ಅಪ್ಪು ನೆನಪಲ್ಲಿ ‘ಬಾಂಡ್ ರವಿ’; ಪ್ರಮೋದ್ ಚಿತ್ರದ ಟೀಸರ್ ಗೆ ಮೆಚ್ಚುಗೆ


Team Udayavani, Sep 27, 2022, 12:04 PM IST

ಅಪ್ಪು ನೆನಪಲ್ಲಿ ‘ಬಾಂಡ್ ರವಿ’; ಪ್ರಮೋದ್ ಚಿತ್ರದ ಟೀಸರ್ ಗೆ ಮೆಚ್ಚುಗೆ

“ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಈ ಹಿಂದೆ ನನ್ನ ಸಿನಿಮಾವನ್ನು ನೋಡಿ ತುಂಬ ಖುಷಿ ಪಟ್ಟಿದ್ದರು. ಸ್ವತಃ ಅವರೇ ಪೋನ್‌ ಮಾಡಿ ನನ್ನ ಬಗ್ಗೆ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಶೀಘ್ರದಲ್ಲಿಯೇ ಭೇಟಿಯಾಗೋಣ ಎಂದೂ ಹೇಳಿದ್ದರು. ಆದರೆ, ಅಷ್ಟರಲ್ಲಿ ವಿಧಿಯಾಟವೇ ಬೇರೆಯಾಗಿತ್ತು. ಅವರನ್ನು ಭೇಟಿಯಾಗುವಷ್ಟರಲ್ಲಿ ಅವರು ನಮ್ಮಿಂದ ದೂರವಾದರು. ಈಗ ಅವರ ನೆನಪಿನಲ್ಲಿಯೇ, ಅವರದ್ದೇ ಪಾತ್ರದ ಹೆಸರನ್ನು ನಮ್ಮ ಸಿನಿಮಾದ ಟೈಟಲ್‌ ಆಗಿಟ್ಟುಕೊಂಡು ತೆರೆಗೆ ತರುತ್ತಿದ್ದೇವೆ. ಪುನೀತ್‌ ರಾಜಕುಮಾರ್‌ ಅವರಿದ್ದರೆ, ಖಂಡಿತವಾಗಿಯೂ ನಮ್ಮ ಪ್ರಯತ್ನವನ್ನು ನೋಡಿ ಬೆನ್ನುತಟ್ಟುತ್ತಿದ್ದರು’ ಹೀಗೆ ಹೇಳುತ್ತ “ಬಾಂಡ್‌ ರವಿ’ ಸಿನಿಮಾದ ಬಗ್ಗೆ ಮಾತಿಗಿಳಿದರು ನಟ ಪ್ರಮೋದ್‌.

“ಬಾಂಡ್‌ ರವಿ’ ಸಿನಿಮಾದ ಟೈಟಲ್‌ಗೆ ಸ್ಫೂರ್ತಿಯಾಗಿದ್ದು ಪುನೀತ್‌ ರಾಜಕುಮಾರ್‌ ಅಭಿನಯದ “ಅಣ್ಣಾಬಾಂಡ್‌’ ಸಿನಿಮಾದಲ್ಲಿ ಬರುವ “ಬಾಂಡ್‌ ರವಿ’ ಪಾತ್ರವಂತೆ. ಇತ್ತೀಚೆಗಷ್ಟೇ “ಬಾಂಡ್‌ ರವಿ’ ಸಿನಿಮಾದ ಮೊದಲ ಟೀಸರ್‌ ಬಿಡುಗಡೆಯಾಗಿದ್ದು, ಇದೇ ವೇಳೆ ಪುನೀತ್‌ ಅವರನ್ನು ನೆನಪು ಮಾಡಿಕೊಂಡ ನಟ ಪ್ರಮೋದ್‌,

“ಬಾಂಡ್‌ ರವಿ’ ಅಂದ್ರೆ, ಎಲ್ಲರಿಗೂ ಪುನೀತ್‌ ರಾಜಕುಮಾರ್‌ ನೆನಪಾಗುತ್ತಾರೆ. ನಮ್ಮ ಸಿನಿಮಾದ ಟೈಟಲ್‌ಗ‌ೂ ಅವರ ಪಾತ್ರವೇ ಸ್ಫೂರ್ತಿ. ನಮ್ಮ ಸಿನಿಮಾಕ್ಕೂ ಅವರ ಹಾರೈಕೆ, ಆಶೀರ್ವಾದ ಇರುತ್ತದೆ’ ಎಂದು ಪುನೀತ್‌ ರಾಜಕುಮಾರ್‌ ಮತ್ತು “ಬಾಂಡ್‌ ರವಿ’ ಬಾಂಡಿಂಗ್‌ ಬಗ್ಗೆ ಮಾತನಾಡಿದರು.

ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಪಿಎಫ್ಐ- ಎಸ್ ಡಿಪಿಐ ವಿರುದ್ಧ ಎನ್ಐಎ ಸಮರ: ರಾಜ್ಯದಲ್ಲಿ 75 ಮಂದಿ ವಶಕ್ಕೆ

“ಈ ಸಿನಿಮಾದ ಕಥೆ ಎಲ್ಲರಿಗೂ ಕನೆಕ್ಟ್ ಆಗುವಂತಿದೆ. “ಬಾಂಡ್‌ ರವಿ’ ಸಿನಿಮಾದ ಜೊತೆ ಎಲ್ಲರಿಗೂ ಒಂದು ಬಾಂಡಿಂಗ್‌ ಇದೆ. ಸಿನಿಮಾ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಮೇಲ್ನೋಟಕ್ಕೆ ಮಾಸ್‌ ಸಿನಿಮಾದಂತೆ ಕಂಡರೂ, ಒಳಗೆ ಬೇರೆಯದ್ದೇ ವಿಷಯವಿದೆ. ಆದಷ್ಟು ಬೇಗ ಜನರಿಗೆ ಸಿನಿಮಾ ತೋರಿಸಬೇಕೆಂಬ ಉತ್ಸಾಹದಲ್ಲಿದ್ದೇವೆ’ ಎಂಬುದು “ಬಾಂಡ್‌ ರವಿ’ ಬಳಗದ ಮಾತು.

“ಬಾಂಡ್‌ ರವಿ’ ಸಿನಿಮಾದಲ್ಲಿ ನಾಯಕ ಪ್ರಮೋದ್‌ ಅವರಿಗೆ ನಾಯಕಿಯಾಗಿ ಕಾಜಲ್‌ ಕುಂದರ್‌ ಜೋಡಿಯಾಗಿದ್ದಾರೆ. ಉಳಿದಂತೆ ಪ್ರಸನ್ನ, ಗೋವಿಂದೇ ಗೌಡ, ವಿಜಯ ಚೆಂಡೂರ್‌, ಪವನ್‌, ಮಿಮಿಕ್ರಿ ಗೋಪಿ, ಧರ್ಮ, ಸಂತೂ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರಜ್ವಲ್‌ ಎಸ್‌. ಪಿ ಕಥೆ, ಚಿತ್ರಕಥೆ ಬರೆದು “ಬಾಂಡ್‌ ರವಿ’ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದು, “ಲೈಫ್ ಲೈನ್‌ ಫಿಲಂಸ್‌’ ಬ್ಯಾನರಿನಲ್ಲಿ ನರಸಿಂಹ ಮೂರ್ತಿ ವಿ. ನಿರ್ಮಿಸಿರುವ ಈ ಸಿನಿಮಾಕ್ಕೆ ಮಲ್ಲಿಕಾರ್ಜುನ ಕಾಶಿ ಮತ್ತು ಕ್ಸೇವಿಯರ್‌ ಫ‌ರ್ನಾಂಡಿಸ್‌ ಸಹ ನಿರ್ಮಾಣವಿದೆ. ಚಿತ್ರಕ್ಕೆ ಕೆ. ಎಸ್‌ ಚಂದ್ರಶೇಖರ್‌ ಛಾಯಾಗ್ರಹಣ, ಅರ್ಜುನ್‌ ಸಂಕಲನವಿದೆ.

“ಬಾಂಡ್‌ ರವಿ’ ಸಿನಿಮಾದ ಐದು ಹಾಡುಗಳಿಗೆ ಮನೋಮೂರ್ತಿ ಸಂಗೀತ ಸಂಯೋಜಿಸಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ವಿಜಯ ಪ್ರಕಾಶ್‌ ಮೊದಲಾದವರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಜಯಂತ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್‌, ಚಿನ್ಮಯ್‌ ಭಾವಿಕೆರೆ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಬಿ. ಧನಂಜಯ್‌ ಹಾಡುಗಳಿಗೆ ನೃತ್ಯ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.