ಚೇಜ್ ಗಾಗಿ ಕಾದಿದ್ದವರಿಗೆ ಸಿಕ್ತು ಸಾರ್ಥಕವೆನಿಸುವ ಭರ್ಜರಿ ಟ್ರೈಲರ್

ಇದು ಚೇಜ್ ಮೇಲಿನ ನಿರೀಕ್ಷೆಗಳ ದುಪ್ಪಾಟ್ಟಾಗಿಸುವ ಟ್ರೈಲರ್

Team Udayavani, Jul 12, 2022, 7:31 PM IST

ಚೇಸ್ ಗಾಗಿ ಕಾದಿದ್ದವರಿಗೆ ಸಿಕ್ತು ಸಾರ್ಥಕವೆನಿಸುವ ಭರ್ಜರಿ ಟ್ರೈಲರ್

ಚೇಜ್.. ಸ್ಯಾಂಡಲ್ ವುಡ್ ನಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ. ಚಿತ್ರ ಘೋಷಣೆಯಾದಾಗಿನಿಂದ ಚೇಜ್ ನಲ್ಲಿ ಏನೋ ಸಖತ್ ಕಂಟೆಂಟ್ ಇದೆ ಅನ್ನೋ ಖಾತರಿಯನ್ನ ಚೇಜ್ ಮಾಡುವಂತೆ ಮಾಡಿದ್ದ ಚಿತ್ರ. ವಿಲೋಕ್ ಶೆಟ್ಟಿ ನಿರ್ದೇಶನದ ಚೇಜ್ ಟೈಟಲ್, ಪೋಸ್ಟರ್, ಟೀಸರ್,ಹಾಡು ಗಳಿಂದಲೇ ಭರಪೂರ ನಿರೀಕ್ಷೆಯನ್ನ ಹುಟ್ಟಿಸಿತ್ತು. ಈಗ ಇನ್ನೇನು ಇದೇ 15 ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ ಅನ್ನೋ ಸಮಾಧಾನ ಚಿತ್ರ ಪ್ರೇಮಿಗಳಲ್ಲಿ ಮೂಡಿತ್ತು. ಈ ಸಮಯದಲ್ಲೇ ಚಿತ್ರದ ಟ್ರೈಲರ್ ರಿಲೀಸ್ ಮಾಡಿರುವ ತಂಡ ಚೇಜ್ ಚಿತ್ರದ ಹೂರಣದ ಮೇಲೆ ಬೆಳಕು ಹಾಯಿಸಿ ಚಿತ್ರ ನೋಡುವ ಕುತೂಹಲಕ್ಕೆ ಕಿಚ್ಚು ಹೊತ್ತಿಸಿದೆ.

ಹೌದು ರಿಲೀಸ್ ಆದ ಟ್ರೈಲರ್ ಒಮ್ಮೆ ನೋಡಿದ್ರೆ, ಅಯ್ಯೋ ಪೂರ್ತಿ ಸಿನೆಮಾ ನೋಡಲು ಇನ್ನು ಎರಡ್ಮೂರು ದಿನ ಕಾಯಬೇಕಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಕ್ರೈಂ, ಸಸ್ಸೇನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚೇಜ್ ನ ಟ್ರೈಲರ್ ನಲ್ಲಿ ಮರ್ಡರ್ ಮಿಸ್ಟ್ರಿ ಕಥೆಯ ಎಳೆ ಮೈ ಜುಮ್ಮೆನಿಸುವಂತಿದೆ. ಮಿಸ್ಸಿಂಗ್, ಪೊಲೀಸ್, ಕಂಪ್ಲೇಂಟ್, ಕೊಲೆ, ಪ್ರೀತಿ-ಪ್ರೇಮ, ಪಾರ್ಟಿ ಇನ್ಯಾವುದೋ ಜಾಲ ಹೀಗೆ ಪಾತ್ರಗಳು ತೆರೆದುಕೊಂಡು ಚುರುಕಿನ ಸಂಭಾಷಣೆಯೊಂದಿಗೆ ಗಮನಸೆಳೆಯುತ್ತಿದೆ.  ಟ್ರೈಲರ್ ನೋಡಿದ್ಮೇಲಂತೂ ಚಿತ್ರ ನೋಡುವ ಕೌತುಕ ಹೆಚ್ಚೋದು ಸತ್ಯ. ಯಾಕಂದ್ರೆ ಕೇವಲ ಒಂದು ಟ್ರೈಲರ್ ನಲ್ಲೇ ಪ್ರೇಕ್ಷಕರನ್ನ ತುದಿ ಸೀಟಿಗೆ ತಂದು ಕೂರಿಸುವಂತಿರುವಾಗ ಇನ್ನೂ ಸಿನೆಮಾ ಹೇಗಿರಬೇಡ ಎಂಬ ಚರ್ಚೆಗಳು ಶುರುವಾಗಿವೆ. ಸದ್ಯ ಎಲ್ಲರಿಗೂ ಟ್ರೈಲರ್ ಇಷ್ಟವಾಗ್ತಿದ್ದು, ರಿಲೀಸ್ ಆದ ಕೆಲವೇ ಸಮಯದಲ್ಲಿ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಳ್ತಿದೆ. ಈ ಮೂಲಕ ಚಿತ್ರ ರಿಲೀಸ್ ಗೂ ಮೊದಲೇ ನಿರ್ದೇಶಕ ವಿಲೋಕ್ ಶೆಟ್ಟಿ ಸಿನೆಮಾ ಹಾಗು ತಂಡಕ್ಕೆ ಮೊದಲ ಜಯ ಸಿಕ್ಕಂತಾಗಿದೆ.

