೆ ಇದು ಎಲ್ಲರನ್ನು ನೋಡಿಸಿಕೊಂಡು ಹೋಗುತ್ತದೆ ಎಂಬ ಮಾತುಗಳನ್ನು ಸತೀಶ್ ಅವರಾಡಿದ್ದಾರೆ. ಈ ಮೂಲಕ ಈ ಸಿನಿಮಾದ ಮತ್ತೊಂದು ಗುಣಲಕ್ಷಣವನ್ನು ಪ್ರೇಕ್ಷಕರೆದುರು ತೆರೆದಿಟ್ಟಿದ್ದಾರೆ. ಚಿತ್ರ ತಂಡವೂ ಇದೇ ಮಾತುಗಳನ್ನು ಹೇಳುತ್ತದೆ. ಬ್ರಹ್ಮಚಾರಿ ರೂಪುಗೊಂಡಿರೊ ಪರಿಯೇ ಭಿನ್ನವಾಗಿರೋದರಿಂದ ಅದರ ಮೋಡಿಗೆ ಪ್ರತೀ ಪ್ರೇಕ್ಷಕರೂ ತಲೆದೂಗಲಿದ್ದಾರೆಂಬ ಭರವಸೆ ಎಲ್ಲರಲ್ಲಿದೆ.

ನೀನಾಸಂ ಸತೀಶ್ ಮತ್ತು ಅದಿತಿ ಪ್ರಭುದೇವ ಇಲ್ಲಿ ಈವರೆಗೂ ಕಾಣಿಸಿರದಂಥಾ ಪಾತ್ರಗಳಲ್ಲಿ ಲಕಲಕಿಸಿದ್ದಾರೆ. ಮಿಕ್ಕುಳಿದ ಪಾತ್ರಗಳೂ ಅಷ್ಟೇ ಸೊಗಸಾಗಿವೆಯಂತೆ. ದತ್ತಣ್ಣ, ಅಚ್ಯುತ್ ಕುಮಾರ್, ಶಿವರಾಜ್ ಕೆ ಆರ್ ಪೇಟೆ, ಅಶೋಕ್, ಪದ್ಮಜಾ ರಾವ್ ಮುಂತಾದವರು ವಿಶಿಷ್ಟವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಪಾತ್ರಗಳೆಲ್ಲವೂ ಪ್ರೇಕ್ಷಕರಿಗೆ ಹೊಸಾ ಅನುಭುತಿ ತುಂಬುವಂತಿವೆಯಂತೆ. ರವಿ ಕುಮಾರ್ ಛಾಯಾಗ್ರಹಣ, ಮುರಳಿ ಅವರ ನೃತ್ಯ ನಿರ್ದೇಶನ ಮತ್ತು ಧರ್ಮವಿಶ್ ಅವರ ಸಂಗೀತ ಈ ಚಿತ್ರಕ್ಕಿದೆ. ಬ್ರಹ್ಮಚಾರಿಯ ಬಗ್ಗೆ ಈಗಾಗಲೇ ಒಂದಷ್ಟು ವಿಚಾರಗಳು ಬಯಲಾಗಿವೆ. ಆದರೆ ಬಿಚ್ಚಿಟ್ಟಿದ್ದಕ್ಕಿಂತ ಬಚ್ಚಿಟ್ಟ ವಿಚಾರಗಳು ಬಹಳಷ್ಟಿವೆ. ಮತ್ತವುಗಳು ರೋಚಕವಾಗಿವೆ. ಅದೆಲ್ಲವೂ ಈ ವಾರವೇ ನಿಮ್ಮೆಲ್ಲರೆದುರು ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.