ಹಿಮಾಲಯನ್‌ ಟ್ರಿಪ್‌ ಹೊರಟ ಮಕ್ಕಳು


Team Udayavani, Nov 15, 2017, 10:27 AM IST

himalayan.jpg

ಕನ್ನಡದಲ್ಲಿ ಮಕ್ಕಳ ಚಿತ್ರಗಳಿಗೆ ಬರವಿಲ್ಲ. ಹೊಸ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಆ ಸಾಲಿಗೆ ಈಗ “ದಿ ಗ್ರೇಟ್‌ ಹಿಮಾಲಯನ್‌ ಟ್ರಿಪ್‌’ ಎಂಬ ಹೊಸ ಚಿತ್ರವೂ ಸೇರಿದೆ. ಇದು ಶಾಲೆಯೊಂದರ 40 ಮಕ್ಕಳ ಸಾಹಸದ ಕಥೆ ಹೊಂದಿರುವ ಚಿತ್ರ. ಈಗಾಗಲೇ ಚಿತ್ರಕ್ಕೆ ಮುಹೂರ್ತ ನಡೆದು, ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ.

ಇತ್ತೀಚೆಗೆ ನಡೆದ ಮುಹೂರ್ತದಲ್ಲಿ ಕುಮಾರಿ ನಿವೇದಿತಾ ಕ್ಲಾಪ್‌ ಮಾಡಿದರೆ, ಚಂದ್ರಕಲಾ ನಟರಾಜ್‌ ಅವರು ಚಿತ್ರಕ್ಕೆ ಚಾಲನೆ ನೀಡಿದರು. ಉದಿತ್‌ ಕ್ಯಾಮೆರಾಗೆ ಚಾಲನೆ ನೀಡಿದರು. ಈ ಚಿತ್ರಕ್ಕೆ “ಭಾರತ ದರ್ಶನ ಮಕ್ಕಳ ಶೈಕ್ಷಣಿಕ ಪ್ರವಾಸ’ ಎಂಬ ಅಡಿಬರಹವಿದೆ. ಅಲ್ಲಿಗೆ ಇದು ಶೈಕ್ಷಣಿಕ ಪ್ರವಾಸದಲ್ಲಾಗುವ ಘಟನೆಗಳನ್ನು ಹೊಂದಿರುವ ಕಥೆ ಎಂಬುದನ್ನು ಪ್ರತ್ಯೇಕವಾಗಿ ಹೇಳುವಂತಿಲ್ಲ. 

ಈ ಚಿತ್ರಕ್ಕೆ ಕೆ.ಈಶ್ವರ್‌ ಎಲೆಕೊಪ್ಪ ನಿರ್ದೇಶಕರು. ಕಥೆ, ಚಿತ್ರಕಥೆ ಅವರದೇ. ಸಿ.ನಾಗೇಶ್‌(ಸಿಂಗಸಂದ್ರ) ಮತ್ತು ಕೆ. ಈಶ್ವರ್‌ ಚಿತ್ರದ ನಿರ್ಮಾಪಕರು. ಈ ಚಿತ್ರದ ಬಗ್ಗೆ ಹೇಳುವುದಾದರೆ, ಶಾಲೆಯೊಂದರ 40 ಜನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಮೂಲಕ ಭಾರತದ ಪ್ರಮುಖ ಪ್ರವಾಸಿ ತಾಣ ವೀಕ್ಷಿಸಲು ಹೊರಡುತ್ತಾರೆ. ಒಂದು ಬಸ್‌ ಮೂಲಕ ಪ್ರವಾಸ ಹೊರಡುವ ಮಕ್ಕಳು ಕೊನೆಗೆ ಹಿಮಾಲಯ ತಲುಪುತ್ತಾರೆ.

ಅಲ್ಲಿಂದ ಬರುವಾಗ ಮಕ್ಕಳಿದ್ದ ಬಸ್‌ ಅಪಾಯಕ್ಕೆ ಸಿಲುಕುತ್ತದೆ. ಅಲ್ಲಿ ಆರು ಜನ  ಮಕ್ಕಳು ತಮ್ಮ ಬುದ್ದಿ ಸಾಮರ್ಥ್ಯದಿಂದ ಆ ಬಸ್‌ನಲ್ಲಿದ್ದ  ಎಲ್ಲರನ್ನು ಹೇಗೆ ಕಾಪಾಡುತ್ತಾರೆ ಎಂಬುದು ಕಥೆ. ಮೈಸೂರು, ಗುರುವಾಯೂರು, ಮಧುರೈ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡುವ ಯೋಜನೆ ನಿರ್ದೇಶಕರದ್ದು. ಚಿತ್ರಕ್ಕೆ ಸಂತೋಷ್‌ ಛಾಯಾಗ್ರಾಹಕರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.