ತಾರಾಗಣದಲ್ಲಿರುವ ರಾಧಿಕಾ ನಾರಾಯಣ್, ಅವಿನಾಶ್ ನರಸಿಂಹರಾಜು, ರಾಜೇಶ್ ನಟರಂಗ, ಶೀತಲ್ ಶೆಟ್ಟಿ, ಸುಶಾಂತ್ ಪೂಜಾರಿ ಮುಂತಾದವರ ಪಾತ್ರಗಳೂ ಟ್ರೈಲರ್ ನಲ್ಲಿ ಕುತೂಹಲ ಹುಟ್ಟಿಸಿವೆ. ಸಿಂಪ್ಲಿಫನ್ ಮೀಡಿಯಾ ನೆಟ್ವರ್ಕ್ ಬ್ಯಾನರ್ ನಡಿ ಮನೋಹರ್ ಸುವರ್ಣ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಬಂಡವಾಳ ಹೂಡಿದ್ದು, ಶಿವ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ಕಾರ್ತಿಕ್ ಆಚಾರ್ಯ ಸಂಗೀತ ಸಾರಥ್ಯ, ಶ್ರೀ ಕ್ರೇಜಿ ಮೈಂಡ್ಸ್ ಸಂಕಲನ, ಅನಂತ ರಾಜ್ ಅರಸ್ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಪ್ರಮೋದ್ ಶೆಟ್ಟಿ, ಅರ್ಜುನ್ ಯೋಗೇಶ್ ರಾಜ್, ಸುಶಾಂತ್ ಪೂಜಾರಿ, ಸುಧಾ ಬೆಳವಾಡಿ, ರಾಜೇಶ್ ನಟರಂಗ, ಅರವಿಂದ್ ಬೋಳಾರ್, ರೆಹಮಾನ್ ಹಾಸನ್ ಒಳಗೊಂಡ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಇದೇ ಜುಲೈ 15 ಕ್ಕೆ ತೆರೆಯ ಮೇಲೆ ಅನಾವರಣಗೊಳ್ಳಲಿದೆ.

ಈ ಚಿತ್ರವನ್ನು ಮನೋಹರ್ ಸುವರ್ಣ ನಿರ್ಮಾಣ ಮಾಡಿದ್ದಾರೆ. ಪ್ರಶಾಂತ್ ಶೆಟ್ಟಿ ಮತ್ತು ಪ್ರದೀಪ್ ಶೆಟ್ಟಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಶಿವ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅನಂತ್ ರಾಜ್ ಅರಸ್ ಛಾಯಾಗ್ರಹಣ, ಕಾರ್ತಿಕ್ ಆಚಾರ್ಯ ಹಿನ್ನೆಲೆ ಸಂಗೀತ ಮತ್ತು ಸಂಗೀತ ನಿರ್ದೇಶನ, ಶ್ರೀ ಕ್ರೇಜಿಮೈಂಡ್ಸ್ ಸಂಕಲನ, ಅವಿನಾಶ್ ಎಸ್ ದಿವಾಕರ್ ಕಲಾ ನಿರ್ದೇಶನ, ಸುನೀಲ್ ಕಟಾಬು ಉಪ ನಿರ್ದೇಶನ, ಡಿಫರೆಂಟ್ ಡ್ಯಾನಿ, ಚೇತನ್ ರಮ್ಶಿ ಡಿಸೋಜಾ ಮತ್ತು ವಿನೋದ್ ಸಾಹಸ ನಿರ್ದೇಶನ, ವಿಜಯ ರಾಣಿ ಮತ್ತು ಸುಶಾಂತ್ ಪೂಜಾರಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಾಧಿಕಾ ನಾರಾಯಣ್, ಅವಿನಾಶ್, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಸುಶಾಂತ್ ಪೂಜಾರಿ, ರಾಜೇಶ್ ನಟರಂಗ, ಅರವಿಂದ್ ರಾವ್, ಪ್ರಮೋದ್ ಶೆಟ್ಟಿ, ಅರವಿಂದ್ ಬೋಳಾರ್, ಶ್ವೇತಾ ಸಂಜೀವುಲು, ರೆಹಮಾನ್ ಹಾಸನ್, ವೀಣಾ ಸುಂದರ್, ಸುಧಾ ಬೆಳವಾಡಿ, ಉಷಾ ಭಂಡಾರಿ, ಸುಂದರ್, ಸತೀಶ್ ಸಿದ್ಧಾರ್ಥ ಮಾಧ್ಯಮಿಕ, ಪ್ರಿಯಾ ಶಟಮರ್ಶನ್ ಮುಂತಾದವರ ಬೃಹತ್ ತಾರಾಗಣವಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.