![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Team Udayavani, May 18, 2024, 3:20 PM IST
![Biography of Mother Teresa in web series](https://www.udayavani.com/wp-content/uploads/2024/05/mother-620x342.jpg)
ಬಡವರು ಹಾಗೂ ದೀನದಲಿತರ ಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಮದರ್ ತೆರೇಸಾ ಅವರ ಜೀವನ ಚರಿತ್ರೆ ಇದೀಗ ವೆಬ್ ಸರಣಿಯಲ್ಲಿ ಮೂಡಿ ಬರಲಿದೆ. ಸಾಹಿತಿ, ಚಿತ್ರ ಕಥೆಗಾರ ದಿ. ಜಾನ್ ಪಾಲ್ ಪುತ್ತುಸ್ಸೆರಿ ಹಾಗೂ ನಿರ್ದೇಶಕ ಪಿ. ಚಂದ್ರಕುಮಾರ್ ಸೇರಿ ಮೂರು ವರ್ಷಗಳಿಂದ ಇವರ ಬಗ್ಗೆ ಮಾಹಿತಿ ಸಂಗ್ರಹಿಸಿ ಈ ಸೀರೀಸ್ ಮಾಡುತ್ತಿದ್ದಾರೆ.
ಮದರ್ ತೆರೇಸಾ ವೆಬ್ ಸರಣಿಯ ಶೀರ್ಷಿಕೆ ಹಾಗೂ ಬ್ಯಾನರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈಗಾಗಲೇ ಮಲಯಾಳಂ ಚಿತ್ರರಂಗದಲ್ಲಿ ಜನಪ್ರಿಯತೆ ಹೊಂದಿರುವ ಚಂದ್ರಶೇಖರ್ ಅವರು ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಅನ್ನು ಸುಮಾರು 30 ಕೋಟಿ ರೂ.ಗಳ ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ವಿಶೇಷವಾಗಿ ಈ ವೆಬ್ ಸರಣಿಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮದರ್ ತೆರೇಸಾ ಅವರ ಬಾಲ್ಯ, ಹರೆಯದ ಜೀವನ ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳಹೊರಟಿದ್ದಾರೆ.
ಮದರ್ ತೆರೇಸಾ ಅವರು ಎಲ್ಲೆಲ್ಲಿ ಹೋಗಿದ್ದರು, ಅವರು ಹೆಜ್ಜೆ ಇಟ್ಟ ನೆಲದಲ್ಲೇ ಶೂಟಿಂಗ್ ಮಾಡಲಾಗುತ್ತಿದೆ. ಅವರು ನೆಲೆಸಿದ್ದ ರೋಮ್, ಜೆರುಸಲೆನಿಯಂ, ಟೆಥ್ಲೆಹೆಮ್, ಮ್ಯಾಸಿಡೋನಿಯಾ, ಯುಕೆ ಮತ್ತು ಇಟಲಿಯಂತಹ ಸ್ಥಳಗಳ ಜೊತೆಗೆ ಮದರ್ ತೆರೇಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ, ಬಿಹಾರ, ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಮೂರು ಸೀಸನ್ ಗಳಲ್ಲಿ ಕಥೆ ಮೂಡಿಬರಲಿದೆ. ಚಿತ್ರದಲ್ಲಿ ಅನಿತಾ ಮೆನನ್, ತನಿಮಾ ಮೆನನ್, ಸಾಫಿ ಕೌರ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.