ಟಗರು ಸವಾಲು ಗೆದ್ದ ಚರಣ್‌ರಾಜ್‌


Team Udayavani, Jun 3, 2018, 11:51 AM IST

tagaru.jpg

ಶಿವರಾಜಕುಮಾರ್‌ ಅವರ “ಟಗರು’ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಇಂದು ಚಿತ್ರತಂಡ ಸಂತೋಷ್‌ ಚಿತ್ರಮಂದಿರದಲ್ಲಿ ಶತದಿನವನ್ನು ಸಂಭ್ರಮಿಸುತ್ತಿದೆ. ಚಿತ್ರದ ಗೆಲುವಿನಲ್ಲಿ ಹಾಡುಗಳ ಪಾತ್ರ ಕೂಡಾ ಮಹತ್ವದ್ದಾಗಿದೆ. “ಟಗರು’ ಚಿತ್ರದ ಹಾಡುಗಳು ಇನ್ನಿಲ್ಲದಂತೆ ಹಿಟ್‌ ಆಗಿದ್ದು ನಿಮಗೆ ಗೊತ್ತೇ ಇದೆ. ಚಿತ್ರಕ್ಕೆ ಸಂಗೀತ ನೀಡಿದವರು ಚರಣ್‌ರಾಜ್‌.  

ಚರಣ್‌ರಾಜ್‌ಗೂ “ಟಗರು’ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಆದರೆ, ಈ ಚಿತ್ರಕ್ಕೆ ಸಂಗೀತ ನೀಡೋದು ಒಂದು ಸವಾಲಿನ ಕೆಲಸವಾಗಿತ್ತಂತೆ. “ಟಗರು ಚಿತ್ರ ನನಗೆ ಒಳ್ಳೆಯ ಅನುಭವ ನೀಡಿತು. ಸೂರಿಯವರೊಂದಿಗೆ ಕೆಲಸ ಮಾಡಿದ ಕ್ಷಣಗಳು ಕೂಡಾ ಅದ್ಭುತ. ಅವರ ಆಲೋಚನೆಗಳು, ಸಂಗೀತದ ಬಗೆಗಿನ ಅವರ ಪ್ರೀತಿ, ಅವರು ಬೆಂಬಲಿಸುವ ರೀತಿಯಿಂದ ಒಳ್ಳೆಯ ಹಾಡುಗಳನ್ನು ನೀಡಲು ಸಾಧ್ಯವಾಯಿತು’ ಎಂದು “ಟಗರು’ ಕ್ಷಣಗಳನ್ನು ಮೆಲುಕು ಹಾಕುತ್ತಾರೆ ಚರಣ್‌ರಾಜ್‌.

ಮೊದಲೇ ಹೇಳಿದಂತೆ “ಟಗರು’ ಒಂದು ಸವಾಲಿನ ಕೆಲಸ ಎನ್ನಲು ಚರಣ್‌ರಾಜ್‌ ಮರೆಯುವುದಿಲ್ಲ. “ಸಾಮಾನ್ಯವಾಗಿ ಒಂದು ಸಂದರ್ಭ ಹೇಳಿ, ಅದಕ್ಕೆ ಹಾಡು ಮಾಡಲು ಹೇಳುತ್ತಾರೆ. ಆದರೆ, ಸೂರಿಯವರ ಶೈಲಿ ತುಂಬಾ ವಿಭಿನ್ನ. ಅವರು ಸಿಚುವೇಶನ್‌ ಹೇಳುತ್ತಿರಲಿಲ್ಲ. ಅದರ ಬದಲಾಗಿ ಮನುಷ್ಯ ಭಾವನೆಗಳನ್ನು ಹೇಳಿ, ಅದಕ್ಕೆ ಟ್ಯೂನ್‌ ಮಾಡಲು ಹೇಳುತ್ತಿದ್ದರು.

ಕೋಪ, ಪ್ರೀತಿ, ಬೇಸರ … ಹೀಗೆ ಭಾವನೆಗಳನ್ನು ಹೇಳುತ್ತಿದ್ದರು. ನಿಜಕ್ಕೂ ಅದೊಂದು ಸವಾಲಿನ ಕೆಲಸವಾಗಿತ್ತು. ಕಂಪೋಸ್‌ ಸಮಯದಲ್ಲಿ ಸೂರಿ ಹಾಗೂ ಜಯಂತ್‌ ಕಾಯ್ಕಿಣಿ ಇಬ್ಬರೂ ಜೊತೆಗೇ ಇರುತ್ತಿದ್ದರು. ಇಬ್ಬರು ದಿಗ್ಗಜರ ಮಧ್ಯೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತು’ ಎಂದು ಖುಷಿಯಿಂದ ಹೇಳುತ್ತಾರೆ ಚರಣ್‌. ಚರಣ್‌ರಾಜ್‌ ಎಂದರೆ ತುಂಬಾ ಸಾಫ್ಟ್. ಅವರ ಗುಣಕ್ಕೆ ತಕ್ಕಂತೆ ಅವರ ಸಂಗೀತ ಕೂಡಾ ಹೆಚ್ಚು ಮೆಲೋಡಿಯಾಗಿರುತ್ತದೆ,

