ಹೊಸ ಚಿತ್ರ ಒಪ್ಪಿಕೊಂಡ ಚಿರಂಜೀವಿ ಸರ್ಜಾ 


Team Udayavani, Jan 30, 2019, 5:56 AM IST

chiranjeevi-sarja.jpg

ಚಿರಂಜೀವಿ ಸರ್ಜಾ ಇದೀಗ ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಶರಣ್‌ ಅಭಿನಯದ “ವಿಕ್ಟರಿ-2′ ಚಿತ್ರವನ್ನು ನಿರ್ಮಿಸಿದ್ದ ತರುಣ್‌ ಶಿವಪ್ಪ, ಚಿರಂಜೀವಿ ಸರ್ಜಾ ಅವರ ಅಭಿನಯದ ಹೊಸ ಸಿನಿಮಾಗೆ ನಿರ್ಮಾಪಕರು. ಇನ್ನು, ನವೀನ್‌ ಈ ಚಿತ್ರದ ನಿರ್ದೇಶಕರು. ಇವರಿಗೆ ಇದು ಮೊದಲ ಚಿತ್ರ. ಹಾಗಂತ, ಅನುಭವ ಇಲ್ಲವೆಂದಲ್ಲ, ಈ ಹಿಂದೆ ತರುಣ್‌ ಶಿವಪ್ಪ ನಿರ್ಮಾಣದ “ಮಾಸ್‌ ಲೀಡರ್‌’, “ರೋಜ್‌’ ಚಿತ್ರದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಹಿಂದೆ ಗಣೇಶ್‌ ಅಭಿನಯದ “ಸಂಗಮ’ ಮತ್ತು “ಕೂಲ್‌’ ಚಿತ್ರದಲ್ಲೂ ಕೆಲಸ ಮಾಡಿದ ಅನುಭವದ ಮೇಲೆ ಚಿರಂಜೀವಿ ಸರ್ಜಾ ಚಿತ್ರಕ್ಕೆ ಆ್ಯಕ್ಷನ್‌ -ಕಟ್‌ ಹೇಳುತ್ತಿದ್ದಾರೆ. ಈ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಫೆಬ್ರವರಿ 12 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಈ ಕುರಿತು ಮಾಹಿತಿ ನೀಡಿದ ನಿರ್ಮಾಪಕ ತರುಣ್‌ ಶಿವಪ್ಪ, “ಚಿರಂಜೀವಿ ಸರ್ಜಾ ಅವರೊಂದಿಗೆ ಈ ಹಿಂದೆಯೇ ಒಂದು ಚಿತ್ರ ಮಾಡಬೇಕೆಂಬ ಬಗ್ಗೆ ಯೋಚನೆ ಇತ್ತು.

ಆ ಕುರಿತು ಮಾತುಕತೆಯೂ ನಡೆದಿತ್ತು. ಈಗ ಅದಕ್ಕೆ ಕಾಲ ಕೂಡಿಬಂದಿದೆ. ಅಂದಹಾಗೆ, ಇದೊಂದು ಕಾಮನ್‌ ಮ್ಯಾನ್‌ ಕಥೆ. ಪ್ರತಿಯೊಬ್ಬರೂ ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬಹುದು ಎಂಬ ಅಂಶ ಚಿತ್ರದ ಹೈಲೈಟ್‌. ಇಲ್ಲೊಂದು ಕೇಬಲ್‌ ಕಥೆ ಕೂಡ ಸಾಗಲಿದೆ. ಯೂಥ್‌ಗೆ ಸ್ಫೂರ್ತಿಯಾಗುವಂತಹ ಕಥೆ ಇಲ್ಲಿದೆ. ಇಲ್ಲೂ ಕೂಡ ಪ್ರೀತಿ, ಸೆಂಟಿಮೆಂಟ್‌, ಗೆಳೆತನ ಇತ್ಯಾದಿ ವಿಷಯಗಳು ಇರಲಿವೆ.

ಇನ್ನು, ಕಥೆಯನ್ನು ತಮಿಳಿನ ವಿದ್ಯಾದರ್‌ ಬರೆದಿದ್ದಾರೆ. ಇವರು ತಮಿಳಿನ “ನ್ಯೂ’ ಚಿತ್ರ ನಿರ್ದೇಶಿಸಿದವರು. ಕನ್ನಡಕ್ಕೆ ಸರಿಹೊಂದುವ ಕಥೆ ಆಗಿರುವುದರಿಂದ, ಇದನ್ನೇ ಇಟ್ಟುಕೊಂಡು ಚಿತ್ರ ಮಾಡುತ್ತಿದ್ದೇನೆ. ಇನ್ನುಳಿದಂತೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ನಿರ್ಮಾಪಕ ತರುಣ್‌ ಶಿವಪ್ಪ. ಈ ಚಿತ್ರಕ್ಕೆ ಬಾಲು ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಇವರಿಗೆ ಕನ್ನಡದ ಮೊದಲ ಚಿತ್ರವಿದು.

ಈ ಹಿಂದೆ ಸ್ಟಂಟ್‌ ಮಾಸ್ಟರ್‌ ಪೀಟರ್‌ ಹೇನ್ಸ್‌ ನಿರ್ದೇಶನದ ಹಾಲಿವುಡ್‌ ಚಿತ್ರಕ್ಕೆ ಕ್ಯಾಮೆರಾ ವಿಭಾಗದಲ್ಲಿ ಕೆಲಸ ಮಾಡಿದ್ದವರು. ತಮಿಳಿನ ಅನೇಕ ಸ್ಟಾರ್‌ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇನ್ನುಳಿದಂತೆ “ಸಂಕಷ್ಟಕರ ಗಣಪತಿ’ ಚಿತ್ರಕ್ಕೆ ಸಂಗೀತ ನೀಡಿದ್ದ ಋತ್ವಿಕ್‌ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಚಿತ್ರದ ನಾಯಕಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕನ್ನಡದ ಹುಡುಗಿಯೇ ಇಲ್ಲಿ ನಾಯಕಿ ಎಂಬುದನ್ನು ಸ್ಪಷ್ಟಪಡಿಸುವ ನಿರ್ಮಾಪಕರು, ಸುಮಾರು 60 ದಿನಗಳ ಕಾಲ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎನ್ನುತ್ತಾರೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.