ಮಕ್ಕಳಿಗೆ ದಾರಿದೀಪ
Team Udayavani, Dec 4, 2018, 11:21 AM IST
ಕನ್ನಡದಲ್ಲಿ ಈಗಾಗಲೇ ಹಲವು ಮಕ್ಕಳ ಚಿತ್ರಗಳು ಬಂದಿವೆ. ಬರುತ್ತಲೂ ಇವೆ. ಆ ಸಾಲಿಗೆ “ದಾರಿದೀಪ’ ಚಿತ್ರ ಹೊಸ ಸೇರ್ಪಡೆ. ತುಪ್ಪದಕೊಳದ ಡಿ.ಸಿ.ಮೋಹನ್ ಮತ್ತು ಪ್ರಕಾಶ್ ನಿರ್ಮಾಣದ “ದಾರಿದೀಪ’ ಚಿತ್ರಕ್ಕೆ ಇತ್ತೀಚೆಗೆ ಹೊಳಲ್ಕೆರೆಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಯತಿರಾಜ್ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭಾಶಯ ಕೋರಿದರು.
ನಿರ್ಮಾಪಕರಾದ ಡಿ.ಸಿ.ಮೋಹನ್, ಪ್ರಕಾಶ್ ತುಪ್ಪದಕೊಳ್ಳ ಕ್ಯಾಮೆರಾಗೆ ಚಾಲನೆ ನೀಡಿದರು. ಹೇಮಂತ್ ನಾಯ್ಕ ಈ ಚಿತ್ರದ ನಿರ್ದೇಶಕರು. “ದಾರಿದೀಪ’ ಚಿತ್ರಕ್ಕೆ “ಕತ್ತಲಿನಿಂದ ಬೆಳಕಿನೆಡೆಗೆ’ ಎಂಬ ಅಡಿಬರಹವಿದೆ. ನಿರ್ದೇಶಕ ಹೇಮಂತ್ನಾಯ್ಕ ಅವರು ಈ ಹಿಂದೆ “ಗರಸ್ಯಾ’, “ಧರ್ಮಪುರ’ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಹೊಳಲ್ಕೆರೆ, ಚಿತ್ರದುರ್ಗ, ದಾವಣಗೆರೆ ಮುಂತಾದ ಕಡೆ 25ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