ಪೋಷಕರನ್ನು ನೋಡಲು ಹೋಗಲಾಗುತ್ತಿಲ್ಲ ….

ಬೆಳಗಾವಿ ಬೆಡಗಿ ಲಕ್ಷ್ಮೀ ರೈ ತೆರೆದಿಟ್ಟ ಪ್ರವಾಹ ಚಿತ್ರಣ

Team Udayavani, Aug 13, 2019, 3:04 AM IST

laxmi-rai

ಉತ್ತರ ಕರ್ನಾಟಕ ಭೀಕರ ಪ್ರವಾಹದ ಸುಳಿಗೆ ಅಲ್ಲಿನ ಬಹುತೇಕ ಎಲ್ಲಾ ಜನ ಸಾಮಾನ್ಯರ ಬದುಕು ಹೈರಾಣಾಗಿದೆ. ಪ್ರವಾಹದ ಹೊಡೆತಕ್ಕೆ ಬಡವ-ಬಲ್ಲಿದ, ಜನ ನಾಯಕರು, ಸ್ಟಾರ್‌ಗಳು, ಜನಸಾಮಾನ್ಯರು ಎಂಬ ಯಾವ ಬೇಧ-ಭಾವವೂ ಇಲ್ಲದೆ ಎಲ್ಲರೂ ನಲುಗಿ ಹೋಗಿದ್ದಾರೆ. ಇದಕ್ಕೆ ದಕ್ಷಿಣ ಭಾರತದ ಸ್ಟಾರ್‌ ನಟಿಯರ ಪೈಕಿ ಒಬ್ಬರಾಗಿರುವ ಲಕ್ಷ್ಮೀ ರೈ ಆಡಿರುವ ಮಾತುಗಳು ಕೈಗನ್ನಡಿ ಹಿಡಿದಿರುವಂತಿದೆ. ಬೆಳಗಾವಿ ಮೂಲದವರಾದ ಲಕ್ಷ್ಮೀ ರೈ ಮೊದಲು ಕನ್ನಡ ಚಿತ್ರರಂಗಕ್ಕೆ ನಂತರ ಇಲ್ಲಿಂದ ತಮಿಳು, ತೆಲುಗು ಚಿತ್ರರಂಗದತ್ತ ಮುಖ ಮಾಡಿದ ನಟಿ.

ಸದ್ಯ ಲಕ್ಷ್ಮೀ ರೈ ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಜನಪ್ರಿಯ ಸ್ಟಾರ್‌ ನಟಿಯರಲ್ಲಿ ಒಬ್ಬರು. ಈಗಲೂ ಲಕ್ಷ್ಮೀ ರೈ ಅವರ ಪೋಷಕರು ಇರುವುದು ಬೆಳಗಾವಿಯಲ್ಲಿ. ಹಾಗಾಗಿ ಆಗಾಗ್ಗೆ ಬೆಳಗಾವಿಗೆ ಹೋಗಿಬರುವ ಲಕ್ಷ್ಮೀ ರೈ ಅವರಿಗೆ ಈ ಬಾರಿ ಪ್ರವಾಹ ಅಲ್ಲಿಗೆ ಹೋಗದಂತ ಪರಿಸ್ಥಿತಿಯನ್ನು ಉಂಟು ಮಾಡಿದೆ. ಈ ಬಗ್ಗೆ ಮಾತನಾಡಿದ ಲಕ್ಷ್ಮೀ ರೈ, “ಉತ್ತರ ಕರ್ನಾಟಕದ ಜನರ ಸ್ಥಿತಿ ನೋಡಿದರೆ ಬೇಸರವಾಗುತ್ತದೆ. ನನ್ನ ಪೋಷಕರು ಕೂಡ ಬೆಳಗಾವಿಯಲ್ಲೇ ವಾಸವಿದ್ದಾರೆ. ನನಗೂ ಕೂಡ ಈಗ ಅಲ್ಲಿಗೆ ಹೋಗಲು ಆಗದಂತಹ ಸ್ಥಿತಿ ಇದೆ.

ನಾನು ಕೂಡ ಊರಿಗೆ ಹೋಗಬೇಕು ಎಂದು ಪ್ರಯತ್ನ ಪಟ್ಟೆ. ಆದ್ರೆ. ಪೋಷಕರು ಈಗ ಬರೋದು ಬೇಡ ಅಂತ ಹೇಳಿದ್ರು. ಅಲ್ಲಿಗೆ ಹೋಗಬೇಕು ಅಂದ್ರು ಈಗ ರಸ್ತೆ ಕೂಡ ಇಲ್ಲ. ಹಾಗಾಗಿ ಹೋಗಿಲ್ಲ. ಇದೊಂದು ಪ್ರಕೃತಿ ವಿಕೋಪ. ಹಾಗಾಗಿ ಇಲ್ಲಿ ಯಾರನ್ನೂ ದೂರಲಾಗುವುದಿಲ್ಲ. ಇದಕ್ಕೆ ಯಾರೂ ಜವಾಬ್ದಾರರಲ್ಲ. ಈಗ ಪ್ರವಾಹ ಸಂತ್ರಸ್ತರಿಗೆ ಬೇಕಾಗಿರುವುದು ಎಲ್ಲರ ನೆರವು ಮತ್ತು ಬೆಂಬಲ. ನಾನು ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತಿದ್ದೇನೆ.

ಸಾಧ್ಯವಾದಷ್ಟು ಎಲ್ಲರು ಮುಂದೆ ಬಂದು ಉತ್ತರ ಕರ್ನಾಟಕ ಜನರಿಗೆ ನೆರವಾಗಬೇಕು’ ಎಂದು ಕೇಳಿಕೊಂಡಿದ್ದಾರೆ. ಅಂದಹಾಗೆ, ಇತ್ತೀಚೆಗೆ “ಝಾನ್ಸಿ’ ಚಿತ್ರದ ಪತ್ರಿಕಾಗೋಷ್ಠಿಗೆ ಆಗಮಿಸಿದ್ದ ಲಕ್ಷ್ಮೀ ರೈ ಕರ್ನಾಟಕದಲ್ಲಿ ಪ್ರವಾಹ ಸಂತ್ರಸ್ತರ ಬಗ್ಗೆ ಮಾತಿಗಿಳಿದಾಗ ತಮ್ಮ ಪರಿಸ್ಥಿತಿಯನ್ನೂ ತೆರೆದಿಟ್ಟರು. ಒಟ್ಟಾರೆ ಲಕ್ಷ್ಮೀ ರೈ ಅವರ ಮಾತುಗಳು ಪ್ರವಾಹ ಎನ್ನುವುದು ಯಾರನ್ನೂ ಬಿಡುವುದಿಲ್ಲ. ಪ್ರಕೃತಿಯ ಮುಂದೆ ಎಲ್ಲರೂ ಮಂಡಿಯೂರಲೇಬೇಕು ಎನ್ನುವುದನ್ನು ನೆನಪಿಸುವಂತಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.