ಮಂಡಳಿ-ಕ್ಯೂಬ್‌ ಸಭೆ ವಿಫ‌ಲ


Team Udayavani, Feb 24, 2018, 11:27 AM IST

mandali.jpg

ಯುಎಫ್ಓ ಮತ್ತು ಕ್ಯೂಬ್‌ ವೆಚ್ಚ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ, ರಿಯಾಯಿತಿಗಾಗಿ ನಡೆಸಿದ ಸಭೆಗಳು ವಿಫ‌ಲವಾಗಿದ್ದು ಮಾರ್ಚ್‌ 2 ರಿಂದ ಯುಎಫ್ಓ ಹಾಗು ಕ್ಯೂಬ್‌ಗ ಯಾವುದೇ ಹೊಸ ಚಿತ್ರಗಳನ್ನು ಕೊಡದಿರಲು ಆರು ರಾಜ್ಯಗಳ ವಾಣಿಜ್ಯ ಮಂಡಳಿ ಒಮ್ಮತದಿಂದ ತೀರ್ಮಾನಿಸಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ, ಕೇರಳ ಹಾಗು ಪುದುಚೇರಿ ರಾಜ್ಯಗಳ ವಾಣಿಜ್ಯ ಮಂಡಳಿ ಅಧ್ಯಕ್ಷರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಕುರಿತು ವಿವರ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, “ಈ ಹಿಂದೆ ಹೈದರಾಬಾದ್‌, ಚೆನ್ನೈನಲ್ಲಿ ಯುಎಫ್ಓ ಮತ್ತು ಕ್ಯೂಬ್‌ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿತ್ತು. ಆದರೆ, ಆ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿರಲಿಲ್ಲ. ಬೆಂಗಳೂರಿನಲ್ಲಿ ನಡೆದ ಮೂರನೇ ಅಂತಿಮ ಸಭೆಯಲ್ಲೂ ಅವರು ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ನಾವು ಮಾರ್ಚ್‌ 2 ರಿಂದ ಅವರಿಗೆ ಯಾವುದೇ ಹೊಸ ಚಿತ್ರಗಳನ್ನು ಕೊಡದಿರಲು ತೀರ್ಮಾನಿಸಿದ್ದೇವೆ.

ನಾವು ಈಗಿನ ವೆಚ್ಚದಲ್ಲಿ ಶೇ.25 ರಷ್ಟು ಕಡಿಮೆ ಮಾಡಿ ಎಂಬ ಬೇಡಿಕೆ ಇಟ್ಟರೂ, ಅವರು ಕೇವಲ ಶೇ.9 ರಷ್ಟು ಕಡಿಮೆ ಮಾಡುವುದಾಗಿ ಹೇಳಿದ್ದಾರೆ. ಹಾಗಾಗಿ ನಮ್ಮ ನಡುವಿನ ಮಾತುಕತೆ ವಿಫ‌ಲವಾಗಿದೆ. ಇದರಿಂದ ಆರು ರಾಜ್ಯಗಳ ವಾಣಿಜ್ಯ ಮಂಡಳಿ ಈ ಒಮ್ಮತದ ತೀರ್ಮಾನ ಮಾಡಿದೆ’ ಎಂದರು. ನಮ್ಮ ಮಾತಿಗೆ ಬೆಲೆ ಕೊಡದ ಅವರ ಜೊತೆ ನಾವು ಇನ್ನು ಮುಂದೆ ಯಾವುದೇ ವ್ಯವಹಾರ ಇಟ್ಟುಕೊಳ್ಳುವುದಿಲ್ಲ. ಅದಕ್ಕೆ ಈಗಾಗಲೇ ಪರ್ಯಾಯ ವ್ಯವಸ್ಥೆಯನ್ನೂ ಮಾಡಲಾಗಿದೆ.

