ಮೂವಿ ಮಾಫಿಯಾಗೆ ಆದಿತ್ಯ ನಂಟು!: ಉದ್ಧವ್‌ ಪುತ್ರನ ವಿರುದ್ಧ ಬಾಲಿವುಡ್‌ ನಟಿ ಕಂಗನಾ ಆರೋಪ


Team Udayavani, Sep 15, 2020, 6:33 AM IST

ಮೂವಿ ಮಾಫಿಯಾಗೆ ಆದಿತ್ಯ ನಂಟು!: ಉದ್ಧವ್‌ ಪುತ್ರನ ವಿರುದ್ಧ ಬಾಲಿವುಡ್‌ ನಟಿ ಕಂಗನಾ ಆರೋಪ

ಮುಂಬಯಿ: ಮಹಾರಾಷ್ಟ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಲೇ ಇರುವ ಬಾಲಿವುಡ್‌ ನಟಿ ಕಂಗನಾ ರಣೌತ್‌ ಸೋಮವಾರ ಸಿಎಂ ಉದ್ಧವ್‌ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಗೆ ಟಾಂಗ್‌ ನೀಡಿದ್ದಾರೆ.

ಆದಿತ್ಯ ಅವರ ಸ್ನೇಹಿತರ ವಿರುದ್ಧ ಧ್ವನಿಯೆತ್ತಿದ್ದಕ್ಕೆ ನನ್ನನ್ನು ಶಿವಸೇನೆ ಟಾರ್ಗೆಟ್‌ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆದಿತ್ಯ ಠಾಕ್ರೆ ಅವರು ಮೂವಿ ಮಾಫಿಯಾ, ಸುಶಾಂತ್‌ರ ಕೊಲೆಗಾರರು ಮತ್ತು ಡ್ರಗ್‌ ದಂಧೆಕೋರರೊಂದಿಗೆ ಸ್ನೇಹ ಹೊಂದಿದ್ದಾರೆ. ಮೂವಿ ಮಾಫಿಯಾವನ್ನು ನಾನು ಬಯಲಿಗೆಳೆಯಲು ಮುಂದಾಗಿದ್ದೇ ಸಿಎಂ ಉದ್ಧವ್‌ಗೆ ಸಹಿಸಿಕೊಳ್ಳಲಾಗಲಿಲ್ಲ ಎಂದು ಕಂಗನಾ ಕಿಡಿಕಾರಿದ್ದಾರೆ.

ಹಿಮಾಚಲಕ್ಕೆ ವಾಪಸ್‌: ಶಿವಸೇನೆಯೊಂದಿಗೆ ಜಟಾಪಟಿ ಆರಂಭವಾದ ಅನಂತರ ಸವಾಲೆಸೆಯುವ ರೀತಿಯಲ್ಲಿ ಕಳೆದ ವಾರ ಮುಂಬಯಿಗೆ ಆಗಮಿಸಿದ್ದ ಕಂಗನಾ, ಸೋಮವಾರ ತಮ್ಮ ಹುಟ್ಟೂರು ಹಿಮಾಚಲ ಪ್ರದೇಶಕ್ಕೆ ವಾಪಸಾಗಿದ್ದಾರೆ. ನಿರಂತರ ದಾಳಿ ಮತ್ತು ಅವಹೇಳನಗಳಿಂದ ನಾನು ಭಯಭೀತಳಾಗಿದ್ದೇನೆ.

ಭಾರವಾದ ಹೃದಯದಿಂದ ನಾನೀಗ ಮುಂಬಯಿಯಿಂದ ಹೊರಡುತ್ತಿದ್ದೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಜತೆಗೆ, ನಾನು ಅಬಲೆ ಎಂದು ಭಾವಿಸಬೇಡಿ. ಒಬ್ಬ ಮಹಿಳೆಗೆ ಬೆದರಿಕೆ ಹಾಕುವ, ಅವಹೇಳನ ಮಾಡುವ ಮೂಲಕ ಅವರು (ಶಿವಸೇನೆ) ತಮ್ಮದೇ ಘನತೆಯನ್ನು ಕಳೆದುಕೊಂಡರು ಎಂದೂ ಕಂಗನಾ ಹೇಳಿದ್ದಾರೆ.

ಉದ್ಧವ್‌ಗೆ ಅಯೋಧ್ಯೆ ಟ್ರಸ್ಟ್‌ ಬೆಂಬಲ
ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಅವರನ್ನು ಅಯೋಧ್ಯೆಗೆ ಬಾರದಂತೆ ತಡೆಯುವ ಧೈರ್ಯ ಯಾರಿಗೂ ಇಲ್ಲ ಎಂದು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ. ಈ ಮೂಲಕ ಟ್ರಸ್ಟ್‌ ಉದ್ಧವ್‌ ಅವರ ಬೆನ್ನಿಗೆ ನಿಂತಿದೆ. ಕಂಗನಾ ವಿವಾದದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಅಯೋಧ್ಯೆಯ ಸಂತರು ಹಾಗೂ ವಿಶ್ವ ಹಿಂದೂ ಪರಿಷತ್‌ ಹೇಳಿಕೆ ನೀಡಿ, ಉದ್ಧವ್‌ ಅವರಿಗೆ ಇನ್ನು ಮುಂದೆ ಅಯೋಧ್ಯೆಗೆ ಸ್ವಾಗತವಿಲ್ಲ ಎಂದಿದ್ದರು.

ಟಾಪ್ ನ್ಯೂಸ್

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.