ಮಾಸ್‌ ಸಾಂಗ್‌ಗಳನ್ನು ಅವರು ಮಾಡೋದಿಲ್ಲ ಎಂಬ ಭಾವನೆ ಅನೇಕರಲ್ಲಿತ್ತಂತೆ. ಆದರೆ, “ಟಗರು’ ಮೂಲಕ ಆ ಬ್ರಾಂಡ್‌ನಿಂದ ಹೊರಬಂದರಂತೆ. ಚರಣ್‌ರಾಜ್‌ ಕೂಡಾ ಪಕ್ಕಾ ಮಾಸ್‌, ಟಪ್ಪಾಂಗುಚ್ಚಿ ಹಾಡುಗಳನ್ನು ಮಾಡುತ್ತಾರೆಂಬುದನ್ನು “ಟಗರು’ ತೋರಿಸಿಕೊಡುವ ಮೂಲಕ ಬ್ರಾಂಡ್‌ ಆಗುವ ಅಪಾಯದಿಂದ ತಪ್ಪಿದರಂತೆ ಚರಣ್‌ರಾಜ್‌.

ಇನ್ನು, “ಟಗರು’ ಚಿತ್ರದ ಹಾಡುಗಳನ್ನು ಶಿವರಾಜಕುಮಾರ್‌ ಕೂಡಾ ಮೆಚ್ಚುವ ಜೊತೆಗೆ ಚರಣ್‌ರಾಜ್‌ ಅವರ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದರಂತೆ. ಇದು ಅವರ ವಿಶ್ವಾಸವನ್ನು ಮತ್ತಷ್ಟು ಹೆಚ್ಚುಗೊಳಿಸಿದ್ದು ಸುಳ್ಳಲ್ಲ. “ಟಗರು’ ನಂತರ ಅದೆಷ್ಟೋ ಸಿನಿಮಂದಿ ಚರಣ್‌ರಾಜ್‌ರಿಂದ ಸಂಗೀತ ಕೊಡಿಸಬೇಕು ಎಂದು ಪ್ರಯತ್ನಿಸಿದ್ದರು. ಆದರೆ, ಚರಣ್‌ರಾಜ್‌ ಮಾತ್ರ ಯಾರ ಕೈಗೂ ಸಿಕ್ಕಿರಲಿಲ್ಲ. ತಮ್ಮ ಪಾಡಿಗೆ ತಾವು ಒಪ್ಪಿಕೊಂಡ ಸಿನಿಮಾಗಳ ಕೆಲಸದಲ್ಲಿ ಬಿಝಿಯಾಗಿದ್ದರು.

ಹಾಗಾದರೆ ಚರಣ್‌ಗೆ ಹೆಚ್ಚು ಸಿನಿಮಾ ಮಾಡುವ ಆಸೆ ಇಲ್ಲವೇ ಎಂದು ನೀವು ಕೇಳಬಹುದು. “ನನಗೆ ನಾಲ್ಕು ದಿನಕ್ಕೊಂದರಂತೆ ಅವಕಾಶಗಳು ಬರುತ್ತಲೇ ಇರುತ್ತವೆ. ಅವಕಾಶಗಳು ಬಂತೆಂಬ ಕಾರಣಕ್ಕೆ ಎಲ್ಲವನ್ನು ಒಪ್ಪಿಕೊಂಡರೆ ಯಾವ ಸಿನಿಮಾಕ್ಕೂ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಅದಕ್ಕಿಂತ ಹೆಚ್ಚಾಗಿ ನನಗೆ ತುಂಬಾ ತುರ್ತಾಗಿ ಸಂಗೀತ ಮಾಡಿಕೊಡಲು ಬರೋದಿಲ್ಲ. ಸ್ವಲ್ಪ ತಡವಾದರೂ ನಾನು ಗುಣಮಟ್ಟದ ಹಾಡುಗಳನ್ನು ಕೊಡಬೇಕೆಂದುಕೊಂಡಿದ್ದೇನೆ’ ಎನ್ನುವುದು ಚರಣ್‌ರಾಜ್‌ ಮಾತು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.