ಚೇಸ್ ಗೆ ತುಳು ಕಾಮಿಡಿ ಕಿಂಗ್ ಬೋಳಾರ್ ಸಾಥ್!


Team Udayavani, Dec 16, 2019, 1:09 PM IST

16-December-9

ರಂಗಿತರಂಗ ಖ್ಯಾತಿಯ ರಾಧಿಕಾ ನಾರಾಯಣ್ ಮತ್ತು ಅವಿನಾಶ್ ನರಸಿಂಹರಾಜು ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಿತ್ರ ಚೇಸ್. ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಟೀಸರ್ ಮೂಲಕವೇ ಇದೀಗ ಎಲ್ಲೆಡೆ ಈ ಸಿನಿಮಾ ಬಗ್ಗೆ ಚರ್ಚೆಗಳಾಗುತ್ತಿವೆ. ಒಂದು ರೋಚಕ ಕ್ರೈಂ ಥ್ರಿಲ್ಲರ್ ಕಥಾ ಹಂದರದ ಸುಳಿವಿನೊಂದಿಗೆ, ಹೊಸತನದ ಕಂಪಿನೊಂದಿಗೆ ಮೂಡಿ ಬಂದಿರೋ ಈ ಟೀಸರ್ ಅಂತೂ ಇದೀಗ ವೈರಲ್ ಆಗಿ ಬಿಟ್ಟಿದೆ. ಯೂಟ್ಯೂಬ್‌ನಲ್ಲಿಯೂ ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳುತ್ತಾ ಸಾಗುತ್ತಿರುವ ಈ ಟೀಸರ್ ಮೂಲಕವೇ ಚೇಸ್ ಚಿತ್ರ ಮತ್ತಷ್ಟು ಕಳೆಗಟ್ಟಿಕೊಂಡಿದೆ. ಈ ಮೂಲಕವೇ ಚೇಸ್ ಭಾಗವಾಗಿರೋ ಕಲಾವಿದರ ಪಾತ್ರ ಪರಿಚಯವೂ ಆಗಿದೆ. ಆದರೆ ಅದರಲ್ಲಿ ಕಾಣಿಸದ ಮತ್ತೊಂದು ಪಾತ್ರದ ಸುಳಿವೀಗ ಚಿತ್ರತಂಡದ ಕಡೆಯಿಂದಲೇ ಜಾಹೀರಾಗಿದೆ.

ಅದು ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಖ್ಯಾತ ಹಾಸ್ಯನಟ ಅರವಿಂದ ಬೋಳಾರ್ ನಟಿಸಿದ್ದಾರೆನ್ನಲಾಗಿರೋ ಪಾತ್ರ. ಈ ಸಿನಿಮಾ ಸಸ್ಪೆನ್ಸ್ ಕ್ರೈಂ ಥ್ರಿಲ್ಲರ್ ಕಥಾನಕವನ್ನೊಳಗೊಂಡಿದೆ ಎಂಬ ವಿಚಾರ ಗೊತ್ತೇ ಇದೆ. ಇದರ ಜೊತೆಜೊತೆಗೇ ಕಾಮಿಡಿ ಕಚಗುಳಿ ಇಡುವಲ್ಲಿ ಅರವಿಂದ ಬೋಳಾರ್ ಪಾತ್ರವನ್ನು ಸೃಷ್ಟಿಸಲಾಗಿದೆ. ರಜನೀಕಾಂತ್ ನಟನೆಯ ರೋಬೋ 2.0 ಚಿತ್ರದಲ್ಲಿ ಅಕ್ಷಯ್ ಕುಮಾರ್ ನಿರ್ವಹಿಸಿದ್ದ ಪಕ್ಷಿರಾಜನ ಪಾತ್ರದಂಥಾದ್ದೇ ಕ್ಯಾರೆಕ್ಟರ್ ಒಂದರಲ್ಲಿ ಬೋಳಾರ್ ನಟಿಸಿದ್ದಾರಂತೆ. ಆ ಪಾತ್ರವೂ ಚೇಸ್ ಚಿತ್ರದ ಪ್ರಧಾನ ಆಕರ್ಷಣೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಅರವಿಂದ ಬೋಳಾರ್ ಇದ್ದಾರೆಂದರೆ ಅಲ್ಲಿ ಭರಪೂರ ನಗು ಇದ್ದೇ ಇರುತ್ತದೆಂದರ್ಥ. ಅದನ್ನು ನಿಜ ಮಾಡುವಂಥಾ ಸನ್ನಿವೇಶಗಳು ಈ ಸಿನಿಮಾದಲ್ಲಿ ಯಥೇಚ್ಛವಾಗಿವೆಯಂತೆ.

ಈ ಚಿತ್ರದಲ್ಲಿ ಅವಿನಾಶ್ ನರಸಿಂಹರಾಜು, ರಾಧಿಕಾ ನಾರಾಯಣ್, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಸುಶಾಂತ್ ಶೆಟ್ಟಿ, ಅರವಿಂದ್ ರಾವ್, ರಾಜೇಶ್ ನಟರಂಗ, ಪ್ರಮೋದ್ ಶೆಟ್ಟಿ, ವೀಣಾ ಸುಂದರ್, ಉಷಾ ಭಂಡಾರಿ, ಸುಂದರ್ ಮುಂತಾದವರ ತಾರಗಣವಿದೆ. ರೆಹಮಾನ್ ಹಾಸನ್ ಇನ್ನೊಂದು ಮುಖ್ಯ ಪಾತ್ರದಲ್ಲಿದ್ದಾರೆ. ಸಿಂಪ್ಲಿಫನ್ ಮೀಡಿಯಾ ನೆಟ್ವರ್ಕ್ ಪ್ರೈ ಲಿಮಿಟೆಡ್ ಬ್ಯಾನರ್‌ನಲ್ಲಿ ಅಡಿಯಲ್ಲಿ ಚೇಸ್ ಚಿತ್ರ ನಿರ್ಮಾಣಗೊಂಡಿದೆ. ಮಂಗಳೂರಿನವರೇ ಆದ ಮನೋಹರ್ ಸುವರ್ಣ, ಪ್ರದೀಪ್ ಶೆಟ್ಟಿ ಮತ್ತು ಪ್ರಶಾಂತ್ ಶೆಟ್ಟಿ ನಿರ್ಮಾಪಕರಾಗಿ, ಶಿವ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.