Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


Team Udayavani, May 6, 2024, 2:34 PM IST

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

ಬೆಂಗಳೂರು: ಇತ್ತೀಚೆಗೆ ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಥಿಯೇಟರ್‌ ನತ್ತ ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸ್ಟಾರ್‌ ನಟರ ಸಿನಿಮಾಗಳನ್ನು ನೋಡಲು ಒಂದಷ್ಟು ಜನ ಬರುತ್ತಾರೆ ವಿನಃ ಹೊಸಬರ ಸಿನಿಮಾಗಳು ಬಂದರೆ ಅಲ್ಲಿ ಬೆರಳಣಿಕೆಯಷ್ಟು ಜನ ಮಾತ್ರ ಸಿನಿಮಾ ನೋಡಲು ಬರುತ್ತಾರೆ. ಆ ಕಾರಣದಿಂದ ಬೆಂಗಳೂರಿನ ಅನೇಕ ಥಿಯೇಟರ್‌ ಬಾಗಿಲು ಮುಚ್ಚಿವೆ.

ಇದೀಗ ಈ ಸಾಲಿಗೆ ಮತ್ತೊಂದು ಥಿಯೇಟರ್‌ ಸೇರಿದೆ. ಬೆಂಗಳೂರಿನ ಸ್ಯಾಂಕಿ ರಸ್ತೆಯ, ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ‘ಕಾವೇರಿ’ ಚಿತ್ರಮಂದಿರ ಇನ್ಮುಂದೆ ಸಿನಿಮಾ ಪ್ರದರ್ಶನವನ್ನು ನಿಲ್ಲಿಸಲಿದೆ ಎಂದು ವರದಿಯಾಗಿದೆ.

ʼಕಾವೇರಿʼ ಚಿತ್ರಮಂದಿರಕ್ಕೆ ಕಳೆದ ಜನವರಿ 11ಕ್ಕೆ ಭರ್ತಿ 50 ವರ್ಷ ತುಂಬಿತ್ತು. ಈ ಸಂಭ್ರಮದಲ್ಲಿ ಗೋಲ್ಡನ್ ಜ್ಯುಬಿಲಿ ಆಚರಣೆಯನ್ನು ಮಾಡಲಾಗಿತ್ತು.

ಹಳೆಯ ಥಿಯೇಟರ್‌ ಗಳಲ್ಲಿ ಒಂದು:  ಕಾವೇರಿ ಥಿಯೇಟರ್‌ ಬೆಂಗಳೂರಿನ ಹಳೆಯ ಥಿಯೇಟರ್‌ ಗಳಲ್ಲಿ ಒಂದು. 1974, ಜನವರಿ 11ರಂದು ಈ ಚಿತ್ರಮಂದಿರ ಆರಂಭಗೊಂಡ ಈ ಥಿಯೇಟರ್‌ನಲ್ಲಿ ಡಾ. ರಾಜ್‌ ಕುಮಾರ್‌ ಅವರ ‘ಬಂಗಾರದ ಪಂಜರ’ ಮೊದಲು ಪ್ರದರ್ಶನಗೊಂಡ ಸಿನಿಮಾವಾಗಿತ್ತು ಎನ್ನಲಾಗಿದೆ.

ಸಿಂಗಲ್‌ ಸ್ಕ್ರೀನ್‌ ಆಗಿದ್ದರೂ, ವಿಶಾಲವಾದ ಜಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆಯನ್ನು ಹೊಂದಿರುವ ಈ ಥಿಯೇಟರ್‌ ನಲ್ಲಿ 1300ರಷ್ಟು ಸೀಟುಗಳಿವೆ.

ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಕಮಲ್‌ ಹಾಸನ್‌ ಅವರ ಸಿನಿಮಾಗಳು ಸೇರಿದಂತೆ ಅನೇಕ ಸಿನಿಮಾಗಳು ಇಲ್ಲಿ ಶತದಿನ ಪ್ರದರ್ಶನ ಕಂಡಿವೆ. ಕನ್ನಡ, ತಮಿಳು, ಹಿಂದೆ, ಮಲಯಾಳಂ ಜೊತೆಗೆ ಹಾಲಿವುಡ್ ನ ಅನೇಕ ಚಿತ್ರಗಳು ಇಲ್ಲಿ ಪ್ರದರ್ಶನಗೊಂಡಿವೆ.

ಬಂದ್‌ ಯಾಕೆ? : ಇತ್ತೀಚೆಗೆ ಜನ ಥಿಯೇಟರ್‌ ಗೆ ಬರುತ್ತಿಲ್ಲ. ಅಲ್ಪಸ್ವಲ್ಪ ಜನ ಬಂದು ಸಿನಿಮಾವನ್ನು ನೋಡುತ್ತಿದ್ದಾರೆ. ಇದರಿಂದ ಇಷ್ಟು ದೊಡ್ಡ ಕಟ್ಟಡವನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ. ಥಿಯೇಟರ್‌ ನ್ನು ಮುಚ್ಚಿ, ಈ ಜಾಗದಲ್ಲಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತದೆ ಎಂದು ವರದಿ ಆಗಿದೆ.

ಸಾಲು ಸಾಲು ಥಿಯೇಟರ್‌‌ ಗಳು ಬಂದ್..  ʼಕಾವೇರಿʼ ಥಿಯೇಟರ್‌ ನಲ್ಲಿ ಇತ್ತೀಚೆಗೆ ಹಿಂದಿ, ತೆಲುಗು ಹಾಗೂ ತಮಿಳು ಸಿನಿಮಾಗಳನ್ನೇ ಹೆಚ್ಚಾಗಿ ಪ್ರದರ್ಶನ ಮಾಡಲಾಗುತ್ತಿತ್ತು. ಹಿಂದಿಯ ‘ಬಡೇ ಮಿಯ್ಯಾ ಚೋಟೆ ಮಿಯ್ಯಾ’, ‘ಮೈದಾನ್’ ಈ ಎರಡು ಸಿನಿಮಾಗಳನ್ನು ಪ್ರದರ್ಶನ ಮಾಡಿದ ಬಳಿಕ ಚಿತ್ರಮಂದಿರವನ್ನು ಮುಚ್ಚಲಾಗಿದೆ.

ಬೆಂಗಳೂರಿನಲ್ಲಿ ಸಿನಿಮಾ ಥಿಯೇಟರ್‌ ಬಂದ್‌ ಆಗಿರುವುದು ಇದೇ ಮೊದಲಲ್ಲ. ಪ್ರೇಕ್ಷಕರು ಓಟಿಟಿಯತ್ತ ಹಾಗೂ ಮಲ್ಟಿಫ್ಲೆಕ್ಸ್‌ ನತ್ತ ಮುಖ ಮಾಡಿರುವುದರಿಂದ, ಜನಪ್ರಿಯ ಚಿತ್ರಮಂದಿರಗಳಾದ ಕಪಾಲಿ, ಸಾಗರ್, ಕಲ್ಪನಾ, ಮೆಜೆಸ್ಟಿಕ್, ಪಲ್ಲವಿ ಥಿಯೇಟರ್‌ ಗಳು ಈ ಹಿಂದೆಯೇ ಬಾಗಿಲು ಮುಚ್ಚಿವೆ.

 

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.