ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬರ್ತ್‌ಡೇ


Team Udayavani, Feb 16, 2021, 7:59 AM IST

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಬರ್ತ್‌ಡೇ

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಇಂದು (ಫೆ. 16) ಹುಟ್ಟುಹಬ್ಬದ ಸಂಭ್ರಮ. ಪ್ರತಿ ಬಾರಿ ದರ್ಶನ್‌ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗ ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದರು. ಆದರೆ ಈ ಬಾರಿ ಕೊರೊನಾ ಆತಂಕದ ಛಾಯೆ ಇನ್ನೂ ಮುಂದುವರೆದಿರುವುದರಿಂದ, ದರ್ಶನ್‌ ತಮ್ಮ ಹುಟ್ಟುಹಬ್ಬವನ್ನು ಆದಷ್ಟು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ತಮ್ಮ ಜನ್ಮದಿನ ಆಚರಣೆ ಬಗ್ಗೆ ಮಾಹಿತಿ ನೀಡುವ ಸಲುವಾಗಿಯೇ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ ಮೂಲಕ ಲೈವ್‌ ಬಂದಿದ್ದ ದರ್ಶನ್‌, ಈ ಬಾರಿ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬದ ಆಚರಣೆ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಅದರಂತೆ ಈ ಬಾರಿ ಆದಷ್ಟು ಸರಳವಾಗಿ ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಆಚರಿಸಲು ತಯಾರಿ ಮಾಡಿಕೊಂಡಿದ್ದಾರೆ.

ಸಮಾಜಮುಖೀ ಕಾರ್ಯಕ್ಕೆ ಅಭಿಮಾನಿಗಳ ತಯಾರಿ

ಈ ಬಾರಿ ಕೋವಿಡ್‌ ಆತಂಕ ಇನ್ನೂ ಮುಂದುವರೆದಿರುವುದರಿಂದ, ಆದಷ್ಟು ಸಮಾಜ ಮುಖೀಯಾಗಿ, ಸರಳವಾಗಿ ದರ್ಶನ್‌ ಅವರ ಜನ್ಮದಿನ ಆಚರಣೆ ನಡೆಯಲಿದೆ. ಅದರಂತೆ ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅಗತ್ಯ ದಿನಬಳಕೆ ಪದಾರ್ಥಗಳನ್ನು ನೀಡುವುದು, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು, ಉಚಿತ ವೈದ್ಯಕೀಯ ತಪಾಸಣೆ, ಔಷಧಿ ವಿತರಣೆ, ಅನ್ನದಾನ ಹೀಗೆ ಹಲವು ಸಮಾಜಮುಖೀ ಕಾರ್ಯಕ್ರಮಗಳನ್ನು ನಡೆಸಲು ಅಭಿಮಾನಿಗಳು ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ:ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿ

ವೈರಲ್‌ ಆಯ್ತು ಬರ್ತ್‌ಡೇ ಸಿಡಿಪಿ

ಫೆ. 16 ನಟ ದರ್ಶನ್‌ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಅವರ ಅಭಿಮಾನಿಗಳು ಕಾಮನ್‌ ಡಿಪಿಯೊಂದನ್ನು ವಿನ್ಯಾಸಗೊಳಿಸಿ, ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಬಿಡುಗಡೆಗೊಳಿಸಿದ್ದರು‌ . ಕಾಡಿನ ಮಧ್ಯದಲ್ಲಿ ಕ್ಯಾಮರಾ ಹಿಡಿದು ಕುಳಿತಿರುವ ದರ್ಶನ್‌ ಹಾಗೂ ಸುತ್ತಲೂ ವನ್ಯ ಜೀವಿಗಳಿರುವ ಸ್ಕೆಚ್‌ನಿಂದ ಮಾಡಲಾಗಿದ್ದ ಈ ಸಿಡಿಪಿ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗಿದೆ. ಫೇಸ್‌ಬುಕ್‌, ಟ್ವಿಟ್ಟರ್‌, ಇನ್ಸ್ಟಾಗ್ರಾಮ್‌, ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್‌ ಅಭಿಮಾನಿಗಳು, ಈ ಸಿಡಿಪಿಯನ್ನು ಹಂಚಿಕೊಂಡು ತಮ್ಮ ನೆಚ್ಚಿನ ನಟನಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ತಾರೆಯರಿಂದ ಹರಿದುಬರುತ್ತಿದೆ ವಿಶ್‌

