ಕೆಜಿಎಫ್ ಗರುಡನಿಗೆ “ಬಂಪರ್’ ಆಫರ್
Team Udayavani, Mar 10, 2020, 7:02 AM IST
“ಕೆಜಿಎಫ್’ ಚಿತ್ರದಲ್ಲಿ ಗರುಡ ಪಾತ್ರದ ಮೂಲಕ ಬೆಳಕಿಗೆ ಬಂದವರು ರಾಮಚಂದ್ರ ರಾಜು. ಆ ಚಿತ್ರ ಹಿಟ್ ಆಗುತ್ತಿದ್ದಂತೆ ರಾಮಚಂದ್ರ ರಾಜು ಹೆಸರು ಮರೆತು ಹೋಗಿ ಸಿನಿಪ್ರೇಮಿಗಳಲ್ಲಿ ಗರುಡ ಎಂದೇ ಕರೆಯಲ್ಪಡುತ್ತಿದ್ದಾರೆ. ಈಗ ಈ ಗರುಡನಿಗೆ ಬಂಪರ್ ಆಫರ್ ಸಿಕ್ಕಿದೆ. ಈ ಮೂಲಕ ಮತ್ತೂಮ್ಮೆ ತೆರೆಮೇಲೆ ಮಿಂಚಲಿದ್ದಾರೆ.
ಹೌದು, ಗರುಡ ಅವರು ಈಗ “ಬಂಪರ್’ ತಂಡ ಸೇರಿಕೊಂಡಿದ್ದಾರೆ. ಹರಿ ಸಂತೋಷ್ ನಿರ್ದೇಶನದಲ್ಲಿ ಮೂಡಿಬರಲಿರುವ “ಬಂಪರ್’ ಚಿತ್ರದಲ್ಲಿ ವಿಲನ್ ಆಗಿ ಗರುಡ ನಟಿಸಲಿದ್ದಾರೆ. ಖಡಕ್ ವಿಲನ್ ಆಗಿ ಸಿನಿಮಾದುದ್ದಕ್ಕೂ ಸಾಗಿಬರಲಿದ್ದಾರೆ. ಈ ಮೂಲಕ “ಬಂಪರ್’ ಒಂದು ಹೈವೋಲ್ಟೆಜ್ ಆ್ಯಕ್ಷನ್ ಸಿನಿಮಾವಾಗಿ ಮೂಡಿಬರುವುದು ಖಚಿತ.
ಧನ್ವೀರ್ ಈ ಚಿತ್ರದ ನಾಯಕ. ಸುನಿ ನಿರ್ದೇಶನದ “ಬಜಾರ್’ ಚಿತ್ರದ ಮೂಲಕ ಲಾಂಚ್ ಆದ ಧನ್ವೀರ್ ನಾಯಕರಾಗಿರುವ ನಟಿಸುತ್ತಿರುವ ಎರಡನೇ ಚಿತ್ರವಿದು. ಚಿತ್ರವನ್ನು ಸುಪ್ರೀತ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಭರಾಟೆ’ ಚಿತ್ರ ನಿರ್ಮಿಸಿರುವ ಸುಪ್ರೀತ್ ಈಗ “ಬಂಪರ್’ ನಿರೀಕ್ಷೆಯಲ್ಲಿದ್ದಾರೆ.
ಈ ನಡುವೆಯೇ ಸುಪ್ರೀತ್ ನಿರ್ಮಾಣದಲ್ಲಿ ಗಣೇಶ್ ನಾಯಕರಾಗಿರುವ “ಸಖತ್’ ಚಿತ್ರವೂ ಚಿತ್ರೀಕರಣದಲ್ಲಿದೆ. “ಬಂಪರ್’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಇದ್ದು, ಶಿವಸೇನಾ ಅವರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಸಂಗೀತ, ಕೆ.ಎಂ. ಪ್ರಕಾಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು