ದರ್ಶನ್ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು: ಡಿ ಬಾಸ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ ಮೋಹನ್
Team Udayavani, Jul 19, 2021, 5:06 PM IST
ಬೆಂಗಳೂರು : ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ದರ್ಶನ್ ಅವರ ವ್ಯಕ್ತಿತ್ವ ಎಂತಹದು ಎಂಬುದನ್ನು ಸಾರಿ ಹೇಳಿದ್ದಾರೆ.
ಇಂದು (ಜುಲೈ 19) ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲುಸುತ್ತಿರುವ ದರ್ಶನ್ ತುಗೂದೀಪ ಅವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತಾ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.
ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾಸೇವೆ ಸಲ್ಲಿಸುತ್ತಿರುವ ದರ್ಶನ್ ತೂಗುದೀಪರವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ-ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ. @dasadarshan pic.twitter.com/cxFvCnzu2l
— P C Mohan (@PCMohanMP) July 19, 2021
ದರ್ಶನ್ ಅವರ ಕುರಿತು ಕೇಳಿ ಬಂದಿರುವ ಹಲ್ಲೆ ಆರೋಪದ ಕುರಿತು ಮಾತಾಡಿರುವ ಪಿ.ಸಿ ಮೋಹನ್, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.
ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ, ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕಾಗಿ ನನ್ನ ವಿನಂತಿ. ಶುಭವಾಗಲಿ. @dasadarshan @DTEAM7999
— P C Mohan (@PCMohanMP) July 19, 2021
ಇನ್ನು ಮೈಸೂರಿನಲ್ಲಿ ದರ್ಶನ್ ಅವರು ಹೋಟೆಲ್ ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಆರೋಪಿಸಿದ್ದಾರೆ. ಇದಕ್ಕೆ ಬಹಿರಂಗ ಸವಾಲು ಹಾಕಿದ ದಚ್ಚು, ತಮ್ಮ ವಿರುದ್ಧದ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