ಎಲ್ರ ಕಾಲೆಳೆಯುತ್ತೆ ಕಾಲ ಪ್ರಚಾರಕ್ಕೆ ರಾಗಿಣಿ ಸಾಥ್‌


Team Udayavani, Apr 9, 2023, 4:02 PM IST

ಎಲ್ರ ಕಾಲೆಳೆಯುತ್ತೆ ಕಾಲ ಪ್ರಚಾರಕ್ಕೆ ರಾಗಿಣಿ ಸಾಥ್‌

ಚಂದನ್‌ ಶೆಟ್ಟಿ ನಾಯಕರಾಗಿ ನಟಿಸಿರುವ “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದ್ದು, ಮತ್ತೂಂದೆಡೆ ನಿಧಾನವಾಗಿ ಚಿತ್ರತಂಡ, ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.

ಇದೇ ಏ. 10ರಂದು “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾದ ಸ್ಪೆಷಲ್‌ ಪ್ರಮೋಶನ್‌ ಸಾಂಗ್‌ ಬಿಡುಗಡೆಯಾಗಲಿದ್ದು, ಈ ಹಾಡಿನಲ್ಲಿ ನಟಿ ರಾಗಿಣಿ ದ್ವಿವೇದಿ ಗ್ಲಾಮರಸ್‌ ಲುಕ್‌ನಲ್ಲಿ ಹೆಜ್ಜೆ ಹಾಕಿದ್ದಾರೆ. ಇನ್ನು “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾದ ಪ್ರಮೋಶನ್‌ ಸಾಂಗ್‌ ಬಗ್ಗೆ ಮಾತನಾಡುವ ನಿರ್ದೇಶಕ ಸುಜಯ್‌ ಶಾಸ್ತ್ರಿ, “ಈಗಾಗಲೇ ನಮ್ಮ ಸಿನಿಮಾದ ಶೂಟಿಂಗ್‌ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಇದರ ನಡುವೆಯೇ ಸಿನಿಮಾದ ಪ್ರಮೋಶನ್‌ ಕೆಲಸಗಳಿಗೂ ಪ್ಲಾನ್‌ ಮಾಡಿಕೊಂಡಿದ್ದೇವೆ. ಅದರ ಮೊದಲ ಭಾಗವಾಗಿ ಈ ಪ್ರಮೋಶನ್‌ ಸಾಂಗ್‌ ರಿಲೀಸ್‌ ಆಗುತ್ತಿದೆ. ನಮ್ಮ ಸಿನಿಮಾದ ನಾಯಕ ಕಂ ಮ್ಯೂಸಿಕ್‌ ಡೈರೆಕ್ಟರ್‌ ಆಗಿರುವ ಚಂದನ್‌ ಶೆಟ್ಟಿ ಈ ಹಾಡಿಗೆ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದಾರೆ.

ಚಂದನ್‌ ಶೆಟ್ಟಿ ಮತ್ತು ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಈ ಹಾಡು ಸಿನಿಮಾದಲ್ಲೂ ಇರಲಿದ್ದು, ಮೊದಲಿಗೆ ಈ ಹಾಡನ್ನು ಪ್ರಮೋಶನ್‌ ಸಾಂಗ್‌ ಆಗಿ ಬಳಸಿಕೊಳ್ಳುತ್ತಿದ್ದೇವೆ. ಈ ಹಾಡಿನಲ್ಲಿ ಚಂದನ್‌ ಶೆಟ್ಟಿ ಮತ್ತು ರಾಗಿಣಿ ದ್ವಿವೇದಿ ಜೋಡಿಯಾಗಿ ಹೆಜ್ಜೆ ಹಾಕಿದ್ದಾರೆ. ತುಂಬ ಫ‌ನ್ನಿಯಾಗಿರುವಂತ ಮತ್ತು ಗ್ಲಾಮರಸ್‌ ಲುಕ್‌ನಲ್ಲಿರುವಂಥ ಸಾಂಗ್‌ ಇದಾಗಿದೆ’ ಎಂದು ವಿವರಣೆ ನೀಡುತ್ತಾರೆ. ಮೋಹನ್‌ ಬಿ. ಕೆರೆ ಸ್ಟುಡಿಯೋದಲ್ಲಿ ಹಾಕಲಾದ ವಿಶೇಷ ಸೆಟ್‌ನಲ್ಲಿ, ಸುಮಾರು ಮೂರು ದಿನಗಳ ಕಾಲ ಈ ಹಾಡನ್ನು ಚಿತ್ರೀಕರಿಸಲಾಗಿದೆ.

ಮುರಳಿ ಮಾಸ್ಟರ್‌ ಈ ಗೀತೆಗೆ ನೃತ್ಯ ಸಂಯೋಜಿಸಿದ್ದಾರೆ ಎಂಬುದು ಈ ಹಾಡಿನ ಬಗ್ಗೆ ನಿರ್ದೇಶಕ ಸುಜಯ್‌ ಶಾಸ್ತ್ರೀ ನೀಡುವ ಮಾಹಿತಿ. ಈಗಾಗಲೇ “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾದ “ಗೋಲ್ಡ್‌ ಫ್ಯಾಕ್ಟರಿ’ ಎಂಬ ಹಾಡು ಬಿಡುಗಡೆಯಾಗಿದ್ದು, ಈ ಗೀತೆಗೆ ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಿಡುಗಡೆಯಾಗಲಿರುವ ಹಾಡು ಅದಕ್ಕಿಂತ ವಿಭಿನ್ನವಾಗಿದ್ದು, ಮಾಸ್‌ ಆಡಿಯನ್ಸ್‌ಗೆ ಇಷ್ಟವಾಗುವಂತಿದೆ ಎಂಬುದು ಚಿತ್ರತಂಡದ ಮಾತು. “ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿಬರುತ್ತಿದ್ದು, ಸಿನಿಮಾದಲ್ಲಿ ಚಂದನ್‌ ಶೆಟ್ಟಿಗೆ ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ಜೋಡಿಯಾಗಿದ್ದಾರೆ.

ಉಷಾ ಗೋವಿಂದ ರಾಜು ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಕ್ಕೆ ಸುಜಯ್‌ ಶಾಸ್ತ್ರಿ ನಿರ್ದೇಶನವಿದೆ. ಸಿನಿಮಾ ಇದೇ ಜೂನ್‌ ವೇಳೆಗೆ ತೆರೆಗೆ ಬರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.