ಚಂಬಲ್‌ನಲ್ಲಿ ಸತೀಶ್‌ ನರ್ವಸ್‌ ಆಗಿದ್ದು ಯಾಕೆ ಗೊತ್ತಾ?


Team Udayavani, Dec 24, 2018, 3:59 PM IST

chambal108.jpg

ನೀನಾಸಂ ಸತೀಶ್‌ ನಾಯಕರಾಗಿರುವ “ಚಂಬಲ್‌’ ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆಯಾಗಿದೆ. ಟೀಸರ್‌ ನೋಡಿದವರಿಂದ ಇದೊಂದು ಸೂಕ್ಷ್ಮ ವಿಚಾರಗಳಿರುವ ಚಿತ್ರ ಎಂದು ಬಿಂಬಿತವಾಗಿದೆ. ಜೇಕಬ್‌ ವರ್ಗಿಸ್‌ ಈ ಚಿತ್ರದ ನಿರ್ದೇಶಕರು. ಈಗಾಗಲೇ ಜೇಕಬ್‌ “ಪೃಥ್ವಿ’ ಹಾಗೂ “ಸವಾರಿ 2′ ಚಿತ್ರಗಳನ್ನು ಮಾಡಿದ್ದು, ಆ ಎರಡೂ ಚಿತ್ರಗಳಿಗಿಂತ “ಚಂಬಲ್‌’ ಬೇರೆ ತರಹದ ಚಿತ್ರವಾಗುತ್ತದೆ ಎಂಬ ನಂಬಿಕೆ ಇದೆ. 

ನೀನಾಸಂ ಸತೀಶ್‌ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಕಥೆಯ ಸೂಕ್ಷ್ಮತೆ. ಈ ಚಿತ್ರ ಮಾಡುವಾಗ ಮೊದಲ ಬಾರಿಗೆ ಸತೀಶ್‌ ನರ್ವಸ್‌ ಆದರಂತೆ. “ನಾನು ಇಷ್ಟೊಂದು ಸಿನಿಮಾ ಮಾಡಿದರೂ ಯಾವತ್ತೂ ನರ್ವಸ್‌ ಆಗಿರಲಿಲ್ಲ. ಆದರೆ, ಈ ಸಿನಿಮಾ ಮಾಡುವಾಗ ತುಂಬಾ ನರ್ವಸ್‌ ಆದೆ. 10-15 ಟೇಕ್‌ ತಗೊಂಡರೂ ಓಕೆಯಾಗುತ್ತಿರಲಿಲ್ಲ. ಆದರೆ, ಕಾರಣ ನಿರ್ದೇಶಕರ ಕಲ್ಪನೆ. ತುಂಬಾ ಸೆಟಲ್ಡ್‌ ಆದ ನಟನೆ ಬೇಕಿತ್ತು. ಸಣ್ಣ ಸಣ್ಣ ಅಂಶಗಳನ್ನು ಕೂಡಾ ತುಂಬಾ ಗಮನದಲ್ಲಿರಿಸಿಕೊಂಡು ಹೀಗೆ ಬರಬೇಕೆಂದು ಹೇಳುತ್ತಿದ್ದರು.

ಹಾಗಾಗಿ, ನನಗೆ ಈ ಸಿನಿಮಾ ಹೊಸ ಅನುಭವ ಕೊಟ್ಟಿದೆ. ನಾನೇನಾದರೂ ಈ ಸಿನಿಮಾನಾ ಒಪ್ಪದೇ ಇದ್ದರೆ ದೊಡ್ಡ ನಷ್ಟವಾಗುತ್ತಿತ್ತು’ ಎಂದು “ಚಂಬಲ್‌’ ಬಗ್ಗೆ ಹೇಳಿಕೊಳ್ಳುತ್ತಾರೆ ಸತೀಶ್‌. ಎಲ್ಲಾ ಓಕೆ, “ಚಂಬಲ್‌’ ಶೀರ್ಷಿಕೆ ಕಥೆಗೆ ಹೇಗೆ ಹೊಂದಿಕೊಳ್ಳುತ್ತದೆ ಎಂದು ನೀವು ಕೇಳಬಹುದು. ಅದಕ್ಕೂ ಸತೀಶ್‌ ಉತ್ತರಿಸುತ್ತಾರೆ. “ಡಕಾಯಿತರಿರುವ ಜಾಗದಲ್ಲಿನ ಹುಡುಗನ ಕಥೆ. ಹಾಗಂತ ಚಂಬಲ್‌ ಕಣಿವೆಯ ಡಕಾಯಿತರಲ್ಲ. ನಗರದ ಡಕಾಯಿತರು’ ಎನುವುದು ಸತೀಶ್‌ ಮಾತು. 

ಚಿತ್ರದಲ್ಲಿ ಸೋನು ನಾಯಕಿಯಾಗಿ ನಟಿಸಿದ್ದಾರೆ. ಇನ್ನು ತನಗೆ ಯಾರೂ ಅವಕಾಶ ಕೊಡಲ್ಲ ಎಂದು ಬೇಜಾರಲ್ಲಿದ್ದ ಸಮಯದಲ್ಲಿ ನಿರ್ದೇಶಕ ಜೇಕಬ್‌ ವರ್ಗಿಸ್‌ ಕರೆ ಮಾಡಿ, “ಚಂಬಲ್‌’ ಸಿನಿಮಾದಲ್ಲಿ ಅವಕಾಶ ಕೊಟ್ಟರಂತೆ. ಮೊದಲ ಭೇಟಿಯಲ್ಲಿ ಸೋನು, “ಇದು ಯಾವ ತರಹದ ಸಿನಿಮಾ’ ಎಂದಾಗ, “ಎಲ್ಲರೂ ಕುಳಿತು ನೋಡುವಂತಹ ಸಿನಿಮಾ’ ಎಂದಷ್ಟೇ ಉತ್ತರಿಸಿದರಂತೆ ಜೇಕಬ್‌. ಚಿತ್ರದಲ್ಲಿ ಸೋನು ಸಾಮಾನ್ಯ ಹುಡುಗಿಯಾಗಿ ಕಾಣಿಸಿಕೊಂಡಿದ್ದು, ಹೆಚ್ಚು ಮೇಕಪ್‌ ಕೂಡಾ ಮಾಡಿಲ್ಲವಂತೆ. ರೋಜರ್‌ ನಾರಾಯಣ್‌ ಕೂಡಾ ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ. ಈ ಅವಕಾಶವನ್ನು ಜೇಕಬ್‌ ಅವರಲ್ಲಿ ಅವರೇ ಕೇಳಿಕೊಂಡು ಪಡೆದರಂತೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.