ಬೇಕಾದಷ್ಟು ಮಂದಿ, ಮುಂದೆ ಬಂದಿದ್ದಾರೆ. ನಮಗೆ ನಿರ್ಮಾಪಕರನ್ನು ಅನುಕೂಲಗೊಳಿಸುವುದಷ್ಟೇ ಮುಖ್ಯ ಗುರಿ. ಆದರೆ, ಯುಎಫ್ಓ, ಕ್ಯೂಬ್‌ನವರು ಒಂದೇ ರೀತಿಯ ರೇಟು ಫಿಕ್ಸ್‌ ಮಾಡಿದ್ದಾರೆ. ವರ್ಷಕ್ಕೆ ನೂರಾರು ಚಿತ್ರಗಳು ಬಿಡುಗಡೆಯಾಗುತ್ತವೆ. ಯಶಸ್ಸು ಶೇ.10 ರಷ್ಟು ಮಾತ್ರ. ನಿರ್ಮಾಪಕ ನಷ್ಟ ಅನುಭವಿಸುತ್ತಿದ್ದರೂ, ಅವರು ಮಾತ್ರ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ. ನಿರ್ಮಾಪಕನಿಗೆ ಏನೂ ಸಿಗುತ್ತಿಲ್ಲ. ಸಿನಿಮಾ ಪ್ರದರ್ಶನಕ್ಕೂ ಮುನ್ನ, ಜಾಹಿರಾತು ಹಾಕುತ್ತಾರೆ.

ಆ ಜಾಹಿರಾತಿನಿಂದ ವರ್ಷಕ್ಕೆ ಒಂದು ಚಿತ್ರಮಂದಿರದಿಂದ ಸುಮಾರು 4.50 ಲಕ್ಷ ರೂ. ಹಣ ಅವರಿಗೆ ಹೋಗುತ್ತೆ. ಆ ಹಣ ವಿತರಕ, ಪ್ರದರ್ಶಕ ಹಾಗು ನಿರ್ಮಾಪಕರಿಗೆ ಸಿಗಲ್ಲ. ಹೋಗಲಿ, ಆ ಹಣ ಬೇಡ, ನಮ್ಮ ಬೇಡಿಕೆಯಂತೆ, ವೆಚ್ಚದಲ್ಲಿ ಶೇ.25 ರಷ್ಟು ಕಡಿಮೆ ಮಾಡಿ ಅಂದರೂ ಅದನ್ನೂ ಒಪ್ಪುತ್ತಿಲ್ಲ ಎಂದು ಹೇಳಿದರು. ನಿರ್ಮಾಪಕರು ಕಷ್ಟಪಟ್ಟು ಚಿತ್ರ ನಿರ್ಮಾಣ ಮಾಡುತ್ತಾರೆ. ಒಂದೊಂದು ಸಿನಿಮಾಗಳ ಗುಣಮಟ್ಟ ಒಂದೊಂದು ರೀತಿ ಇರುತ್ತೆ. ಅದಕ್ಕೆ ತಕ್ಕಂತೆ ರೇಟು ಇಟ್ಟು, ದುಬಾರಿ ಮಾಡಿದ್ದಾರೆ.

ಈಗ ಶೇ.25 ರಷ್ಟು ಕಡಿಮೆ ಮಾಡಿ, ಅಕ್ಟೋಬರ್‌ ಬಳಿಕ ಮರುಪರಿಶೀಲನೆ ಮಾಡೋಣ ಅಂತ ಹೇಳಿದ್ದಕ್ಕೂ ಅವರು ಒಪ್ಪಿಲ್ಲ. ನಾವು ಅವರ ಮಾತಿಗೆ ಒಪ್ಪದೆ, ಈ ತೀರ್ಮಾನಕ್ಕೆ ಬಂದಿದ್ದೇವೆ. ಸ್ಥಳೀಯ ಭಾಷೆಯ ಚಿತ್ರಗಳಿಗೆ ಸಾಕಷ್ಟು ವೆಚ್ಚ ಭರಿಸಬೇಕಿದೆ. ಆದರೆ, ಇಂಗ್ಲೀಷ್‌ ಚಿತ್ರಗಳಿಗೆ ಒಂದು ರುಪಾಯಿ ಕೂಡ ಅವರು ಚಾರ್ಜ್‌ ಮಾಡುತ್ತಿಲ್ಲ. ಇಡೀ ಚಿತ್ರರಂಗ ಈಗ ಅವರನ್ನೇ ಅವಲಂಬಿಸಿದೆ. ಹಾಗಾಗಿ ನಾವೂ ಕೂಡ ಹಂತ ಹಂತವಾಗಿ, ಅವರಿಂದ ಹೊರಬರಬೇಕು ಎಂದು ಯೋಚಿಸಿದ್ದೇವೆ.