ಇನ್ನು ದರ್ಶನ್‌ ಅವರ ಜನ್ಮದಿನಕ್ಕೂ ಒಂದು ದಿನ ಮುಂಚೆಯೇ ಸಾಮಾಜಿಕ ಜಾಲತಾಣಗಳ ಮೂಲಕ ದರ್ಶನ್‌ ಅವರಿಗೆ ಚಿತ್ರರಂಗದ ಅನೇಕ ತಾರೆಯರು, ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿಡಿಪಿ ಶೇರ್‌ ಮಾಡಿಕೊಳ್ಳುವ ಮೂಲಕ ದರ್ಶನ್‌ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ. ಅಭಿಮಾನಿಗಳ ಜೊತೆಗೆ ಸ್ಯಾಂಡಲ್‌ವುಡ್‌ ತಾರೆಯರಾದ ಶಾನ್ವಿ ಶ್ರೀವಾಸ್ತವ್‌, ನಟ ಕಂ ನಿರ್ದೇಶಕ ರಿಷಬ್‌ ಶೆಟ್ಟಿ, ನಿರ್ದೇಶಕ ಪವನ್‌ ಒಡೆಯರ್‌, ನಿರ್ಮಾಪಕಿ ಶೈಲಜಾ ನಾಗ್‌, ನಿರ್ದೇಶಕ ಸಿಂಪಲ್‌ ಸುನಿ, ನಟರಾದ “ನೆನಪಿರಲಿ’ ಪ್ರೇಮ್, ಡಾಲಿ ಧನಂಜಯ ಸೇರಿದಂತೆ ಅನೇಕರು ತಾರೆಯರು ದರ್ಶನ್‌ ಅವರಿಗೆ ಮುಂಚಿತವಾಗಿಯೇ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಗಮನ ಸೆಳೆದ ಜಗ್ಗೇಶ್‌ ಟ್ವಿಟ್ಟರ್‌

ಕೆಲವೇ ದಿನಗಳ ಹಿಂದಷ್ಟೇ ದರ್ಶನ್‌ ಹುಡುಗರ ಬಗ್ಗೆ ಜಗ್ಗೇಶ್‌ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಜಗ್ಗೇಶ್‌ ಮತ್ತು ದರ್ಶನ್‌ ಅಭಿಮಾನಿಗಳಿಗೆ ಸಂಬಂಧಿಸಿದಂತೆ ಸೋಶಿಯಲ್‌ ಮೀಡಿಯಾಗಳಲ್ಲಿ ಒಂದಷ್ಟು ಜಟಾಪಟಿ ಕೂಡ ನಡೆದಿತ್ತು. ಇದರ ಬೆನ್ನಲ್ಲೇ ಜಗ್ಗೇಶ್‌, ಮುಂಚಿತವಾಗಿಯೇ ತಮ್ಮ ಟ್ವಿಟ್ಟರ್‌ನಲ್ಲಿ ದರ್ಶನ್‌ ಬರ್ತ್‌ಡೇ ಸಿಡಿಪಿ ಹಾಕಿಕೊಂಡು, “ಹುಟ್ಟುಹಬ್ಬದ ಶುಭಾಶಯಗಳು. ನೂರ್ಕಾಲ ಸುಖವಾಗಿ ಬಾಳಿ’ ಎಂದು ದರ್ಶನ್‌ ಅವರಿಗೆ ಜನ್ಮದಿನದ ಶುಭ ಕೋರಿದ್ದಾರೆ. ಈ ಮೂಲಕ ದರ್ಶನ್‌ ಅಭಿಮಾನಿಗಳ ಕೋಪ ಶಮನಕ್ಕೆ ಮುಂದಾಗಿರುವ ಜಗ್ಗೇಶ್‌ ಟ್ವೀಟ್‌ ಎಲ್ಲರ ಗಮನ ಸೆಳೆಯಿತು.

ಇದನ್ನೂ ಓದಿ: ವ್ಯಾಪಿಸುತ್ತಿದೆ ವಂಚಕರ ಜಾಲ! ನಕಲಿ ಫೇಸ್‌ಬುಕ್‌, ಟ್ವಿಟರ್‌ ಖಾತೆ ಬಗ್ಗೆ ಇರಲಿ ಎಚ್ಚರ

ಹೊಸ ಸಿನಿಮಾಗಳ ಅನೌನ್ಸ್‌ ಸಾಧ್ಯತೆ!

ಸದ್ಯ ದರ್ಶನ್‌ ಅಭಿನಯದ “ರಾಬರ್ಟ್‌’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಇದರ ಹಿಂದೆಯೇ ದರ್ಶನ್‌ ಅಭಿನಯಿಸಲಿರುವ ಮುಂಬರುವ ಸಿನಿಮಾದ ಬಗ್ಗೆಯೂ ಬರ್ತ್‌ಡೇ ದಿನದಂದು ಅಧಿಕೃತ ಘೋಷಣೆ ಹೊರಬರುವ ಸಾಧ್ಯತೆ ಇದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು. “ರಾಜವೀರ ಮದಕರಿನಾಯಕ’, “ಸಿಂಧೂರ ಲಕ್ಷ್ಮಣ’ ಚಿತ್ರಗಳ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.