ಈಗಾಗಲೇ ಒಂದಿಬ್ಬರು ಪರ್ಯಾಯ ವ್ಯವಸ್ಥೆಗೂ ಸಜ್ಜಾಗಿದ್ದಾರೆ. ಸ್ವಲ್ಪ ಸಮಯ ಬೇಕಿದೆ. ಆಮೇಲೆ ಎಲ್ಲವೂ ಸರಿಹೋಗಲಿದೆ. ಮಾರ್ಚ್‌ 2 ರಿಂದ ಹೊಸ ಚಿತ್ರಗಳ ವ್ಯವಹಾರ ಮಾಡುವುದಿಲ್ಲ. ಆದರೆ, ಈಗಾಗಲೇ ಸೆನ್ಸಾರ್‌ ಆಗಿರುವ ಚಿತ್ರಗಳು ಅವರ ಜತೆ ವ್ಯವಹರಿಸಿದ್ದರೆ, ಅವೆಲ್ಲವೂ ಬಿಡುಗಡೆಯಾಗುತ್ತವೆ. ಸದ್ಯಕ್ಕೆ ಆರು ರಾಜ್ಯಗಳ ಫಿಲ್ಮ್ಚೇಂಬರ್‌ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಮೊದಲೆಲ್ಲಾ ಪ್ರದರ್ಶನವೊಂದಕ್ಕೆ 50 ರುಪಾಯಿ ಕೊಡಿ ಸಾಕು ಅಂತ ಬಂದರು. ನಾವೂ ಆಯ್ತು ಅಂತ ಡಿಜಿಟಲ್‌ಗೆ ಮೊರೆ ಹೋದೆವು. ಈಗ ನೋಡಿದರೆ, 14 ಸಾವಿರದಿಂದ 27 ಸಾವಿರ ರುಪಾಯಿವರೆಗೆ ಬಂದಿದ್ದಾರೆ. ಇದು ಜಾಸ್ತಿಯಾಗಿದೆ. ಪ್ರಾದೇಶಿಕ ಭಾಷೆ ಚಿತ್ರಗಳಿಗೆ ಕಡಿಮೆ ಮಾಡಬೇಕು ಆದರೆ, ಅದಕ್ಕೆ ಹೆಚ್ಚು ಹಣ ಪಡೆದು, ಹಾಲಿವುಡ್‌ ಚಿತ್ರಗಳಿಗೆ ಯಾವುದೇ ಹಣ ಪಡೆಯದೆ ಅವಕಾಶ ಕೊಡುತ್ತಿದ್ದಾರೆ.

ಇಷ್ಟರಲ್ಲೇ ನಾವು ಸಭೆ ಸೇರಿ, ಮುಂದಿನ ವ್ಯವಸ್ಥೆ ಕುರಿತು ಚರ್ಚಿಸಲಿದ್ದೇವೆ ಎಂದರು. ಸಭೆಯಲ್ಲಿ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್‌, ಸುರೇಶ್‌ಬಾಬು, ರವಿ ಕೋಟರರ್‌, ರಾಕ್‌ಲೈನ್‌ ವೆಂಕಟೇಶ್‌, ಎಂ.ಜಿ.ರಾಮಮೂರ್ತಿ, ಚಂದ್ರಶೇಖರ್‌, ಎನ್‌.ಎಂ.ಸುರೇಶ್‌, ನರಸಿಂಹಲು ಸೇರಿದಂತೆ ಮಂಡಳಿಯ ಹಲವು ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.